<p><strong>ನವದೆಹಲಿ:</strong> ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರ, ‘ಒಂದು ರಾಷ್ಟ್ರ, ಒಂದೇ ಚುನಾವಣೆ’ಗೆ ಸಂಬಂಧಿತ ಎರಡು ಪ್ರತ್ಯೇಕ ಮಸೂದೆಗಳನ್ನು ಇಂದು (ಮಂಗಳವಾರ) ಲೋಕಸಭೆಯಲ್ಲಿ ಮಂಡಿಸಲಿದೆ.</p><p>ಲೋಕಸಭೆ ಕಲಾಪ ಕಾರ್ಯಸೂಚಿಯಲ್ಲಿ ಈ ಅಂಶ ಸೇರ್ಪಡೆಗೊಂಡಿದೆ. ಮಸೂದೆಗೆ ಸಮ್ಮತಿ ನೀಡುವ ಮೂಲಕ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸಂಪುಟ, ಈ ನಿಟ್ಟಿನಲ್ಲಿ ಪ್ರಮುಖ ಹೆಜ್ಜೆ ಇಟ್ಟಿತ್ತು. </p><p>ಕೇಂದ್ರ ಕಾನೂನು ಸಚಿವ ಅರುಣ್ ರಾಮ್ ಮೇಘವಾಲ್ ಅವರು ‘ಸಂವಿಧಾನ (129ನೇ ತಿದ್ದುಪಡಿ) ಮಸೂದೆ ಹಾಗೂ ‘ಕೇಂದ್ರ ಪ್ರಾಂತ್ಯವಾರು ಕಾಯ್ದೆಗಳು (ತಿದ್ದುಪಡಿ)’ ಮಸೂದೆ ಮಂಡಿಸಲಿದ್ದಾರೆ.</p><p>ಲೋಕಸಭೆಯಲ್ಲಿ ಮಂಡನೆಯಾಗಲಿರುವ ಹೊಸ ಮಸೂದೆಗಳ ಕುರಿತು ಚರ್ಚೆ ನಡೆಯುವ ಸಂಭವವಿದ್ದು, ತನ್ನ ಸಂಸದರ ಕಡ್ಡಾಯ ಹಾಜರಾತಿಗೆ ಬಿಜೆಪಿ ಮತ್ತು ಕಾಂಗ್ರೆಸ್ ವಿಪ್ ಜಾರಿ ಮಾಡಿವೆ. </p><p>ಮೇಘವಾಲ್ ಅವರು ಮಸೂದೆಗಳನ್ನು ಸಂಸತ್ತಿನಲ್ಲಿ ಮಂಡಿಸಿದ ನಂತರ ಹೆಚ್ಚಿನ ಸಮಾಲೋಚನೆ ನಡೆಸುವಂತೆ ಜಂಟಿ ಸಂಸದೀಯ ಸಮಿತಿಗೆ (ಜೆಪಿಸಿ) ಸೂಚಿಸುವಂತೆ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರಿಗೆ ಮನವಿ ಮಾಡುವ ಸಾಧ್ಯತೆಯಿದೆ.</p><p>ವಿಧಾನಸಭೆ ಅಸ್ತಿತ್ವದಲ್ಲಿರುವ ಮೂರು ಕೇಂದ್ರಾಡಳಿತ ಪ್ರದೇಶಗಳಿಗೆ ಸಂಬಂಧಿಸಿರುವ ಕಾಯ್ದೆ ಮತ್ತು ರಾಜ್ಯ ವಿಧಾನಸಭೆಗಳಿಗೆ ಸಂಬಂಧಿಸಿದ ಮಸೂದೆಗೆ ಒಗ್ಗೂಡಿಸುವ ಒಂದು ಸರಳ ಮಸೂದೆ ಹಾಗೂ ಸಂವಿಧಾನ (ತಿದ್ದುಪಡಿ) ಮಸೂದೆಗಳಿಗೆ ಕೇಂದ್ರ ಸಂಪುಟ ಈಚೆಗೆ ಅನುಮೋದನೆ ನೀಡಿತ್ತು.</p><p>ಉದ್ದೇಶಿತ ತಿದ್ದುಪಡಿ ಮಸೂದೆಗಳು ದೇಶದಲ್ಲಿ ಲೋಕಸಭೆ ಹಾಗೂ ವಿವಿಧ ರಾಜ್ಯಗಳ ವಿಧಾನಸಭೆಗೆ ಏಕಕಾಲದಲ್ಲಿ ಚುನಾವಣೆಯನ್ನು ನಡೆಸಲು ಅವಕಾಶ ಕಲ್ಪಿಸಲಿವೆ.</p><p>ಮಾಜಿ ರಾಷ್ಟ್ರಪತಿ ರಾಮನಾಥ ಕೋವಿಂದ್ ನೇತೃತ್ವದ ಸಮಿತಿ ರಾಷ್ಟ್ರೀಯ, ರಾಜ್ಯ ಚುನಾವಣೆಗಳ ಜೊತೆಗೆ ಸ್ಥಳೀಯ ಸಂಸ್ಥೆಗಳಿಗೂ ಚುನಾವಣೆ ನಡೆಸಲು ಪ್ರಸ್ತಾಪ ಮಾಡಿತ್ತು. ಆದರೆ, ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ಅಂಶವನ್ನು ‘ಸದ್ಯಕ್ಕೆ’ ಪರಿಗಣಿಸದಿರಲು ಸಂಪುಟ ತೀರ್ಮಾನಿಸಿತ್ತು.</p>.Editorial | ಒಂದು ರಾಷ್ಟ್ರ, ಒಂದು ಚುನಾವಣೆ: ಕಾರ್ಯಸಾಧುವಲ್ಲ, ಬಾಧಕವೇ ಹೆಚ್ಚು.ಈ ಅವಧಿಯಲ್ಲೇ ಒಂದು ರಾಷ್ಟ್ರ, ಒಂದು ಚುನಾವಣೆ ಜಾರಿ: ಅಮಿತ್ ಶಾ.‘ಒಂದು ರಾಷ್ಟ್ರ, ಒಂದೇ ಚುನಾವಣೆ’: ಮಸೂದೆ ಮಂಡನೆ ನಾಳೆ .ಒಂದು ರಾಷ್ಟ್ರ, ಒಂದು ಚುನಾವಣೆ: ಮಸೂದೆಗೆ ಸಂಪುಟ ಅನುಮೋದನೆ.‘ಒಂದು ರಾಷ್ಟ್ರ, ಒಂದು ಚುನಾವಣೆ’ ಮಸೂದೆ: ಹಿಂದೆ ಸರಿದ ಕೇಂದ್ರ.‘ಒಂದು ರಾಷ್ಟ್ರ, ಒಂದು ಚುನಾವಣೆ’ ಮಸೂದೆಗೆ ಮಾಯಾವತಿ ಬೆಂಬಲ .‘ಒಂದು ರಾಷ್ಟ್ರ, ಒಂದು ಚುನಾವಣೆ’ ವಿರುದ್ಧ ನಿರ್ಣಯ ಅಂಗೀಕರಿಸಿದ ವಿಜಯ್ TVK ಪಕ್ಷ.ಒಂದು ರಾಷ್ಟ್ರ, ಒಂದು ಚುನಾವಣೆ | ಕೋಳಿ ಹಿಡಿಯಲಾರದವರು ಸಲಹೆ ಕೊಟ್ಟಂತೆ: ಸ್ಟಾಲಿನ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರ, ‘ಒಂದು ರಾಷ್ಟ್ರ, ಒಂದೇ ಚುನಾವಣೆ’ಗೆ ಸಂಬಂಧಿತ ಎರಡು ಪ್ರತ್ಯೇಕ ಮಸೂದೆಗಳನ್ನು ಇಂದು (ಮಂಗಳವಾರ) ಲೋಕಸಭೆಯಲ್ಲಿ ಮಂಡಿಸಲಿದೆ.</p><p>ಲೋಕಸಭೆ ಕಲಾಪ ಕಾರ್ಯಸೂಚಿಯಲ್ಲಿ ಈ ಅಂಶ ಸೇರ್ಪಡೆಗೊಂಡಿದೆ. ಮಸೂದೆಗೆ ಸಮ್ಮತಿ ನೀಡುವ ಮೂಲಕ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸಂಪುಟ, ಈ ನಿಟ್ಟಿನಲ್ಲಿ ಪ್ರಮುಖ ಹೆಜ್ಜೆ ಇಟ್ಟಿತ್ತು. </p><p>ಕೇಂದ್ರ ಕಾನೂನು ಸಚಿವ ಅರುಣ್ ರಾಮ್ ಮೇಘವಾಲ್ ಅವರು ‘ಸಂವಿಧಾನ (129ನೇ ತಿದ್ದುಪಡಿ) ಮಸೂದೆ ಹಾಗೂ ‘ಕೇಂದ್ರ ಪ್ರಾಂತ್ಯವಾರು ಕಾಯ್ದೆಗಳು (ತಿದ್ದುಪಡಿ)’ ಮಸೂದೆ ಮಂಡಿಸಲಿದ್ದಾರೆ.</p><p>ಲೋಕಸಭೆಯಲ್ಲಿ ಮಂಡನೆಯಾಗಲಿರುವ ಹೊಸ ಮಸೂದೆಗಳ ಕುರಿತು ಚರ್ಚೆ ನಡೆಯುವ ಸಂಭವವಿದ್ದು, ತನ್ನ ಸಂಸದರ ಕಡ್ಡಾಯ ಹಾಜರಾತಿಗೆ ಬಿಜೆಪಿ ಮತ್ತು ಕಾಂಗ್ರೆಸ್ ವಿಪ್ ಜಾರಿ ಮಾಡಿವೆ. </p><p>ಮೇಘವಾಲ್ ಅವರು ಮಸೂದೆಗಳನ್ನು ಸಂಸತ್ತಿನಲ್ಲಿ ಮಂಡಿಸಿದ ನಂತರ ಹೆಚ್ಚಿನ ಸಮಾಲೋಚನೆ ನಡೆಸುವಂತೆ ಜಂಟಿ ಸಂಸದೀಯ ಸಮಿತಿಗೆ (ಜೆಪಿಸಿ) ಸೂಚಿಸುವಂತೆ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರಿಗೆ ಮನವಿ ಮಾಡುವ ಸಾಧ್ಯತೆಯಿದೆ.</p><p>ವಿಧಾನಸಭೆ ಅಸ್ತಿತ್ವದಲ್ಲಿರುವ ಮೂರು ಕೇಂದ್ರಾಡಳಿತ ಪ್ರದೇಶಗಳಿಗೆ ಸಂಬಂಧಿಸಿರುವ ಕಾಯ್ದೆ ಮತ್ತು ರಾಜ್ಯ ವಿಧಾನಸಭೆಗಳಿಗೆ ಸಂಬಂಧಿಸಿದ ಮಸೂದೆಗೆ ಒಗ್ಗೂಡಿಸುವ ಒಂದು ಸರಳ ಮಸೂದೆ ಹಾಗೂ ಸಂವಿಧಾನ (ತಿದ್ದುಪಡಿ) ಮಸೂದೆಗಳಿಗೆ ಕೇಂದ್ರ ಸಂಪುಟ ಈಚೆಗೆ ಅನುಮೋದನೆ ನೀಡಿತ್ತು.</p><p>ಉದ್ದೇಶಿತ ತಿದ್ದುಪಡಿ ಮಸೂದೆಗಳು ದೇಶದಲ್ಲಿ ಲೋಕಸಭೆ ಹಾಗೂ ವಿವಿಧ ರಾಜ್ಯಗಳ ವಿಧಾನಸಭೆಗೆ ಏಕಕಾಲದಲ್ಲಿ ಚುನಾವಣೆಯನ್ನು ನಡೆಸಲು ಅವಕಾಶ ಕಲ್ಪಿಸಲಿವೆ.</p><p>ಮಾಜಿ ರಾಷ್ಟ್ರಪತಿ ರಾಮನಾಥ ಕೋವಿಂದ್ ನೇತೃತ್ವದ ಸಮಿತಿ ರಾಷ್ಟ್ರೀಯ, ರಾಜ್ಯ ಚುನಾವಣೆಗಳ ಜೊತೆಗೆ ಸ್ಥಳೀಯ ಸಂಸ್ಥೆಗಳಿಗೂ ಚುನಾವಣೆ ನಡೆಸಲು ಪ್ರಸ್ತಾಪ ಮಾಡಿತ್ತು. ಆದರೆ, ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ಅಂಶವನ್ನು ‘ಸದ್ಯಕ್ಕೆ’ ಪರಿಗಣಿಸದಿರಲು ಸಂಪುಟ ತೀರ್ಮಾನಿಸಿತ್ತು.</p>.Editorial | ಒಂದು ರಾಷ್ಟ್ರ, ಒಂದು ಚುನಾವಣೆ: ಕಾರ್ಯಸಾಧುವಲ್ಲ, ಬಾಧಕವೇ ಹೆಚ್ಚು.ಈ ಅವಧಿಯಲ್ಲೇ ಒಂದು ರಾಷ್ಟ್ರ, ಒಂದು ಚುನಾವಣೆ ಜಾರಿ: ಅಮಿತ್ ಶಾ.‘ಒಂದು ರಾಷ್ಟ್ರ, ಒಂದೇ ಚುನಾವಣೆ’: ಮಸೂದೆ ಮಂಡನೆ ನಾಳೆ .ಒಂದು ರಾಷ್ಟ್ರ, ಒಂದು ಚುನಾವಣೆ: ಮಸೂದೆಗೆ ಸಂಪುಟ ಅನುಮೋದನೆ.‘ಒಂದು ರಾಷ್ಟ್ರ, ಒಂದು ಚುನಾವಣೆ’ ಮಸೂದೆ: ಹಿಂದೆ ಸರಿದ ಕೇಂದ್ರ.‘ಒಂದು ರಾಷ್ಟ್ರ, ಒಂದು ಚುನಾವಣೆ’ ಮಸೂದೆಗೆ ಮಾಯಾವತಿ ಬೆಂಬಲ .‘ಒಂದು ರಾಷ್ಟ್ರ, ಒಂದು ಚುನಾವಣೆ’ ವಿರುದ್ಧ ನಿರ್ಣಯ ಅಂಗೀಕರಿಸಿದ ವಿಜಯ್ TVK ಪಕ್ಷ.ಒಂದು ರಾಷ್ಟ್ರ, ಒಂದು ಚುನಾವಣೆ | ಕೋಳಿ ಹಿಡಿಯಲಾರದವರು ಸಲಹೆ ಕೊಟ್ಟಂತೆ: ಸ್ಟಾಲಿನ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>