<p><strong>ಜಮ್ಮು:</strong> ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ (63) ಹತ್ಯೆಗೆ ಯತ್ನ ನಡೆದ ಒಂದು ವಾರದಲ್ಲೇ, ಶ್ರೀನಗರದ ನ್ಯಾಷನಲ್ ಕಾನ್ಫರೆನ್ಸ್ (ಎನ್ಸಿ) ಪ್ರಧಾನ ಕಚೇರಿಗೆ ನೀಡಿದ್ದ ಭದ್ರತೆಯನ್ನು ವಾಪಸ್ ಪಡೆದುಕೊಂಡಿರುವ ಬಗ್ಗೆ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.</p>.<p>ಮಾರ್ಚ್ 11ರಂದು ನಡೆದ ಗುಂಡಿನ ದಾಳಿಯಲ್ಲಿ, ಫಾರೂಕ್ ಅಬ್ದುಲ್ಲಾ ಕೂದಲೆಳೆ ಅಂತರದಲ್ಲಿ ಪಾರಾಗಿದ್ದರು. </p>.<p class="title">‘ಶ್ರೀನಗರದ ನವಾಯಿ ಸುಬುಹ್ ಸಂಕೀರ್ಣದಲ್ಲಿರುವ ನ್ಯಾಷನಲ್ ಕಾನ್ಫರೆನ್ಸ್ ಕಚೇರಿಗೆ ಸಾಮಾನ್ಯವಾಗಿ ವಾರದಲ್ಲಿ ಎರಡರಿಂದ ಮೂರು ದಿನ ಫಾರೂಕ್ ಅಬ್ದುಲ್ಲಾ ಭೇಟಿ ನೀಡುತ್ತಾರೆ. ಭದ್ರತೆಯನ್ನು ಪೂರ್ಣ ಪ್ರಮಾಣದಲ್ಲಿ ವಾಪಸ್ ಪಡೆದಿರುವುದನ್ನು ಅರಗಿಸಿಕೊಳ್ಳುವುದು ಕಷ್ಟ’ ಎಂದು ಒಮರ್ ಅಬ್ದುಲ್ಲಾ ಇಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದರು. </p>.<p class="title">ಎನ್ಸಿ ಶಾಸಕರು ವಿಧಾನಸಭೆಯಲ್ಲಿ ಮಂಗಳವಾರ ಈ ವಿಷಯ ಪ್ರಸ್ತಾಪಿಸಿದ್ದು, ಅರ್ಧ ಗಂಟೆ ಚರ್ಚೆಯೂ ನಡೆಯಿತು. ‘ಜಮ್ಮು ಮತ್ತು ಕಾಶ್ಮೀರವನ್ನು ‘ಅಪಾಯ ಮುಕ್ತ’ ಎಂದು ಘೋಷಿಸಿ, ಇಲ್ಲವೇ ಎಲ್ಲರಿಗೂ ಭದ್ರತೆ ಖಾತರಿಪಡಿಸಿ’ ಎಂದು ಸ್ಪೀಕರ್ ಅಬ್ದುಲ್ ರಹೀಮ್ ರಾಥರ್ ಅಧಿಕಾರಿಗಳಿಗೆ ಸೂಚಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜಮ್ಮು:</strong> ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ (63) ಹತ್ಯೆಗೆ ಯತ್ನ ನಡೆದ ಒಂದು ವಾರದಲ್ಲೇ, ಶ್ರೀನಗರದ ನ್ಯಾಷನಲ್ ಕಾನ್ಫರೆನ್ಸ್ (ಎನ್ಸಿ) ಪ್ರಧಾನ ಕಚೇರಿಗೆ ನೀಡಿದ್ದ ಭದ್ರತೆಯನ್ನು ವಾಪಸ್ ಪಡೆದುಕೊಂಡಿರುವ ಬಗ್ಗೆ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.</p>.<p>ಮಾರ್ಚ್ 11ರಂದು ನಡೆದ ಗುಂಡಿನ ದಾಳಿಯಲ್ಲಿ, ಫಾರೂಕ್ ಅಬ್ದುಲ್ಲಾ ಕೂದಲೆಳೆ ಅಂತರದಲ್ಲಿ ಪಾರಾಗಿದ್ದರು. </p>.<p class="title">‘ಶ್ರೀನಗರದ ನವಾಯಿ ಸುಬುಹ್ ಸಂಕೀರ್ಣದಲ್ಲಿರುವ ನ್ಯಾಷನಲ್ ಕಾನ್ಫರೆನ್ಸ್ ಕಚೇರಿಗೆ ಸಾಮಾನ್ಯವಾಗಿ ವಾರದಲ್ಲಿ ಎರಡರಿಂದ ಮೂರು ದಿನ ಫಾರೂಕ್ ಅಬ್ದುಲ್ಲಾ ಭೇಟಿ ನೀಡುತ್ತಾರೆ. ಭದ್ರತೆಯನ್ನು ಪೂರ್ಣ ಪ್ರಮಾಣದಲ್ಲಿ ವಾಪಸ್ ಪಡೆದಿರುವುದನ್ನು ಅರಗಿಸಿಕೊಳ್ಳುವುದು ಕಷ್ಟ’ ಎಂದು ಒಮರ್ ಅಬ್ದುಲ್ಲಾ ಇಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದರು. </p>.<p class="title">ಎನ್ಸಿ ಶಾಸಕರು ವಿಧಾನಸಭೆಯಲ್ಲಿ ಮಂಗಳವಾರ ಈ ವಿಷಯ ಪ್ರಸ್ತಾಪಿಸಿದ್ದು, ಅರ್ಧ ಗಂಟೆ ಚರ್ಚೆಯೂ ನಡೆಯಿತು. ‘ಜಮ್ಮು ಮತ್ತು ಕಾಶ್ಮೀರವನ್ನು ‘ಅಪಾಯ ಮುಕ್ತ’ ಎಂದು ಘೋಷಿಸಿ, ಇಲ್ಲವೇ ಎಲ್ಲರಿಗೂ ಭದ್ರತೆ ಖಾತರಿಪಡಿಸಿ’ ಎಂದು ಸ್ಪೀಕರ್ ಅಬ್ದುಲ್ ರಹೀಮ್ ರಾಥರ್ ಅಧಿಕಾರಿಗಳಿಗೆ ಸೂಚಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>