<p><strong>ಬೆಂಗಳೂರು</strong>: ಒಂದು ರಾಷ್ಟ್ರ, ಒಂದು ಚುನಾವಣೆ ಎನ್ನುವುದು ಕಾರ್ಯಸಾಧುವಲ್ಲ. ಅದರಿಂದ ಲಾಭ ಪಡೆಯಲು ಬಿಜೆಪಿ ಯತ್ನಿಸುತ್ತಿದೆ ಎಂದು ತಮಿಳುನಾಡಿನ ಆಡಳಿತ ಪಕ್ಷ, ದ್ರಾವಿಡ ಮುನ್ನೇತ್ರ ಕಳಗಂ(ಡಿಎಂಕೆ)ನ ನಾಯಕ ಎಂ. ಕೆ. ಸ್ಟಾಲಿನ್ ಹೇಳಿದ್ದಾರೆ.</p>.<p>ಡಿಎಂಕೆ ಮುಖವಾಣಿ ಮುರಸೋಲಿಯಲ್ಲಿ ಒಂದು ರಾಷ್ಟ್ರ, ಒಂದು ಚುನಾವಣೆಯ ಕುರಿತು ಪಕ್ಷದ ನಿಲುವನ್ನು ಪ್ರಕಟಿಸಲಾಗಿದೆ.</p>.<p>ಬಿಜೆಪಿ, ಎಲ್ಲ ವಿಚಾರಗಳಲ್ಲೂ ಒಂದೇ ಎನ್ನುವ ಪರಿಕಲ್ಪನೆಯನ್ನು ತರಲು ಯತ್ನಿಸುತ್ತಿದೆ. ಪ್ರಾದೇಶಿಕ ವೈವಿಧ್ಯತೆ ಮತ್ತು ಭಿನ್ನತೆಗಳಿದ್ದರೂ, ಅವುಗಳನ್ನು ಗೌರವಿಸುತ್ತಿಲ್ಲ. ಒಂದೇ ರಾಷ್ಟ್ರ, ಒಂದೇ ಭಾಷೆ, ಒಂದೇ ಸಂಸ್ಕೃತಿ ಎನ್ನುತ್ತಾ ಅಧಿಕಾರಕ್ಕೆ ಬರಲು ಯತ್ನಿಸುತ್ತಿದೆ. ರಾಜಕೀಯ ಲಾಭ ಪಡೆಯಲು ಈ ರೀತಿಯ ತಂತ್ರಗಳನ್ನು ಬಿಜೆಪಿ ಅನುಸರಿಸುತ್ತಿದೆ ಎಂದು ಡಿಎಂಕೆ ಆರೋಪಿಸಿದೆ.</p>.<p>ರಾಜ್ಯಗಳಲ್ಲಿ ಅಧಿಕಾರ ಪಡೆಯುವುದು ಬಿಜೆಪಿ ಗುರಿಯಾಗಿದೆ. ಅದಕ್ಕಾಗಿ ಶಾಸಕರನ್ನು ಖರೀದಿಸುವಂತಹ, ಪ್ರಜಾಪ್ರಭುತ್ವ ಮತ್ತು ಮತದಾನದ ಪದ್ಧತಿಗೆ ವಿರುದ್ಧವಾದ ತಂತ್ರಗಳನ್ನು ಬಿಜೆಪಿ ಅನುಸರಿಸುತ್ತಿದೆ ಎಂದು ಡಿಎಂಕೆ ಆರೋಪಿಸಿದೆ.</p>.<p><a href="https://www.prajavani.net/india-news/referred-to-tamizhagam-in-historical-cultural-context-tamil-nadu-governor-1007467.html" itemprop="url">ತಮಿಳುನಾಡು ಹೆಸರು ಬದಲಾವಣೆ ಸೂಚಿಸಿರಲಿಲ್ಲ: ರಾಜ್ಯಪಾಲ ಆರ್.ಎನ್.ರವಿ ಸ್ಪಷ್ಟನೆ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಒಂದು ರಾಷ್ಟ್ರ, ಒಂದು ಚುನಾವಣೆ ಎನ್ನುವುದು ಕಾರ್ಯಸಾಧುವಲ್ಲ. ಅದರಿಂದ ಲಾಭ ಪಡೆಯಲು ಬಿಜೆಪಿ ಯತ್ನಿಸುತ್ತಿದೆ ಎಂದು ತಮಿಳುನಾಡಿನ ಆಡಳಿತ ಪಕ್ಷ, ದ್ರಾವಿಡ ಮುನ್ನೇತ್ರ ಕಳಗಂ(ಡಿಎಂಕೆ)ನ ನಾಯಕ ಎಂ. ಕೆ. ಸ್ಟಾಲಿನ್ ಹೇಳಿದ್ದಾರೆ.</p>.<p>ಡಿಎಂಕೆ ಮುಖವಾಣಿ ಮುರಸೋಲಿಯಲ್ಲಿ ಒಂದು ರಾಷ್ಟ್ರ, ಒಂದು ಚುನಾವಣೆಯ ಕುರಿತು ಪಕ್ಷದ ನಿಲುವನ್ನು ಪ್ರಕಟಿಸಲಾಗಿದೆ.</p>.<p>ಬಿಜೆಪಿ, ಎಲ್ಲ ವಿಚಾರಗಳಲ್ಲೂ ಒಂದೇ ಎನ್ನುವ ಪರಿಕಲ್ಪನೆಯನ್ನು ತರಲು ಯತ್ನಿಸುತ್ತಿದೆ. ಪ್ರಾದೇಶಿಕ ವೈವಿಧ್ಯತೆ ಮತ್ತು ಭಿನ್ನತೆಗಳಿದ್ದರೂ, ಅವುಗಳನ್ನು ಗೌರವಿಸುತ್ತಿಲ್ಲ. ಒಂದೇ ರಾಷ್ಟ್ರ, ಒಂದೇ ಭಾಷೆ, ಒಂದೇ ಸಂಸ್ಕೃತಿ ಎನ್ನುತ್ತಾ ಅಧಿಕಾರಕ್ಕೆ ಬರಲು ಯತ್ನಿಸುತ್ತಿದೆ. ರಾಜಕೀಯ ಲಾಭ ಪಡೆಯಲು ಈ ರೀತಿಯ ತಂತ್ರಗಳನ್ನು ಬಿಜೆಪಿ ಅನುಸರಿಸುತ್ತಿದೆ ಎಂದು ಡಿಎಂಕೆ ಆರೋಪಿಸಿದೆ.</p>.<p>ರಾಜ್ಯಗಳಲ್ಲಿ ಅಧಿಕಾರ ಪಡೆಯುವುದು ಬಿಜೆಪಿ ಗುರಿಯಾಗಿದೆ. ಅದಕ್ಕಾಗಿ ಶಾಸಕರನ್ನು ಖರೀದಿಸುವಂತಹ, ಪ್ರಜಾಪ್ರಭುತ್ವ ಮತ್ತು ಮತದಾನದ ಪದ್ಧತಿಗೆ ವಿರುದ್ಧವಾದ ತಂತ್ರಗಳನ್ನು ಬಿಜೆಪಿ ಅನುಸರಿಸುತ್ತಿದೆ ಎಂದು ಡಿಎಂಕೆ ಆರೋಪಿಸಿದೆ.</p>.<p><a href="https://www.prajavani.net/india-news/referred-to-tamizhagam-in-historical-cultural-context-tamil-nadu-governor-1007467.html" itemprop="url">ತಮಿಳುನಾಡು ಹೆಸರು ಬದಲಾವಣೆ ಸೂಚಿಸಿರಲಿಲ್ಲ: ರಾಜ್ಯಪಾಲ ಆರ್.ಎನ್.ರವಿ ಸ್ಪಷ್ಟನೆ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>