ಸಿಸಾಯ್ ಕ್ಷೇತ್ರದ ಮತದಾನ ಕೇಂದ್ರದ ಹೊರಗೆ ಸ್ಥಳೀಯರು ಪೊಲೀಸರೊಂದಿಗೆ ಘರ್ಷಣೆಗೆ ಮುಂದಾಗಿದ್ದರು. ಆಕ್ರೋಶಗೊಂಡ ಜನರು, ಕ್ಷೀಪ್ರ ಕಾರ್ಯ ಪಡೆಯ (ಆರ್ಎಎಫ್) ಸಿಬ್ಬಂದಿಯ ಶಸ್ತ್ರಾಸ್ತ್ರಗಳನ್ನು ಕಸಿದುಕೊಳ್ಳಲು ಮುಂದಾಗುತ್ತಿದ್ದಂತೆ ಪೊಲೀಸರು ಗುಂಡು ಹಾರಿಸಿದ್ದಾರೆ. ಈ ಘಟನೆಯಲ್ಲಿ ವ್ಯಕ್ತಿ ಮೃತಪಟ್ಟಿದ್ದು, ಪೊಲೀಸ್, ಪತ್ರಕರ್ತ ಸೇರಿ ಮೂವರು ಗಾಯಗೊಂಡಿದ್ದಾರೆ.