<p><strong>ನವದೆಹಲಿ: </strong>ಗಣರಾಜ್ಯೋತ್ಸವದ ದಿನರೈತರ ಟ್ರ್ಯಾಕ್ಟರ್ ರ್ಯಾಲಿ ವೇಳೆ ಕೆಂಪುಕೋಟೆಯಲ್ಲಿ ನಡೆದ ದಾಂಧಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಒಬ್ಬನನ್ನು ವಶಕ್ಕೆ ಪಡೆದಿದ್ದಾರೆ.</p>.<p>ಬಂಧಿತನನ್ನು ಧರ್ಮೇಂದ್ರ ಸಿಂಗ್ ಎಂದು ಗುರುತಿಸಲಾಗಿದೆ. ಕೆಂಪುಕೋಟೆ ಮೇಲೆ ಅನ್ಯ ಧ್ವಜ ಹಾರಿಸಿದ ಪ್ರಕರಣದಲ್ಲಿ ಈತನ ಪಾತ್ರವಿದೆಯೇ ಎಂಬ ಬಗ್ಗೆ ತನಿಖೆ ನಡೆಸುತ್ತಿರುವುದಾಗಿ ಪೊಲೀಸರು ಪಿಟಿಐಗೆ ತಿಳಿಸಿದ್ದಾರೆ.</p>.<p>ಇದನ್ನೂ ಓದಿ.. <a href="https://www.prajavani.net/india-news/delhi-police-detain-200-people-on-farmers-tractor-rally-violence-case-800047.html"><strong>ದೆಹಲಿ ಹಿಂಸಾಚಾರ: 200 ಜನರನ್ನು ವಶಕ್ಕೆ ಪಡೆದು ವಿಚಾರಣೆ</strong></a></p>.<p>ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯಲ್ಲಿ ಜನವರಿ 26ರಂದು ಟ್ರ್ಯಾಕ್ಟರ್ ಪೆರೇಡ್ಗೆ ರೈತರು ಕರೆ ನೀಡಿದ್ದರು. ಈ ಸಂದರ್ಭ ನಿಗದಿತ ಮಾರ್ಗದ ಒಪ್ಪಂದವನ್ನು ಮೀರಿ ರೈತರು ದೆಹಲಿ ಪ್ರವೇಶಿಸಿದ್ದರು. ಪೊಲೀಸರ ಜೊತೆ ಸಂಘರ್ಷಕ್ಕೆ ಇಳಿದಿದ್ದರು. ಬ್ಯಾರಿಕೇಡ್ ಮುರಿದು ಕಲ್ಲು ತೂರಾಟ ನಡೆಸಿದ್ದರು. ಘಟನೆಯಲ್ಲಿ 300ಕ್ಕೂ ಅಧಿಕ ಪೊಲೀಸರು ಗಾಯಗೊಂಡಿದ್ದರು.</p>.<p>ಇದೇವೇಳೆ, ಹಲವು ರೈತರು ಟ್ರ್ಯಾಕ್ಟರ್ ಓಡಿಸಿಕೊಂಡು ಕೆಂಪು ಕೋಟೆ ಪ್ರವೇಶಿಸಿದ್ದರು. ದಾಂಧಲೆ ನಡೆಸಿ, ಸ್ತಬ್ಧಚಿತ್ರಗಳಿಗೆ ಹಾನಿ ಮಾಡಿದ್ದರು. ಬಳಿಕ ಅನ್ಯ ಧ್ವಜ ಹಾರಿಸಿದ್ದರು. ಪ್ರತಿಭಟನಾಕಾರರಿಂದ ತಪ್ಪಿಸಿಕೊಳ್ಳಲು ಪೊಲೀಸರೇ ಗೋಡೆ ಹಾರಿ ಕಂದಕಕ್ಕೆ ಧುಮುಕಿ ಓಡುತ್ತಿದ್ದ ವಿಡಿಯೊಗಳು ವೈರಲ್ ಆಗಿದ್ದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಗಣರಾಜ್ಯೋತ್ಸವದ ದಿನರೈತರ ಟ್ರ್ಯಾಕ್ಟರ್ ರ್ಯಾಲಿ ವೇಳೆ ಕೆಂಪುಕೋಟೆಯಲ್ಲಿ ನಡೆದ ದಾಂಧಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಒಬ್ಬನನ್ನು ವಶಕ್ಕೆ ಪಡೆದಿದ್ದಾರೆ.</p>.<p>ಬಂಧಿತನನ್ನು ಧರ್ಮೇಂದ್ರ ಸಿಂಗ್ ಎಂದು ಗುರುತಿಸಲಾಗಿದೆ. ಕೆಂಪುಕೋಟೆ ಮೇಲೆ ಅನ್ಯ ಧ್ವಜ ಹಾರಿಸಿದ ಪ್ರಕರಣದಲ್ಲಿ ಈತನ ಪಾತ್ರವಿದೆಯೇ ಎಂಬ ಬಗ್ಗೆ ತನಿಖೆ ನಡೆಸುತ್ತಿರುವುದಾಗಿ ಪೊಲೀಸರು ಪಿಟಿಐಗೆ ತಿಳಿಸಿದ್ದಾರೆ.</p>.<p>ಇದನ್ನೂ ಓದಿ.. <a href="https://www.prajavani.net/india-news/delhi-police-detain-200-people-on-farmers-tractor-rally-violence-case-800047.html"><strong>ದೆಹಲಿ ಹಿಂಸಾಚಾರ: 200 ಜನರನ್ನು ವಶಕ್ಕೆ ಪಡೆದು ವಿಚಾರಣೆ</strong></a></p>.<p>ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯಲ್ಲಿ ಜನವರಿ 26ರಂದು ಟ್ರ್ಯಾಕ್ಟರ್ ಪೆರೇಡ್ಗೆ ರೈತರು ಕರೆ ನೀಡಿದ್ದರು. ಈ ಸಂದರ್ಭ ನಿಗದಿತ ಮಾರ್ಗದ ಒಪ್ಪಂದವನ್ನು ಮೀರಿ ರೈತರು ದೆಹಲಿ ಪ್ರವೇಶಿಸಿದ್ದರು. ಪೊಲೀಸರ ಜೊತೆ ಸಂಘರ್ಷಕ್ಕೆ ಇಳಿದಿದ್ದರು. ಬ್ಯಾರಿಕೇಡ್ ಮುರಿದು ಕಲ್ಲು ತೂರಾಟ ನಡೆಸಿದ್ದರು. ಘಟನೆಯಲ್ಲಿ 300ಕ್ಕೂ ಅಧಿಕ ಪೊಲೀಸರು ಗಾಯಗೊಂಡಿದ್ದರು.</p>.<p>ಇದೇವೇಳೆ, ಹಲವು ರೈತರು ಟ್ರ್ಯಾಕ್ಟರ್ ಓಡಿಸಿಕೊಂಡು ಕೆಂಪು ಕೋಟೆ ಪ್ರವೇಶಿಸಿದ್ದರು. ದಾಂಧಲೆ ನಡೆಸಿ, ಸ್ತಬ್ಧಚಿತ್ರಗಳಿಗೆ ಹಾನಿ ಮಾಡಿದ್ದರು. ಬಳಿಕ ಅನ್ಯ ಧ್ವಜ ಹಾರಿಸಿದ್ದರು. ಪ್ರತಿಭಟನಾಕಾರರಿಂದ ತಪ್ಪಿಸಿಕೊಳ್ಳಲು ಪೊಲೀಸರೇ ಗೋಡೆ ಹಾರಿ ಕಂದಕಕ್ಕೆ ಧುಮುಕಿ ಓಡುತ್ತಿದ್ದ ವಿಡಿಯೊಗಳು ವೈರಲ್ ಆಗಿದ್ದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>