<p><strong>ಪಟ್ನಾ</strong>: ಚರ್ಚೆ ಮತ್ತು ಸಂವಾದ ಪ್ರಜಾಪ್ರಭುತ್ವದ ಭಾಗ. ಯಾವುದೇ ಹಂತದಲ್ಲೇ ಆಗಲಿ ಸದನದ ಘನತೆಯನ್ನು ಕಾಪಾಡಿಕೊಳ್ಳಬೇಕು ಎಂದು ಲೋಕಸಭೆ ಅಧ್ಯಕ್ಷ ಓಂ ಬಿರ್ಲಾ ಅವರು ಶುಕ್ರವಾರ ಅಭಿಪ್ರಾಯಪಟ್ಟಿದ್ದಾರೆ.</p>.<p>ಬಿಹಾರ ವಿಧಾನಸಭೆಯ ಸಂಸ್ಥಾಪನಾ ದಿನ ಕಾರ್ಯಕ್ರಮದಲ್ಲಿ ಕಾಗದರಹಿತ ಶಾಸಕಾಂಗ ಪ್ರಕ್ರಿಯೆಗಳ ರಾಷ್ಟ್ರೀಯ ‘ಇ–ವಿಧಾನ್’ ಆ್ಯಪ್ಗೆ (ನೆವಾ) ಚಾಲನೆ ನೀಡಿ ಅವರು ಮಾತನಾಡಿದರು.</p>.<p>‘ಚುನಾಯಿತ ಪ್ರತಿನಿಧಿಗಳು ಸದನದ ಶಿಷ್ಟಾಚಾರ ಪಾಲಿಸಬೇಕು. ಸಂಸದರು ಮತ್ತು ಶಾಸಕರಿಗೆ ತಮ್ಮ ನಿಲುವು ಮತ್ತು ಅಭಿಪ್ರಾಯ ವ್ಯಕ್ತಪಡಿಸುವ, ಹಂಚಿಕೊಳ್ಳುವ ಅಧಿಕಾರವಿದೆ. ಆದರೆ, ಆ ಸಂದರ್ಭದಲ್ಲಿ ಸದನದ ಘನತೆಯನ್ನೂ ಕಾಯ್ದುಕೊಳ್ಳಬೇಕು’ ಎಂದರು.</p>.<p>‘ಜವಾಬ್ದಾರಿಯುತ ಜನಪ್ರತಿನಿಧಿ ಬಲಿಷ್ಠ ಪ್ರಜಾಪ್ರಭುತ್ವದ ಅಡಿಪಾಯ ಇದ್ದಂತೆ. ಶಾಸನಸಭೆಗಳ ಕಾರ್ಯವಿಧಾನದ ನಿಯಮಗಳನ್ನು ಅವರು ಅರಿತುಕೊಳ್ಳಬೇಕಿದೆ’ ಎಂದು ಹೇಳಿದರು.</p>.<p>‘ಶಾಸನಸಭೆಗಳ ಸಭ್ಯತೆ ಕುಸಿಯುತ್ತಿರುವುದನ್ನು ಪ್ರಸ್ತುತ ದಿನಮಾನದಲ್ಲಿ ಕಾಣುತ್ತಿದ್ದೇವೆ. ಚರ್ಚೆ ಮತ್ತು ಸಂವಾದದ ಮೂಲಕ ಅಭಿಪ್ರಾಯ ಮಂಡಿಸುವ ಬದಲು ಘೋಷಣೆ ಕೂಗುವುದು, ಅಡ್ಡಿಪಡಿಸುವುದು, ಸಭಾಧ್ಯಕ್ಷರ ಪೀಠದ ಮುಂದಿನ ಭಾಗದತ್ತ ನುಗ್ಗುವುದು ಸರಿಯಲ್ಲ. ಇಂತಹ ನಡವಳಿಕೆ ನಿಲ್ಲಿಸಬೇಕು’ ಎಂದು ಓಂ ಬಿರ್ಲಾ ಮನವಿ ಮಾಡಿದರು.</p>.<p><strong>ನಿತೀಶ್, ತೇಜಸ್ವಿ ಗೈರು:</strong></p><p>ರಾಜ್ಯಸಭೆ ಉಪಸಭಾಪತಿ ಹರಿವಂಶ್ ನಾರಾಯಣ ಸಿಂಗ್, ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.</p>.<p>ಮುಖ್ಯಮಂತ್ರಿ ನಿತೀಶ್ ಕುಮಾರ್, ವಿರೋಧ ಪಕ್ಷದ ನಾಯಕ ತೇಜಸ್ವಿ ಯಾದವ್ ಗೈರಾಗಿದ್ದರು. ಪೂರ್ವನಿಗದಿತ ಕಾರ್ಯಕ್ರಮವಿದ್ದ ಕಾರಣ ಮುಖ್ಯಮಂತ್ರಿ ಸಭಾಧ್ಯಕ್ಷರ ಪೂರ್ವಾನುಮತಿ ಪಡೆದಿದ್ದರು ಎಂದು ಬಿಹಾರ ಸಚಿವ ವಿಜಯ್ಕುಮಾರ್ ಚೌಧರಿ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಟ್ನಾ</strong>: ಚರ್ಚೆ ಮತ್ತು ಸಂವಾದ ಪ್ರಜಾಪ್ರಭುತ್ವದ ಭಾಗ. ಯಾವುದೇ ಹಂತದಲ್ಲೇ ಆಗಲಿ ಸದನದ ಘನತೆಯನ್ನು ಕಾಪಾಡಿಕೊಳ್ಳಬೇಕು ಎಂದು ಲೋಕಸಭೆ ಅಧ್ಯಕ್ಷ ಓಂ ಬಿರ್ಲಾ ಅವರು ಶುಕ್ರವಾರ ಅಭಿಪ್ರಾಯಪಟ್ಟಿದ್ದಾರೆ.</p>.<p>ಬಿಹಾರ ವಿಧಾನಸಭೆಯ ಸಂಸ್ಥಾಪನಾ ದಿನ ಕಾರ್ಯಕ್ರಮದಲ್ಲಿ ಕಾಗದರಹಿತ ಶಾಸಕಾಂಗ ಪ್ರಕ್ರಿಯೆಗಳ ರಾಷ್ಟ್ರೀಯ ‘ಇ–ವಿಧಾನ್’ ಆ್ಯಪ್ಗೆ (ನೆವಾ) ಚಾಲನೆ ನೀಡಿ ಅವರು ಮಾತನಾಡಿದರು.</p>.<p>‘ಚುನಾಯಿತ ಪ್ರತಿನಿಧಿಗಳು ಸದನದ ಶಿಷ್ಟಾಚಾರ ಪಾಲಿಸಬೇಕು. ಸಂಸದರು ಮತ್ತು ಶಾಸಕರಿಗೆ ತಮ್ಮ ನಿಲುವು ಮತ್ತು ಅಭಿಪ್ರಾಯ ವ್ಯಕ್ತಪಡಿಸುವ, ಹಂಚಿಕೊಳ್ಳುವ ಅಧಿಕಾರವಿದೆ. ಆದರೆ, ಆ ಸಂದರ್ಭದಲ್ಲಿ ಸದನದ ಘನತೆಯನ್ನೂ ಕಾಯ್ದುಕೊಳ್ಳಬೇಕು’ ಎಂದರು.</p>.<p>‘ಜವಾಬ್ದಾರಿಯುತ ಜನಪ್ರತಿನಿಧಿ ಬಲಿಷ್ಠ ಪ್ರಜಾಪ್ರಭುತ್ವದ ಅಡಿಪಾಯ ಇದ್ದಂತೆ. ಶಾಸನಸಭೆಗಳ ಕಾರ್ಯವಿಧಾನದ ನಿಯಮಗಳನ್ನು ಅವರು ಅರಿತುಕೊಳ್ಳಬೇಕಿದೆ’ ಎಂದು ಹೇಳಿದರು.</p>.<p>‘ಶಾಸನಸಭೆಗಳ ಸಭ್ಯತೆ ಕುಸಿಯುತ್ತಿರುವುದನ್ನು ಪ್ರಸ್ತುತ ದಿನಮಾನದಲ್ಲಿ ಕಾಣುತ್ತಿದ್ದೇವೆ. ಚರ್ಚೆ ಮತ್ತು ಸಂವಾದದ ಮೂಲಕ ಅಭಿಪ್ರಾಯ ಮಂಡಿಸುವ ಬದಲು ಘೋಷಣೆ ಕೂಗುವುದು, ಅಡ್ಡಿಪಡಿಸುವುದು, ಸಭಾಧ್ಯಕ್ಷರ ಪೀಠದ ಮುಂದಿನ ಭಾಗದತ್ತ ನುಗ್ಗುವುದು ಸರಿಯಲ್ಲ. ಇಂತಹ ನಡವಳಿಕೆ ನಿಲ್ಲಿಸಬೇಕು’ ಎಂದು ಓಂ ಬಿರ್ಲಾ ಮನವಿ ಮಾಡಿದರು.</p>.<p><strong>ನಿತೀಶ್, ತೇಜಸ್ವಿ ಗೈರು:</strong></p><p>ರಾಜ್ಯಸಭೆ ಉಪಸಭಾಪತಿ ಹರಿವಂಶ್ ನಾರಾಯಣ ಸಿಂಗ್, ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.</p>.<p>ಮುಖ್ಯಮಂತ್ರಿ ನಿತೀಶ್ ಕುಮಾರ್, ವಿರೋಧ ಪಕ್ಷದ ನಾಯಕ ತೇಜಸ್ವಿ ಯಾದವ್ ಗೈರಾಗಿದ್ದರು. ಪೂರ್ವನಿಗದಿತ ಕಾರ್ಯಕ್ರಮವಿದ್ದ ಕಾರಣ ಮುಖ್ಯಮಂತ್ರಿ ಸಭಾಧ್ಯಕ್ಷರ ಪೂರ್ವಾನುಮತಿ ಪಡೆದಿದ್ದರು ಎಂದು ಬಿಹಾರ ಸಚಿವ ವಿಜಯ್ಕುಮಾರ್ ಚೌಧರಿ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>