<p><strong>ನವದೆಹಲಿ:</strong> ಗಡಿ ನಿಯಂತ್ರಣ ರೇಖೆಯಲ್ಲಿ (ಎಲ್ಒಸಿ) ಭಾರತ ಹಾಗೂ ಪಾಕಿಸ್ತಾನ ಸೈನ್ಯಗಳ ನಡುವಣ ಕದನ ವಿರಾಮವು 100ನೇ ದಿನಕ್ಕೆ ಕಾಲಿಡುತ್ತಿರುವಂತೆಯೇ ಭೂ ಸೇನಾ ಮುಖ್ಯಸ್ಥ ಲೆಫ್ಟಿನೆಂಟ್ ಜನರಲ್ ಮನೋಜ್ ಮುಕುಂದ್ ನರವಾಣೆ ಅವರು ಬುಧವಾರದಿಂದ ಎರಡು ದಿನಗಳ ಭೇಟಿ ಹಮ್ಮಿಕೊಂಡಿದ್ದಾರೆ.</p>.<p>ಗಡಿಯಲ್ಲಿ ಪರಿಸ್ಥಿತಿಯನ್ನು ಅವಲೋಕಿಸಲಿರುವ ಸೇನಾ ಮುಖ್ಯಸ್ಥರು ಕಣಿವೆಯಲ್ಲಿ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆ ಕುರಿತು ಪರಿಶೀಲಿಸಲಿದ್ದಾರೆ.</p>.<p>ಭಾರತ ಹಾಗೂ ಪಾಕಿಸ್ತಾನ ನಡುವಣ ಕದನ ವಿರಾಮ ಒಪ್ಪಂದವು ಫೆಬ್ರವರಿ ತಿಂಗಳ ಕೊನೆಯ ವಾರದಲ್ಲಿ ಎರಡೂ ಸೇನೆಗಳ ಮಿಲಿಟರಿ ಕಾರ್ಯಾಚರಣೆಯ ಮಹಾ ನಿರ್ದೇಶಕರ (ಡಿಜಿಎಂಒ) ಮಾತುಕತೆ ಮೂಲಕ ಪಾಲನೆ ಮಾಡಲಾಗಿತ್ತು. ಅಲ್ಲಿಂದ ಬಳಿಕ ಉಭಯ ದೇಶಗಳು ಕದನ ವಿರಾಮ ನಿಯಮವನ್ನು ಉಲ್ಲಂಘಿಸಿಲ್ಲ.</p>.<p>ಇದನ್ನೂ ಓದಿ:<a href="https://www.prajavani.net/india-news/govt-broadens-rules-that-bar-retired-officials-from-publishing-sensitive-information-835399.html" itemprop="url">ನಿವೃತ್ತಿ ನಂತರ ‘ಸೂಕ್ಷ್ಮ ವಿಚಾರ’ ಹಂಚಿಕೆ ಮೇಲೆ ನಿರ್ಬಂಧ: ಕೇಂದ್ರ ಸರ್ಕಾರ </a></p>.<p>ಸೇನಾ ಮುಖ್ಯಸ್ಥರು ಸೇನೆಯ ಇತರ ಉನ್ನತ ಕಮಾಂಡರ್ಗಳ ಜೊತೆಗೆ ಕಣಿವೆಯಲ್ಲಿ ಭಯೋತ್ಪಾದನೆ ನಿಗ್ರಹ ಮತ್ತು ಒಳನುಸುಳಿವಿಕೆಯ ನೈಜ ಪರಿಸ್ಥಿತಿಯನ್ನು ಅವಲೋಕಿಸಲಿದ್ದಾರೆ ಎಂದು ಸೇನಾ ಮೂಲಗಳು ತಿಳಿಸಿವೆ.</p>.<p>ಒಳನುಸುಳುವಿಕೆಗೆ ಭಯೋತ್ಪಾದಕರು ಮಾಡುವ ಯಾವುದೇ ಪ್ರಯತ್ನವನ್ನು ಮಟ್ಟ ಹಾಕಲು ಸೈನ್ಯ ಕಾರ್ಯಾಚರಣೆಯ ಸನ್ನದ್ಧತೆಯನ್ನು ಪರಿಶೀಲಿಸಲು ಗಡಿಗೆ ಸೇನಾ ಮುಖ್ಯಸ್ಥರು ಭೇಟಿ ಕೊಡಲಿದ್ದಾರೆ.</p>.<p>ಕದನ ವಿರಾಮ ಒಪ್ಪಂದದಲ್ಲಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಮುಖ್ಯ ಪಾತ್ರ ವಹಿಸಿದ್ದು, ಕಳೆದ ಕೆಲವು ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಇಷ್ಟು ದೀರ್ಘಾವದಿಯ ವರೆಗೆ ಗಡಿಯಲ್ಲಿ ಶಾಂತಿ ನೆಲೆಸಿದೆ.</p>.<p>2003ನೇ ಇಸವಿಯಲ್ಲಿ ಕದನ ವಿರಾಮ ನಿಯಮ ಒಪ್ಪಂದಕ್ಕೆ ಸಹಿ ಹಾಕಿದ್ದರೂ ಪದೇ ಪದೇ ಉಲ್ಲಂಘಿಸಲಾಗಿತ್ತು. ಕೆಲವು ತಿಂಗಳುಗಳ ಹಿಂದೆಯಷ್ಟೇ ನಡೆದ ಮಾತುಕತೆಯಲ್ಲಿ ಜಂಟಿ ಹೇಳಿಕೆಯ ಮೂಲಕ ಉಭಯ ಸೇನೆಗಳು ಕದನ ವಿರಾಮ ಘೋಷಣೆ ಮಾಡಿದ್ದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಗಡಿ ನಿಯಂತ್ರಣ ರೇಖೆಯಲ್ಲಿ (ಎಲ್ಒಸಿ) ಭಾರತ ಹಾಗೂ ಪಾಕಿಸ್ತಾನ ಸೈನ್ಯಗಳ ನಡುವಣ ಕದನ ವಿರಾಮವು 100ನೇ ದಿನಕ್ಕೆ ಕಾಲಿಡುತ್ತಿರುವಂತೆಯೇ ಭೂ ಸೇನಾ ಮುಖ್ಯಸ್ಥ ಲೆಫ್ಟಿನೆಂಟ್ ಜನರಲ್ ಮನೋಜ್ ಮುಕುಂದ್ ನರವಾಣೆ ಅವರು ಬುಧವಾರದಿಂದ ಎರಡು ದಿನಗಳ ಭೇಟಿ ಹಮ್ಮಿಕೊಂಡಿದ್ದಾರೆ.</p>.<p>ಗಡಿಯಲ್ಲಿ ಪರಿಸ್ಥಿತಿಯನ್ನು ಅವಲೋಕಿಸಲಿರುವ ಸೇನಾ ಮುಖ್ಯಸ್ಥರು ಕಣಿವೆಯಲ್ಲಿ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆ ಕುರಿತು ಪರಿಶೀಲಿಸಲಿದ್ದಾರೆ.</p>.<p>ಭಾರತ ಹಾಗೂ ಪಾಕಿಸ್ತಾನ ನಡುವಣ ಕದನ ವಿರಾಮ ಒಪ್ಪಂದವು ಫೆಬ್ರವರಿ ತಿಂಗಳ ಕೊನೆಯ ವಾರದಲ್ಲಿ ಎರಡೂ ಸೇನೆಗಳ ಮಿಲಿಟರಿ ಕಾರ್ಯಾಚರಣೆಯ ಮಹಾ ನಿರ್ದೇಶಕರ (ಡಿಜಿಎಂಒ) ಮಾತುಕತೆ ಮೂಲಕ ಪಾಲನೆ ಮಾಡಲಾಗಿತ್ತು. ಅಲ್ಲಿಂದ ಬಳಿಕ ಉಭಯ ದೇಶಗಳು ಕದನ ವಿರಾಮ ನಿಯಮವನ್ನು ಉಲ್ಲಂಘಿಸಿಲ್ಲ.</p>.<p>ಇದನ್ನೂ ಓದಿ:<a href="https://www.prajavani.net/india-news/govt-broadens-rules-that-bar-retired-officials-from-publishing-sensitive-information-835399.html" itemprop="url">ನಿವೃತ್ತಿ ನಂತರ ‘ಸೂಕ್ಷ್ಮ ವಿಚಾರ’ ಹಂಚಿಕೆ ಮೇಲೆ ನಿರ್ಬಂಧ: ಕೇಂದ್ರ ಸರ್ಕಾರ </a></p>.<p>ಸೇನಾ ಮುಖ್ಯಸ್ಥರು ಸೇನೆಯ ಇತರ ಉನ್ನತ ಕಮಾಂಡರ್ಗಳ ಜೊತೆಗೆ ಕಣಿವೆಯಲ್ಲಿ ಭಯೋತ್ಪಾದನೆ ನಿಗ್ರಹ ಮತ್ತು ಒಳನುಸುಳಿವಿಕೆಯ ನೈಜ ಪರಿಸ್ಥಿತಿಯನ್ನು ಅವಲೋಕಿಸಲಿದ್ದಾರೆ ಎಂದು ಸೇನಾ ಮೂಲಗಳು ತಿಳಿಸಿವೆ.</p>.<p>ಒಳನುಸುಳುವಿಕೆಗೆ ಭಯೋತ್ಪಾದಕರು ಮಾಡುವ ಯಾವುದೇ ಪ್ರಯತ್ನವನ್ನು ಮಟ್ಟ ಹಾಕಲು ಸೈನ್ಯ ಕಾರ್ಯಾಚರಣೆಯ ಸನ್ನದ್ಧತೆಯನ್ನು ಪರಿಶೀಲಿಸಲು ಗಡಿಗೆ ಸೇನಾ ಮುಖ್ಯಸ್ಥರು ಭೇಟಿ ಕೊಡಲಿದ್ದಾರೆ.</p>.<p>ಕದನ ವಿರಾಮ ಒಪ್ಪಂದದಲ್ಲಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಮುಖ್ಯ ಪಾತ್ರ ವಹಿಸಿದ್ದು, ಕಳೆದ ಕೆಲವು ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಇಷ್ಟು ದೀರ್ಘಾವದಿಯ ವರೆಗೆ ಗಡಿಯಲ್ಲಿ ಶಾಂತಿ ನೆಲೆಸಿದೆ.</p>.<p>2003ನೇ ಇಸವಿಯಲ್ಲಿ ಕದನ ವಿರಾಮ ನಿಯಮ ಒಪ್ಪಂದಕ್ಕೆ ಸಹಿ ಹಾಕಿದ್ದರೂ ಪದೇ ಪದೇ ಉಲ್ಲಂಘಿಸಲಾಗಿತ್ತು. ಕೆಲವು ತಿಂಗಳುಗಳ ಹಿಂದೆಯಷ್ಟೇ ನಡೆದ ಮಾತುಕತೆಯಲ್ಲಿ ಜಂಟಿ ಹೇಳಿಕೆಯ ಮೂಲಕ ಉಭಯ ಸೇನೆಗಳು ಕದನ ವಿರಾಮ ಘೋಷಣೆ ಮಾಡಿದ್ದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>