<p><strong>ನವದೆಹಲಿ:</strong> ಬಿಜೆಪಿಯ ಪ್ರಮುಖ ಕಾರ್ಯಸೂಚಿಗಳಲ್ಲಿ ಒಂದಾಗಿರುವ ‘ಒಂದು ರಾಷ್ಟ್ರ–ಒಂದು ಚುನಾವಣೆ’ ಜಾರಿಗೆ ತರಲು ಸಂವಿಧಾನ ತಿದ್ದುಪಡಿ ಸೇರಿದಂತೆ ಎರಡು ಮಸೂದೆಗಳಿಗೆ ಕೇಂದ್ರ ಸಚಿವ ಸಂಪುಟ ಗುರುವಾರ ಅನುಮೋದನೆ ನೀಡಿದೆ. </p><p>ಸಂಸತ್ನ ಚಳಿಗಾಲದ ಅಧಿವೇಶನದಲ್ಲೇ ಮುಂದಿನ ವಾರ ಈ ಮಸೂದೆಗಳನ್ನು ಮಂಡಿಸುವ ಸಂಭವ ಇದೆ. ಬಳಿಕ ಈ ಮಸೂದೆಯನ್ನು ಜಂಟಿ ಸಂಸದೀಯ ಸಮಿತಿಗೆ (ಜೆಪಿಸಿ) ಶಿಫಾರಸು ಮಾಡಲಾಗುತ್ತದೆ.</p><p>ಈ ಮಸೂದೆಗಳ ಬಗ್ಗೆ ವ್ಯಾಪಕ ಸಮಾಲೋಚನೆ ನಡೆಸಲು ಸರ್ಕಾರ ಉತ್ಸುಕವಾಗಿದೆ. ಸಮಿತಿಯ ಮೂಲಕ ವಿವಿಧ ರಾಜ್ಯಗಳ ವಿಧಾನಸಭೆಗಳ ಸ್ಪೀಕರ್ಗಳೊಂದಿಗೆ ಸಮಾಲೋಚಿಸಲು ಸರ್ಕಾರ ಬಯಸಿದೆ ಎಂದು ಕೇಂದ್ರ ಸರ್ಕಾರದ ಮೂಲಗಳು ತಿಳಿಸಿವೆ. </p><p>‘ಒಂದು ರಾಷ್ಟ್ರ, ಒಂದು ಚುನಾವಣೆ’ ಬಿಜೆಪಿಯ ಪ್ರಮುಖ ಕಾರ್ಯಸೂಚಿಯಾಗಿದ್ದು, 2014ರಲ್ಲಿ ಮೋದಿ ಅಧಿಕಾರಕ್ಕೆ ಬಂದಾಗಿನಿಂದಲೂ ಅದರ ಜಾರಿಗೆ ಚಿಂತನೆ ನಡೆಸುತ್ತಿದ್ದರು. ಈ ಸಂಬಂಧ ಅಧ್ಯಯನ ನಡೆಸಿ ವರದಿ ನೀಡಲು ಮಾಜಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಅಧ್ಯಕ್ಷತೆಯ ಉನ್ನತ ಮಟ್ಟದ ಸಮಿತಿಯನ್ನು ಸರ್ಕಾರ ನೇಮಿಸಿತ್ತು.</p><p>ಸಮಿತಿಯು ಒಟ್ಟಿಗೆ ಚುನಾವಣೆ ನಡೆಸುವ ಸಂಬಂಧ 62 ಪಕ್ಷಗಳ ಅಭಿಪ್ರಾಯ ಕೇಳಿತ್ತು. 47 ಪಕ್ಷಗಳ ಪರವಾಗಿ ಅಭಿಪ್ರಾಯ ನೀಡಿದರೆ, 15 ಪಕ್ಷಗಳು ಪ್ರಸ್ತಾವ ವಿರೋಧಿಸಿದ್ದವು. ಸಮಿತಿಯು ಮಾರ್ಚ್ನಲ್ಲಿ 18,626 ಪುಟಗಳ ವರದಿ ಸಲ್ಲಿಸಿತ್ತು. ಸಂವಿಧಾನಕ್ಕೆ 18 ತಿದ್ದುಪಡಿಗಳನ್ನು ಸಮಿತಿ ಶಿಫಾರಸು ಮಾಡಿತ್ತು. ಈ ಸಮಿತಿಯ ಶಿಫಾರಸುಗಳನ್ನು ಕೇಂದ್ರ ಸಚಿವ ಸಂಪುಟ ಸೆಪ್ಟೆಂಬರ್ ತಿಂಗಳಲ್ಲಿ ಅಂಗೀಕರಿಸಿತ್ತು. </p><p>ಸದ್ಯಕ್ಕೆ, ಲೋಕಸಭೆ ಮತ್ತು ವಿಧಾನಸಭೆಗಳಿಗೆ ಮಾತ್ರ ಏಕಕಾಲದಲ್ಲಿ ಚುನಾವಣೆ ನಡೆಸುವ ಕರಡು ಮಸೂದೆಗೆ ಸಂಪುಟ ಒಪ್ಪಿಗೆ ನೀಡಿದೆ ಎಂದು ಮೂಲಗಳು ತಿಳಿಸಿವೆ. ಈ ಮೂಲಕ ಬಿಜೆಪಿಯ ಮತ್ತೊಂದು ‘ಕಾರ್ಯಸೂಚಿ’ಯನ್ನು ಕಾರ್ಯಗತಗೊಳಿಸಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಮೈತ್ರಿ ಸರ್ಕಾರ ಮುಂದಡಿ ಇಟ್ಟಿದೆ. </p><p>ಲೋಕಸಭೆ ಹಾಗೂ ವಿಧಾನಸಭಾ ಚುನಾವಣೆಗಳ ಜತೆಗೆ ಪುರಸಭೆ ಹಾಗೂ ಪಂಚಾಯಿತಿಗಳ ಚುನಾವಣೆಗಳನ್ನು ಹಂತ ಹಂತವಾಗಿ ನಡೆಸಲು ಉನ್ನತ ಮಟ್ಟದ ಸಮಿತಿ ಶಿಫಾರಸು ಮಾಡಿತ್ತು. ಇದಕ್ಕೆ ಶೇ 50ರಷ್ಟು ವಿಧಾನಸಭೆಗಳ ಒಪ್ಪಿಗೆ ಅಗತ್ಯ ಇತ್ತು. </p><p>ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸುವ ಸಂವಿಧಾನ ತಿದ್ದುಪಡಿ ಮಸೂದೆಗೆ ಕನಿಷ್ಠ ಶೇ 50ರಷ್ಟು ರಾಜ್ಯಗಳ ಅನುಮೋದನೆ ಅಗತ್ಯವಿರುವುದಿಲ್ಲ ಎಂದು ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಬಿಜೆಪಿಯ ಪ್ರಮುಖ ಕಾರ್ಯಸೂಚಿಗಳಲ್ಲಿ ಒಂದಾಗಿರುವ ‘ಒಂದು ರಾಷ್ಟ್ರ–ಒಂದು ಚುನಾವಣೆ’ ಜಾರಿಗೆ ತರಲು ಸಂವಿಧಾನ ತಿದ್ದುಪಡಿ ಸೇರಿದಂತೆ ಎರಡು ಮಸೂದೆಗಳಿಗೆ ಕೇಂದ್ರ ಸಚಿವ ಸಂಪುಟ ಗುರುವಾರ ಅನುಮೋದನೆ ನೀಡಿದೆ. </p><p>ಸಂಸತ್ನ ಚಳಿಗಾಲದ ಅಧಿವೇಶನದಲ್ಲೇ ಮುಂದಿನ ವಾರ ಈ ಮಸೂದೆಗಳನ್ನು ಮಂಡಿಸುವ ಸಂಭವ ಇದೆ. ಬಳಿಕ ಈ ಮಸೂದೆಯನ್ನು ಜಂಟಿ ಸಂಸದೀಯ ಸಮಿತಿಗೆ (ಜೆಪಿಸಿ) ಶಿಫಾರಸು ಮಾಡಲಾಗುತ್ತದೆ.</p><p>ಈ ಮಸೂದೆಗಳ ಬಗ್ಗೆ ವ್ಯಾಪಕ ಸಮಾಲೋಚನೆ ನಡೆಸಲು ಸರ್ಕಾರ ಉತ್ಸುಕವಾಗಿದೆ. ಸಮಿತಿಯ ಮೂಲಕ ವಿವಿಧ ರಾಜ್ಯಗಳ ವಿಧಾನಸಭೆಗಳ ಸ್ಪೀಕರ್ಗಳೊಂದಿಗೆ ಸಮಾಲೋಚಿಸಲು ಸರ್ಕಾರ ಬಯಸಿದೆ ಎಂದು ಕೇಂದ್ರ ಸರ್ಕಾರದ ಮೂಲಗಳು ತಿಳಿಸಿವೆ. </p><p>‘ಒಂದು ರಾಷ್ಟ್ರ, ಒಂದು ಚುನಾವಣೆ’ ಬಿಜೆಪಿಯ ಪ್ರಮುಖ ಕಾರ್ಯಸೂಚಿಯಾಗಿದ್ದು, 2014ರಲ್ಲಿ ಮೋದಿ ಅಧಿಕಾರಕ್ಕೆ ಬಂದಾಗಿನಿಂದಲೂ ಅದರ ಜಾರಿಗೆ ಚಿಂತನೆ ನಡೆಸುತ್ತಿದ್ದರು. ಈ ಸಂಬಂಧ ಅಧ್ಯಯನ ನಡೆಸಿ ವರದಿ ನೀಡಲು ಮಾಜಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಅಧ್ಯಕ್ಷತೆಯ ಉನ್ನತ ಮಟ್ಟದ ಸಮಿತಿಯನ್ನು ಸರ್ಕಾರ ನೇಮಿಸಿತ್ತು.</p><p>ಸಮಿತಿಯು ಒಟ್ಟಿಗೆ ಚುನಾವಣೆ ನಡೆಸುವ ಸಂಬಂಧ 62 ಪಕ್ಷಗಳ ಅಭಿಪ್ರಾಯ ಕೇಳಿತ್ತು. 47 ಪಕ್ಷಗಳ ಪರವಾಗಿ ಅಭಿಪ್ರಾಯ ನೀಡಿದರೆ, 15 ಪಕ್ಷಗಳು ಪ್ರಸ್ತಾವ ವಿರೋಧಿಸಿದ್ದವು. ಸಮಿತಿಯು ಮಾರ್ಚ್ನಲ್ಲಿ 18,626 ಪುಟಗಳ ವರದಿ ಸಲ್ಲಿಸಿತ್ತು. ಸಂವಿಧಾನಕ್ಕೆ 18 ತಿದ್ದುಪಡಿಗಳನ್ನು ಸಮಿತಿ ಶಿಫಾರಸು ಮಾಡಿತ್ತು. ಈ ಸಮಿತಿಯ ಶಿಫಾರಸುಗಳನ್ನು ಕೇಂದ್ರ ಸಚಿವ ಸಂಪುಟ ಸೆಪ್ಟೆಂಬರ್ ತಿಂಗಳಲ್ಲಿ ಅಂಗೀಕರಿಸಿತ್ತು. </p><p>ಸದ್ಯಕ್ಕೆ, ಲೋಕಸಭೆ ಮತ್ತು ವಿಧಾನಸಭೆಗಳಿಗೆ ಮಾತ್ರ ಏಕಕಾಲದಲ್ಲಿ ಚುನಾವಣೆ ನಡೆಸುವ ಕರಡು ಮಸೂದೆಗೆ ಸಂಪುಟ ಒಪ್ಪಿಗೆ ನೀಡಿದೆ ಎಂದು ಮೂಲಗಳು ತಿಳಿಸಿವೆ. ಈ ಮೂಲಕ ಬಿಜೆಪಿಯ ಮತ್ತೊಂದು ‘ಕಾರ್ಯಸೂಚಿ’ಯನ್ನು ಕಾರ್ಯಗತಗೊಳಿಸಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಮೈತ್ರಿ ಸರ್ಕಾರ ಮುಂದಡಿ ಇಟ್ಟಿದೆ. </p><p>ಲೋಕಸಭೆ ಹಾಗೂ ವಿಧಾನಸಭಾ ಚುನಾವಣೆಗಳ ಜತೆಗೆ ಪುರಸಭೆ ಹಾಗೂ ಪಂಚಾಯಿತಿಗಳ ಚುನಾವಣೆಗಳನ್ನು ಹಂತ ಹಂತವಾಗಿ ನಡೆಸಲು ಉನ್ನತ ಮಟ್ಟದ ಸಮಿತಿ ಶಿಫಾರಸು ಮಾಡಿತ್ತು. ಇದಕ್ಕೆ ಶೇ 50ರಷ್ಟು ವಿಧಾನಸಭೆಗಳ ಒಪ್ಪಿಗೆ ಅಗತ್ಯ ಇತ್ತು. </p><p>ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸುವ ಸಂವಿಧಾನ ತಿದ್ದುಪಡಿ ಮಸೂದೆಗೆ ಕನಿಷ್ಠ ಶೇ 50ರಷ್ಟು ರಾಜ್ಯಗಳ ಅನುಮೋದನೆ ಅಗತ್ಯವಿರುವುದಿಲ್ಲ ಎಂದು ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>