<p><strong>ಜಮ್ಮು:</strong> ಅಮೆರಿಕ–ಇರಾನ್ ನಡುವಿನ ಇತ್ತೀಚಿನ ಕದನ ವಿರಾಮದ ಫಲಿತಾಂಶದ ಬಗ್ಗೆ ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಪ್ರಶ್ನೆ ಎತ್ತಿದ್ದಾರೆ. ಸುಮಾರು 40 ದಿನಗಳ ಕಾಲ ನಡೆದ ಸಂಘರ್ಷದ ಬಳಿಕ ಅಮೆರಿಕ ಏನನ್ನು ಸಾಧಿಸಿತು ಎಂದು ಅವರು ಕೇಳಿದ್ದಾರೆ.</p><p>ಯುದ್ಧವಿರಾಮ, ಹೊರ್ಮುಜ್ ಜಲಸಂಧಿಯನ್ನು ಮತ್ತೆ ತೆರೆಯುವ ಬಗ್ಗೆ ಪ್ರತಿಕ್ರಿಯಿಸಿದ ಅಬ್ದುಲ್ಲಾ, ಯುದ್ಧ ಶುರುವಾಗುವ ಮುನ್ನವೇ ಆ ಮಾರ್ಗವು ಎಲ್ಲರಿಗೂ ಮುಕ್ತವಾಗಿಯೇ ಲಭ್ಯವಿತ್ತು. ಹೀಗಾಗಿ, ಈ 39 ದಿನಗಳ ಯುದ್ಧದಿಂದ ಅಮೆರಿಕ ಏನು ಸಾಧಿಸಿತು? ಎಂದು ಎಕ್ಸ್ ಖಾತೆಯಲ್ಲಿ #UnjustWar ಹ್ಯಾಶ್ಟ್ಯಾಗ್ ಜೊತೆಗೆ ಪ್ರಶ್ನಿಸಿದ್ದಾರೆ.</p><p>ಇರಾನ್, ಅಮೆರಿಕ ಮತ್ತು ಇಸ್ರೇಲ್ ನಡುವೆ ಪಶ್ಚಿಮ ಏಷ್ಯಾದಲ್ಲಿ ನಡೆದ ಈ ಸಂಘರ್ಷವು ಜಾಗತಿಕ ಇಂಧನ ಮಾರುಕಟ್ಟೆಗೆ ಅಡ್ಡಿಪಡಿಸಿತ್ತು. ಮಂಗಳವಾರ, ಎರಡು ವಾರಗಳ ಯುದ್ಧ ವಿರಾಮಕ್ಕೆ ಎರಡೂ ದೇಶಗಳು ಒಪ್ಪಿಗೆ ಸೂಚಿಸಿದ್ದು, ಹೊರ್ಮುಜ್ ಜಲಸಂಧಿ ತೆರೆಯಲು ನಿರ್ಧರಿಸಲಾಗಿದೆ. </p><p>ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್ನನ್ನು ನಾಶಮಾಡುವ ನಿರ್ಧಾರದಿಂದ ಹಿಂದೆ ಸರಿದುದ್ದು, ಇರಾನ್ ಸಹ ದಾಳಿ ನಿಲ್ಲಿಸಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜಮ್ಮು:</strong> ಅಮೆರಿಕ–ಇರಾನ್ ನಡುವಿನ ಇತ್ತೀಚಿನ ಕದನ ವಿರಾಮದ ಫಲಿತಾಂಶದ ಬಗ್ಗೆ ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಪ್ರಶ್ನೆ ಎತ್ತಿದ್ದಾರೆ. ಸುಮಾರು 40 ದಿನಗಳ ಕಾಲ ನಡೆದ ಸಂಘರ್ಷದ ಬಳಿಕ ಅಮೆರಿಕ ಏನನ್ನು ಸಾಧಿಸಿತು ಎಂದು ಅವರು ಕೇಳಿದ್ದಾರೆ.</p><p>ಯುದ್ಧವಿರಾಮ, ಹೊರ್ಮುಜ್ ಜಲಸಂಧಿಯನ್ನು ಮತ್ತೆ ತೆರೆಯುವ ಬಗ್ಗೆ ಪ್ರತಿಕ್ರಿಯಿಸಿದ ಅಬ್ದುಲ್ಲಾ, ಯುದ್ಧ ಶುರುವಾಗುವ ಮುನ್ನವೇ ಆ ಮಾರ್ಗವು ಎಲ್ಲರಿಗೂ ಮುಕ್ತವಾಗಿಯೇ ಲಭ್ಯವಿತ್ತು. ಹೀಗಾಗಿ, ಈ 39 ದಿನಗಳ ಯುದ್ಧದಿಂದ ಅಮೆರಿಕ ಏನು ಸಾಧಿಸಿತು? ಎಂದು ಎಕ್ಸ್ ಖಾತೆಯಲ್ಲಿ #UnjustWar ಹ್ಯಾಶ್ಟ್ಯಾಗ್ ಜೊತೆಗೆ ಪ್ರಶ್ನಿಸಿದ್ದಾರೆ.</p><p>ಇರಾನ್, ಅಮೆರಿಕ ಮತ್ತು ಇಸ್ರೇಲ್ ನಡುವೆ ಪಶ್ಚಿಮ ಏಷ್ಯಾದಲ್ಲಿ ನಡೆದ ಈ ಸಂಘರ್ಷವು ಜಾಗತಿಕ ಇಂಧನ ಮಾರುಕಟ್ಟೆಗೆ ಅಡ್ಡಿಪಡಿಸಿತ್ತು. ಮಂಗಳವಾರ, ಎರಡು ವಾರಗಳ ಯುದ್ಧ ವಿರಾಮಕ್ಕೆ ಎರಡೂ ದೇಶಗಳು ಒಪ್ಪಿಗೆ ಸೂಚಿಸಿದ್ದು, ಹೊರ್ಮುಜ್ ಜಲಸಂಧಿ ತೆರೆಯಲು ನಿರ್ಧರಿಸಲಾಗಿದೆ. </p><p>ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್ನನ್ನು ನಾಶಮಾಡುವ ನಿರ್ಧಾರದಿಂದ ಹಿಂದೆ ಸರಿದುದ್ದು, ಇರಾನ್ ಸಹ ದಾಳಿ ನಿಲ್ಲಿಸಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>