<p>ನವದೆಹಲಿ: ವಿದೇಶದಿಂದ ಹೂವುಗಳ ಆಮದಿಗಾಗಿ ಚೆನ್ನೈ ವಿಮಾನ ನಿಲ್ದಾಣವನ್ನು ಮೀಸಲಿಡುವುದರ ಜತೆಗೆ ಕೇಂದ್ರ ಸರ್ಕಾರವು ಉತ್ತರ ಭಾರತದಲ್ಲೂ ಹೂವಿನ ಆಮದಿಗಾಗಿ ಒಂದು ವಿಮಾನ ನಿಲ್ದಾಣನ್ನು ನಿಗದಿಪಡಿಸಬಹುದು ಎಂದು ದೆಹಲಿ ಹೈಕೋರ್ಟ್ ಶುಕ್ರವಾರ ಹೇಳಿದೆ.</p>.<p>‘ಇದು ಕೇವಲ ದಾಸ್ತಾನು ಸೌಕರ್ಯದ ವಿಷಯವಾಗಿದೆ. ಕೊರೊನಾದ ಈ ಪರಿಸ್ಥಿತಿಯಲ್ಲಿ ಯಾವುದೇ ವ್ಯವಹಾರಗಳು ತೊಂದರೆಗೆ ಒಳಗಾಗಬಾರದು. ಕೆಲಸ ಮಾಡುವ ಇಚ್ಛೆಯಿದ್ದಲ್ಲಿ ಮಾರ್ಗ ಸಿಕ್ಕೇ ಸಿಗುತ್ತದೆ’ ಎಂದು ಮುಖ್ಯ ನ್ಯಾಯಮೂರ್ತಿ ಡಿ.ಎನ್ ಪಟೇಲ್, ನ್ಯಾಯಮೂರ್ತಿ ಪ್ರತೀಕ್ ಜಲನ್ ಅವರ ಪೀಠವು ತಿಳಿಸಿದೆ.</p>.<p>ಜುಲೈ 9ರಂದು ವಿದೇಶಿ ವ್ಯಾಪಾರಗಳ ಮಹಾನಿರ್ದೇಶನಾಲಯವು (ಡಿಜಿಎಫ್ಟಿ) ಚೆನ್ನೈ ವಿಮಾನ ನಿಲ್ದಾಣದಿಂದ ಮಾತ್ರ ಹೂವುಗಳನ್ನು ಆಮದು ಮಾಡಿಕೊಳ್ಳುವಂತೆ ಅಧಿಸೂಚನೆ ಹೊರಡಿಸಿತ್ತು. ಇದನ್ನು ಪ್ರಶ್ನಿಸಿ ಹಣ್ಣು, ಹೂವು ಮತ್ತು ತರಕಾರಿ ವ್ಯಾಪಾರಿಗಳ ಸಂಘವು ದೆಹಲಿ ಹೈಕೋರ್ಟ್ ಮೆಟ್ಟಿಲೇರಿದೆ.</p>.<p>‘ನಾವು ನ್ಯಾಯಾಲಯದ ಮೊರೆ ಹೋಗುವ ಮುನ್ನ ಈ ಬಗ್ಗೆ ಸರ್ಕಾರಕ್ಕೆ ಮನವಿ ಮಾಡಿದ್ದೆವು . ಆದರೆ ಈ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ’ ಎಂದು ಸಂಘದ ಸದಸ್ಯರು ತಿಳಿಸಿದರು.</p>.<p>ನ್ಯಾಯಾಲಯದ ಆದೇಶದ ಪ್ರತಿ ದೊರೆತ ಎಂಟು ವಾರಗಳೊಳಗೆ ಸಂಘದ ಮನವಿ ಬಗ್ಗೆ ನಿರ್ಧಾರ ಕೈಗೊಳ್ಳಬೇಕು ಎಂದು ಪೀಠವು ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನವದೆಹಲಿ: ವಿದೇಶದಿಂದ ಹೂವುಗಳ ಆಮದಿಗಾಗಿ ಚೆನ್ನೈ ವಿಮಾನ ನಿಲ್ದಾಣವನ್ನು ಮೀಸಲಿಡುವುದರ ಜತೆಗೆ ಕೇಂದ್ರ ಸರ್ಕಾರವು ಉತ್ತರ ಭಾರತದಲ್ಲೂ ಹೂವಿನ ಆಮದಿಗಾಗಿ ಒಂದು ವಿಮಾನ ನಿಲ್ದಾಣನ್ನು ನಿಗದಿಪಡಿಸಬಹುದು ಎಂದು ದೆಹಲಿ ಹೈಕೋರ್ಟ್ ಶುಕ್ರವಾರ ಹೇಳಿದೆ.</p>.<p>‘ಇದು ಕೇವಲ ದಾಸ್ತಾನು ಸೌಕರ್ಯದ ವಿಷಯವಾಗಿದೆ. ಕೊರೊನಾದ ಈ ಪರಿಸ್ಥಿತಿಯಲ್ಲಿ ಯಾವುದೇ ವ್ಯವಹಾರಗಳು ತೊಂದರೆಗೆ ಒಳಗಾಗಬಾರದು. ಕೆಲಸ ಮಾಡುವ ಇಚ್ಛೆಯಿದ್ದಲ್ಲಿ ಮಾರ್ಗ ಸಿಕ್ಕೇ ಸಿಗುತ್ತದೆ’ ಎಂದು ಮುಖ್ಯ ನ್ಯಾಯಮೂರ್ತಿ ಡಿ.ಎನ್ ಪಟೇಲ್, ನ್ಯಾಯಮೂರ್ತಿ ಪ್ರತೀಕ್ ಜಲನ್ ಅವರ ಪೀಠವು ತಿಳಿಸಿದೆ.</p>.<p>ಜುಲೈ 9ರಂದು ವಿದೇಶಿ ವ್ಯಾಪಾರಗಳ ಮಹಾನಿರ್ದೇಶನಾಲಯವು (ಡಿಜಿಎಫ್ಟಿ) ಚೆನ್ನೈ ವಿಮಾನ ನಿಲ್ದಾಣದಿಂದ ಮಾತ್ರ ಹೂವುಗಳನ್ನು ಆಮದು ಮಾಡಿಕೊಳ್ಳುವಂತೆ ಅಧಿಸೂಚನೆ ಹೊರಡಿಸಿತ್ತು. ಇದನ್ನು ಪ್ರಶ್ನಿಸಿ ಹಣ್ಣು, ಹೂವು ಮತ್ತು ತರಕಾರಿ ವ್ಯಾಪಾರಿಗಳ ಸಂಘವು ದೆಹಲಿ ಹೈಕೋರ್ಟ್ ಮೆಟ್ಟಿಲೇರಿದೆ.</p>.<p>‘ನಾವು ನ್ಯಾಯಾಲಯದ ಮೊರೆ ಹೋಗುವ ಮುನ್ನ ಈ ಬಗ್ಗೆ ಸರ್ಕಾರಕ್ಕೆ ಮನವಿ ಮಾಡಿದ್ದೆವು . ಆದರೆ ಈ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ’ ಎಂದು ಸಂಘದ ಸದಸ್ಯರು ತಿಳಿಸಿದರು.</p>.<p>ನ್ಯಾಯಾಲಯದ ಆದೇಶದ ಪ್ರತಿ ದೊರೆತ ಎಂಟು ವಾರಗಳೊಳಗೆ ಸಂಘದ ಮನವಿ ಬಗ್ಗೆ ನಿರ್ಧಾರ ಕೈಗೊಳ್ಳಬೇಕು ಎಂದು ಪೀಠವು ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>