<p><strong>ಇಂದೋರ್:</strong> ಕಾಲರಾ ರೋಗಕ್ಕೆ ತುತ್ತಾಗಿ 10 ಮಕ್ಕಳು ಮೃತಪಟ್ಟ ಕಾರಣ ಸುದ್ದಿಯಲ್ಲಿದ್ದ ಮಧ್ಯಪ್ರದೇಶದ ಇಂದೋರ್ನ ಶ್ರೀ ಯುಗಪುರುಷ ಧಾಮ ಬಲಾಶ್ರಮದಲ್ಲಿ ಮೂರು ವರ್ಷ ವಯಸ್ಸಿನ ಬಾಲಕಿ ಸೋಮವಾರ ರಾತ್ರಿ ಮೃತಪಟ್ಟಿದ್ದಾಳೆ. ಈ ಮೂಲಕ, ಕಳೆದ ಒಂದೂವರೆ ತಿಂಗಳಲ್ಲಿ ಈ ಆಶ್ರಮದಲ್ಲಿ 11 ಮಕ್ಕಳು ಮೃತಪಟ್ಟಂತಾಗಿದೆ.</p>.<p>‘ವಾಂತಿ, ಅತಿಸಾರ, ನಿರ್ಜಲೀಕರಣದಿಂದ ಬಳಲುತ್ತಿದ್ದ ಬಾಲಕಿಯನ್ನು ಆಗಸ್ಟ್ 3ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಗಲೇ ಆಕೆಯ ಆರೋಗ್ಯ ಸ್ಥಿತಿ ತೀರಾ ಹದಗೆಟ್ಟಿತ್ತು. ವೈದ್ಯರ ಪರಿಶ್ರಮದ ಹೊರತಾಗಿಯೂ ಆಕೆ ಬದುಕುಳಿಯಲಿಲ್ಲ ಎಂದು ಇಲ್ಲಿಯ ಚಾಚಾ ನೆಹರೂ ಬಾಲ ಚಿಕಿತ್ಸಾಲಯದ ವೈದ್ಯರು ಹೇಳಿದ್ದಾರೆ. </p>.<p>ಬಾಲಕಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಲಾಗಿದೆ. ಈಚೆಗಷ್ಟೇ ಪೋಷಕರ ಸುಪರ್ದಿಗೆ ಆಕೆಯನ್ನು ನೀಡಲಾಗಿತ್ತು ಎಂದು ಆಶ್ರಮದ ಆಡಳಿತ ತಿಳಿಸಿದೆ ಎಂದು ವೈದ್ಯರು ಹೇಳಿದ್ದಾರೆ.</p>.<p>ಸಾಮರ್ಥ್ಯಕ್ಕಿಂತ ಹೆಚ್ಚು ಮಕ್ಕಳನ್ನು ಆಶ್ರಮದ ಇರಿಸಿಕೊಳ್ಳಲಾಗಿದೆ ಮತ್ತು ನಿರ್ವಹಣೆಯಲ್ಲಿ ಅವ್ಯವಹಾರ ನಡೆಯುತ್ತಿದೆ ಎಂದು ಈ ಸಾವುಗಳ ಕುರಿತು ತನಿಖೆ ನಡೆಸಲು ನೇಮಿಸಲಾಗಿದ್ದ ಉನ್ನತ ಸಮಿತಿಯು ಹೇಳಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಇಂದೋರ್:</strong> ಕಾಲರಾ ರೋಗಕ್ಕೆ ತುತ್ತಾಗಿ 10 ಮಕ್ಕಳು ಮೃತಪಟ್ಟ ಕಾರಣ ಸುದ್ದಿಯಲ್ಲಿದ್ದ ಮಧ್ಯಪ್ರದೇಶದ ಇಂದೋರ್ನ ಶ್ರೀ ಯುಗಪುರುಷ ಧಾಮ ಬಲಾಶ್ರಮದಲ್ಲಿ ಮೂರು ವರ್ಷ ವಯಸ್ಸಿನ ಬಾಲಕಿ ಸೋಮವಾರ ರಾತ್ರಿ ಮೃತಪಟ್ಟಿದ್ದಾಳೆ. ಈ ಮೂಲಕ, ಕಳೆದ ಒಂದೂವರೆ ತಿಂಗಳಲ್ಲಿ ಈ ಆಶ್ರಮದಲ್ಲಿ 11 ಮಕ್ಕಳು ಮೃತಪಟ್ಟಂತಾಗಿದೆ.</p>.<p>‘ವಾಂತಿ, ಅತಿಸಾರ, ನಿರ್ಜಲೀಕರಣದಿಂದ ಬಳಲುತ್ತಿದ್ದ ಬಾಲಕಿಯನ್ನು ಆಗಸ್ಟ್ 3ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಗಲೇ ಆಕೆಯ ಆರೋಗ್ಯ ಸ್ಥಿತಿ ತೀರಾ ಹದಗೆಟ್ಟಿತ್ತು. ವೈದ್ಯರ ಪರಿಶ್ರಮದ ಹೊರತಾಗಿಯೂ ಆಕೆ ಬದುಕುಳಿಯಲಿಲ್ಲ ಎಂದು ಇಲ್ಲಿಯ ಚಾಚಾ ನೆಹರೂ ಬಾಲ ಚಿಕಿತ್ಸಾಲಯದ ವೈದ್ಯರು ಹೇಳಿದ್ದಾರೆ. </p>.<p>ಬಾಲಕಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಲಾಗಿದೆ. ಈಚೆಗಷ್ಟೇ ಪೋಷಕರ ಸುಪರ್ದಿಗೆ ಆಕೆಯನ್ನು ನೀಡಲಾಗಿತ್ತು ಎಂದು ಆಶ್ರಮದ ಆಡಳಿತ ತಿಳಿಸಿದೆ ಎಂದು ವೈದ್ಯರು ಹೇಳಿದ್ದಾರೆ.</p>.<p>ಸಾಮರ್ಥ್ಯಕ್ಕಿಂತ ಹೆಚ್ಚು ಮಕ್ಕಳನ್ನು ಆಶ್ರಮದ ಇರಿಸಿಕೊಳ್ಳಲಾಗಿದೆ ಮತ್ತು ನಿರ್ವಹಣೆಯಲ್ಲಿ ಅವ್ಯವಹಾರ ನಡೆಯುತ್ತಿದೆ ಎಂದು ಈ ಸಾವುಗಳ ಕುರಿತು ತನಿಖೆ ನಡೆಸಲು ನೇಮಿಸಲಾಗಿದ್ದ ಉನ್ನತ ಸಮಿತಿಯು ಹೇಳಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>