<p>ಹೈದರಾಬಾದ್: ಬಿಆರ್ಎಸ್ನ ಮತ್ತೊಬ್ಬ ಶಾಸಕ ಶುಕ್ರವಾರ ತೆಲಂಗಾಣದ ಆಡಳಿತಾರೂಢ ಕಾಂಗ್ರೆಸ್ ಪಕ್ಷ ಸೇರಿದ್ದಾರೆ. </p>.<p>‘ಗ್ರೇಟರ್ ಹೈದರಾಬಾದ್’ ಪ್ರದೇಶದ ಚೇವೆಲ್ಲಾದ ಶಾಸಕ ಕಾಳೆ ಯಾದಯ್ಯ ಅವರು ತೆಲಂಗಾಣದ ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ ಸಮ್ಮುಖದಲ್ಲಿ ದೆಹಲಿಯಲ್ಲಿ ಕಾಂಗ್ರೆಸ್ ಸೇರ್ಪಡೆಯಾದರು.</p>.<p>‘ಗ್ರೇಟರ್ ಹೈದರಾಬಾದ್’ ಪ್ರದೇಶದಿಂದ ಕಾಂಗ್ರೆಸ್ ಸೇರಿದ ಎರಡನೇ ಶಾಸಕ ಯಾದಯ್ಯ ಅವರಾಗಿದ್ದಾರೆ.</p>.<p>ಕಳೆದ ವರ್ಷ ನಡೆದ ವಿಧಾನಸಭಾ ಚುನಾವಣೆಯಲ್ಲಿ ಅಧಿಕಾರ ಕಳೆದುಕೊಂಡ ಬಿಆರ್ಎಸ್ ಪಕ್ಷವು ಗ್ರೇಟರ್ ಹೈದರಾಬಾದ್ ಪ್ರದೇಶದಲ್ಲಿನ ಒಟ್ಟು 25 ಕ್ಷೇತ್ರಗಳ ಪೈಕಿ 16 ರಲ್ಲಿ ಜಯಗಳಿಸಿತ್ತು.</p>.<p>ಕಳೆದ ವರ್ಷ ತೆಲಂಗಾಣದಲ್ಲಿ ಬಹುಮತ ಪಡೆದ ಕಾಂಗ್ರೆಸ್ ಪಕ್ಷ ಅಧಿಕಾರ ರಚಿಸಿತು. ಆ ನಂತರದಿಂದ ಬಿಆರ್ಎಸ್ನಲ್ಲಿ ಪಕ್ಷಾಂತರ ಪರ್ವ ಆರಂಭವಾಗಿದ್ದು, ಒಬ್ಬೊಬ್ಬರೇ ಶಾಸಕರು ಕಾಂಗ್ರೆಸ್ ಸೇರಲಾರಂಭಿಸಿದ್ದಾರೆ. ಈ ಹಾದಿಯಲ್ಲಿ ಯಾದಯ್ಯ ಅವರು ಬಿಆರ್ಎಸ್ನ ಆರನೇ ಶಾಸಕರು. ಇದಕ್ಕೂ ಮುನ್ನ ತಲ್ಲಂ ವೆಂಕಟರಾವ್, ಕಡಿಯಂ ಶ್ರೀಹರಿ, ಪೋಚರಂ ಶ್ರೀನಿವಾಸ ರೆಡ್ಡಿ, ಡಾ. ಎಂ. ಸಂಜಯ್ ಕುಮಾರ್ ಅವರು ಬಿಆರ್ಎಸ್ ತ್ಯಜಿಸಿ ಕಾಂಗ್ರೆಸ್ ಸೇರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹೈದರಾಬಾದ್: ಬಿಆರ್ಎಸ್ನ ಮತ್ತೊಬ್ಬ ಶಾಸಕ ಶುಕ್ರವಾರ ತೆಲಂಗಾಣದ ಆಡಳಿತಾರೂಢ ಕಾಂಗ್ರೆಸ್ ಪಕ್ಷ ಸೇರಿದ್ದಾರೆ. </p>.<p>‘ಗ್ರೇಟರ್ ಹೈದರಾಬಾದ್’ ಪ್ರದೇಶದ ಚೇವೆಲ್ಲಾದ ಶಾಸಕ ಕಾಳೆ ಯಾದಯ್ಯ ಅವರು ತೆಲಂಗಾಣದ ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ ಸಮ್ಮುಖದಲ್ಲಿ ದೆಹಲಿಯಲ್ಲಿ ಕಾಂಗ್ರೆಸ್ ಸೇರ್ಪಡೆಯಾದರು.</p>.<p>‘ಗ್ರೇಟರ್ ಹೈದರಾಬಾದ್’ ಪ್ರದೇಶದಿಂದ ಕಾಂಗ್ರೆಸ್ ಸೇರಿದ ಎರಡನೇ ಶಾಸಕ ಯಾದಯ್ಯ ಅವರಾಗಿದ್ದಾರೆ.</p>.<p>ಕಳೆದ ವರ್ಷ ನಡೆದ ವಿಧಾನಸಭಾ ಚುನಾವಣೆಯಲ್ಲಿ ಅಧಿಕಾರ ಕಳೆದುಕೊಂಡ ಬಿಆರ್ಎಸ್ ಪಕ್ಷವು ಗ್ರೇಟರ್ ಹೈದರಾಬಾದ್ ಪ್ರದೇಶದಲ್ಲಿನ ಒಟ್ಟು 25 ಕ್ಷೇತ್ರಗಳ ಪೈಕಿ 16 ರಲ್ಲಿ ಜಯಗಳಿಸಿತ್ತು.</p>.<p>ಕಳೆದ ವರ್ಷ ತೆಲಂಗಾಣದಲ್ಲಿ ಬಹುಮತ ಪಡೆದ ಕಾಂಗ್ರೆಸ್ ಪಕ್ಷ ಅಧಿಕಾರ ರಚಿಸಿತು. ಆ ನಂತರದಿಂದ ಬಿಆರ್ಎಸ್ನಲ್ಲಿ ಪಕ್ಷಾಂತರ ಪರ್ವ ಆರಂಭವಾಗಿದ್ದು, ಒಬ್ಬೊಬ್ಬರೇ ಶಾಸಕರು ಕಾಂಗ್ರೆಸ್ ಸೇರಲಾರಂಭಿಸಿದ್ದಾರೆ. ಈ ಹಾದಿಯಲ್ಲಿ ಯಾದಯ್ಯ ಅವರು ಬಿಆರ್ಎಸ್ನ ಆರನೇ ಶಾಸಕರು. ಇದಕ್ಕೂ ಮುನ್ನ ತಲ್ಲಂ ವೆಂಕಟರಾವ್, ಕಡಿಯಂ ಶ್ರೀಹರಿ, ಪೋಚರಂ ಶ್ರೀನಿವಾಸ ರೆಡ್ಡಿ, ಡಾ. ಎಂ. ಸಂಜಯ್ ಕುಮಾರ್ ಅವರು ಬಿಆರ್ಎಸ್ ತ್ಯಜಿಸಿ ಕಾಂಗ್ರೆಸ್ ಸೇರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>