‘ತ್ರಿಶ್ಶೂರ್ ಜಿಲ್ಲೆಯಲ್ಲಿ ಕೋವಿಡ್–19 ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆಯೂ 165 ತಲುಪಿದೆ. ಹೀಗಾಗಿ ಗುರುವಾಯೂರಿನ ದೇವಸ್ಥಾನವನ್ನು ಬಂದ್ ಮಾಡಲಾಗಿದ್ದು, ಶನಿವಾರದಿಂದಲೇ ಅನ್ವಯವಾಗುವಂತೆ ಭಕ್ತರಿಗೆ ಪ್ರವೇಶ ನೀಡಿಲ್ಲ’ ಎಂದು ದೇವಸ್ವಂ ಸಚಿವ ಕಡಕಂಪಳ್ಳಿ ಸುರೇಂದ್ರನ್ ತಿಳಿಸಿದ್ದಾರೆ.