ಅರ್ಜಿದಾರರ ಪರ ವಕೀಲರು, ‘ಅರ್ಜಿದಾರರು ಮೇ 27ರಿಂದ ಜೈಲು ಶಿಕ್ಷೆ ಅನುಭವಿಸುತ್ತಿದ್ದಾರೆ. ಇದು ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ವಿಷಯ. ಶಿಕ್ಷೆ ಅವಧಿ ವಿಪರೀತವಾಯಿತು’ ಎಂದು ವಾದಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಪೀಠವು, ‘ನಾವು ಇಲ್ಲಿರುವುದು ಸರಿ ತಪ್ಪುಗಳನ್ನು ನಿರ್ಧರಿಸುವುದಕ್ಕೇ ಹೊರತು ಇಂತಹ ವ್ಯಕ್ತಿಗಳಿಗೆ ಕರುಣೆ ತೋರುವುದಕ್ಕಲ್ಲ’ ಎಂದು ಪೀಠ ಖಾರವಾಗಿ ಹೇಳಿದೆ.