ಶಿಕ್ಷಣ ಸಚಿವ ವಿ.ಶಿವನಕುಟ್ಟಿ, ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಜಿ.ಆರ್.ಅನಿಲ್ ಮತ್ತು ಸಾರಿಗೆ ಸಚಿವ ಆಂಥೋನಿ ರಾಜು ಗ್ರಾಮಕ್ಕೆ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಕೆಲವು ಸ್ಥಳೀಯರು, ರಕ್ಷಣಾ ಕಾರ್ಯಾಚರಣೆಗೆ ವಿಳಂಬ ಮಾಡಲಾಗಿದೆ ಮತ್ತು ಸಮುದ್ರದಾಳಕ್ಕೆ ಇಳಿಯುವ ಮೀನುಗಾರರ ಸುರಕ್ಷತೆಗೆ ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡುತ್ತಿಲ್ಲ. ‘ಅವೈಜ್ಞಾನಿಕ ಬ್ರೇಕ್ವಾಟರ್’ ನಿರ್ಮಿಸುತ್ತಿರುವುದರಿಂದ ಬೋಟ್ ಅವಘಡಗಳು ಸರ್ವೇ ಸಾಮಾನ್ಯವಾಗಿದ್ದು, ಈಗಾಗಲೇ ಹಲವು ಜನರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಆರೋಪಿಸಿ ಪ್ರತಿಭಟನೆ ನಡೆಸಿದರು.