<p>ಪ್ರಜಾವಾಣಿ ವಾರ್ತೆ</p>.<p><strong>ಹೈದರಾಬಾದ್</strong>: ಬೆಂಗಳೂರು ಮೂಲದ ಉದ್ಯಮಿ ಕೆ. ವೀರಸ್ವಾಮಿ ರೆಡ್ಡಿ ಹಾಗೂ ಅವರ ಮಗ ಕೆ.ವಿ ಪ್ರಶಾಂತ್ ರೆಡ್ಡಿ ಅವರನ್ನು ಆಂಧ್ರಪ್ರದೇಶದ ಪಲ್ನಾಡು ಜಿಲ್ಲೆಯಲ್ಲಿ ಬುಧವಾರ ಹತ್ಯೆ ಮಾಡಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಅನಿಲ್ ಕುಮಾರ್ ರೆಡ್ಡಿ ಎಂಬವರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ. </p>.<p>ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದ ವ್ಯಾಜ್ಯದಿಂದಾಗಿ ಇಬ್ಬರನ್ನೂ ಕೊಲೆ ಮಾಡಲಾಗಿದೆ ಎಂದು ಶಂಕಿಸಲಾಗಿದೆ. ಅನಿಲ್ ಕುಮಾರ್ ರೆಡ್ಡಿಯನ್ನು ಕೊಲೆಯ ಪ್ರಮುಖ ಸಂಚುಕೋರ ಎಂದು ಗುರುತಿಸಲಾಗಿದ್ದು, ಅವರನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದರು. </p>.<p>ಕೊಲೆಯಾದ ವೀರಸ್ವಾಮಿ ಹಾಗೂ ಪ್ರಶಾಂತ್ ಬೆಂಗಳೂರಿನ ಕಾಡುಗೋಡಿಯ ಚಿನ್ನಸಂದ್ರದಲ್ಲಿ ವಾಸವಿದ್ದರು. ಚೆಕ್ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗಲು ನರಸರಾವ್ಪೇಟ ನ್ಯಾಯಾಲಯಕ್ಕೆ ತೆರಳಿದ್ದರು.</p>.<p>ಈ ವೇಳೆ ನ್ಯಾಯಾಲಯದ ಆವರಣದಿಂದ ಇಬ್ಬರನ್ನೂ ಕಾರಿನಲ್ಲಿ ಅಪಹರಿಸಿಕೊಂಡು ಹೋಗಲಾಗಿದೆ. ಇದನ್ನು ನೋಡಿದ ಸ್ಥಳೀಯರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಹಾಗೂ ಕಾರನ್ನು ಹಿಂಬಾಲಿಸಿಕೊಂಡೂ ಹೋಗಿದ್ದಾರೆ. </p>.<p>ಬಾಪಟ್ಲಾ ಜಿಲ್ಲೆಯ ಸಂತಮಗಳೂರಿನಲ್ಲಿ ಅಭಿವೃದ್ಧಿಪಡಿಸುತ್ತಿದ್ದ ಬಡಾವಣೆಯೊಂದರ ಸ್ಥಳಕ್ಕೆ ಕಾರಿನಲ್ಲಿ ತೆರಳಿದ ಆರೋಪಿಗಳು ಅಲ್ಲಿ ತಂದೆ ಮಗ ಇಬ್ಬರನ್ನೂ ಕತ್ತು ಸೀಳಿ ಹತ್ಯೆ ಮಾಡಿ ಪರಾರಿಯಾಗಿದ್ದರು. </p>.<p>ತಂದೆ, ಮಗ ಇಬ್ಬರೂ ರಿಯಲ್ ಎಸ್ಟೇಟ್ ಉದ್ಯಮಿಗಳಾಗಿದ್ದರು. ವ್ಯವಹಾರ ಪಾಲುದಾರರಾದ ಗದ್ದಂ ಅನಿಲ್ ಕುಮಾರ್ ರೆಡ್ಡಿ ಹಾಗೂ ಸಂತಮಗಳೂರಿನ ರಘುರಾಮಿ ರೆಡ್ಡಿ ಅವರೊಂದಿಗೆ ಮೃತರಿಗೆ ಹಣಕಾಸಿನ ವ್ಯಾಜ್ಯವಿತ್ತು. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಪ್ರಜಾವಾಣಿ ವಾರ್ತೆ</p>.<p><strong>ಹೈದರಾಬಾದ್</strong>: ಬೆಂಗಳೂರು ಮೂಲದ ಉದ್ಯಮಿ ಕೆ. ವೀರಸ್ವಾಮಿ ರೆಡ್ಡಿ ಹಾಗೂ ಅವರ ಮಗ ಕೆ.ವಿ ಪ್ರಶಾಂತ್ ರೆಡ್ಡಿ ಅವರನ್ನು ಆಂಧ್ರಪ್ರದೇಶದ ಪಲ್ನಾಡು ಜಿಲ್ಲೆಯಲ್ಲಿ ಬುಧವಾರ ಹತ್ಯೆ ಮಾಡಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಅನಿಲ್ ಕುಮಾರ್ ರೆಡ್ಡಿ ಎಂಬವರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ. </p>.<p>ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದ ವ್ಯಾಜ್ಯದಿಂದಾಗಿ ಇಬ್ಬರನ್ನೂ ಕೊಲೆ ಮಾಡಲಾಗಿದೆ ಎಂದು ಶಂಕಿಸಲಾಗಿದೆ. ಅನಿಲ್ ಕುಮಾರ್ ರೆಡ್ಡಿಯನ್ನು ಕೊಲೆಯ ಪ್ರಮುಖ ಸಂಚುಕೋರ ಎಂದು ಗುರುತಿಸಲಾಗಿದ್ದು, ಅವರನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದರು. </p>.<p>ಕೊಲೆಯಾದ ವೀರಸ್ವಾಮಿ ಹಾಗೂ ಪ್ರಶಾಂತ್ ಬೆಂಗಳೂರಿನ ಕಾಡುಗೋಡಿಯ ಚಿನ್ನಸಂದ್ರದಲ್ಲಿ ವಾಸವಿದ್ದರು. ಚೆಕ್ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗಲು ನರಸರಾವ್ಪೇಟ ನ್ಯಾಯಾಲಯಕ್ಕೆ ತೆರಳಿದ್ದರು.</p>.<p>ಈ ವೇಳೆ ನ್ಯಾಯಾಲಯದ ಆವರಣದಿಂದ ಇಬ್ಬರನ್ನೂ ಕಾರಿನಲ್ಲಿ ಅಪಹರಿಸಿಕೊಂಡು ಹೋಗಲಾಗಿದೆ. ಇದನ್ನು ನೋಡಿದ ಸ್ಥಳೀಯರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಹಾಗೂ ಕಾರನ್ನು ಹಿಂಬಾಲಿಸಿಕೊಂಡೂ ಹೋಗಿದ್ದಾರೆ. </p>.<p>ಬಾಪಟ್ಲಾ ಜಿಲ್ಲೆಯ ಸಂತಮಗಳೂರಿನಲ್ಲಿ ಅಭಿವೃದ್ಧಿಪಡಿಸುತ್ತಿದ್ದ ಬಡಾವಣೆಯೊಂದರ ಸ್ಥಳಕ್ಕೆ ಕಾರಿನಲ್ಲಿ ತೆರಳಿದ ಆರೋಪಿಗಳು ಅಲ್ಲಿ ತಂದೆ ಮಗ ಇಬ್ಬರನ್ನೂ ಕತ್ತು ಸೀಳಿ ಹತ್ಯೆ ಮಾಡಿ ಪರಾರಿಯಾಗಿದ್ದರು. </p>.<p>ತಂದೆ, ಮಗ ಇಬ್ಬರೂ ರಿಯಲ್ ಎಸ್ಟೇಟ್ ಉದ್ಯಮಿಗಳಾಗಿದ್ದರು. ವ್ಯವಹಾರ ಪಾಲುದಾರರಾದ ಗದ್ದಂ ಅನಿಲ್ ಕುಮಾರ್ ರೆಡ್ಡಿ ಹಾಗೂ ಸಂತಮಗಳೂರಿನ ರಘುರಾಮಿ ರೆಡ್ಡಿ ಅವರೊಂದಿಗೆ ಮೃತರಿಗೆ ಹಣಕಾಸಿನ ವ್ಯಾಜ್ಯವಿತ್ತು. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>