<p><strong>ಬೆಂಗಳೂರು</strong>: ‘ಒಂದು ದೇಶ–ಒಂದು ಚುನಾವಣೆ’ ಕುರಿತಾಗಿ ರಾಜಕೀಯ ಪಕ್ಷಗಳು ಸಲ್ಲಿಸಿರುವ ಎಲ್ಲ ಸಲಹೆ ಮತ್ತು ಮನವಿಗಳನ್ನು ಶಿಫಾರಸಿನಲ್ಲಿ ಸೇರಿಸುತ್ತೇವೆ’ ಎಂದು ಸಂವಿಧಾನದ 129ನೇ ತಿದ್ದುಪಡಿ ಮೇಲಿನ ಜಂಟಿ ಸಂಸದೀಯ ಸಮಿತಿ ಅಧ್ಯಕ್ಷ ಪಿ.ಪಿ.ಚೌಧರಿ ತಿಳಿಸಿದರು.</p>.<p>ಜಂಟಿ ಸಂಸದೀಯ ಸಮಿತಿಯು ದೇಶದ ಎಲ್ಲ ರಾಜ್ಯಗಳಲ್ಲಿ ರಾಜಕೀಯ ಪಕ್ಷಗಳ ಅಭಿಪ್ರಾಯ ಸಂಗ್ರಹಿಸುತ್ತಿದೆ. ಈ ಭಾಗವಾಗಿ ರಾಜ್ಯದ ಪ್ರಮುಖ ಪಕ್ಷಗಳ ಜತೆಗೆ ಶನಿವಾರ ಸಭೆ ನಡೆಸಿತು. ಕಾಂಗ್ರೆಸ್, ಬಿಜೆಪಿ, ಜೆಡಿಎಸ್, ಎಎಪಿ ಸೇರಿ ಹಲವು ಪಕ್ಷಗಳು ಸಭೆಯಲ್ಲಿ ಭಾಗಿಯಾಗಿ ತಮ್ಮ ಅಭಿಪ್ರಾಯವನ್ನು ಮಂಡಿಸಿದವು.</p>.<p>ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಚೌಧರಿ, ‘ಒಂದು ದೇಶ–ಒಂದು ಚುನಾವಣೆಯ ಅನುಕೂಲಗಳ ಬಗ್ಗೆ ಪಕ್ಷಗಳಿಗೆ ಮನವರಿಕೆ ಮಾಡಿಕೊಡಲಾಗಿದೆ. ಎಲ್ಲರೂ ತಮ್ಮ–ತಮ್ಮ ಅಭಿಪ್ರಾಯ ಮತ್ತು ನಿಲುವನ್ನು ಸಭೆಯಲ್ಲಿ ಮಂಡಿಸಿದವು’ ಎಂದರು.</p>.<p>‘ಒಂದು ಚುನಾವಣೆಯಿಂದ ದೇಶಕ್ಕೆ ಹಲವು ಅನುಕೂಲಗಳಿವೆ. ಲೋಕಸಭೆ ಮತ್ತು ಎಲ್ಲ ರಾಜ್ಯಗಳ ವಿಧಾನಸಭೆಗೆ ಚುನಾವಣೆ ನಡೆಸಲು ಆಗುತ್ತಿರುವ ಒಟ್ಟು ವೆಚ್ಚದಲ್ಲಿ, ಸುಮಾರು ₹7.50 ಲಕ್ಷ ಕೋಟಿಯಷ್ಟು ಉಳಿತಾಯ ಮಾಡಲು ಒಂದು ದೇಶ–ಒಂದು ಚುನಾವಣೆಯಿಂದ ಸಾಧ್ಯವಾಗಲಿದೆ’ ಎಂದರು.</p>.<p>‘ಒಂದು ದೇಶ–ಒಂದು ಚುನಾವಣೆ’ಯ ನಿಯಮಗಳಲ್ಲಿ ಕೆಲವು ಬದಲಾವಣೆಗಳನ್ನು ಮಾಡಿಕೊಳ್ಳಬೇಕು ಎಂದು ಜೆಡಿಎಸ್ ಮನವಿ ಸಲ್ಲಿಸಿದೆ. ಸಂಸದ ಮಲ್ಲೇಶ್ ಬಾಬು ನೇತೃತ್ವದಲ್ಲಿ ಜೆಡಿಎಸ್ ನಾಯಕರು ಸಭೆಯಲ್ಲಿ ಭಾಗಿಯಾಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಒಂದು ದೇಶ–ಒಂದು ಚುನಾವಣೆ’ ಕುರಿತಾಗಿ ರಾಜಕೀಯ ಪಕ್ಷಗಳು ಸಲ್ಲಿಸಿರುವ ಎಲ್ಲ ಸಲಹೆ ಮತ್ತು ಮನವಿಗಳನ್ನು ಶಿಫಾರಸಿನಲ್ಲಿ ಸೇರಿಸುತ್ತೇವೆ’ ಎಂದು ಸಂವಿಧಾನದ 129ನೇ ತಿದ್ದುಪಡಿ ಮೇಲಿನ ಜಂಟಿ ಸಂಸದೀಯ ಸಮಿತಿ ಅಧ್ಯಕ್ಷ ಪಿ.ಪಿ.ಚೌಧರಿ ತಿಳಿಸಿದರು.</p>.<p>ಜಂಟಿ ಸಂಸದೀಯ ಸಮಿತಿಯು ದೇಶದ ಎಲ್ಲ ರಾಜ್ಯಗಳಲ್ಲಿ ರಾಜಕೀಯ ಪಕ್ಷಗಳ ಅಭಿಪ್ರಾಯ ಸಂಗ್ರಹಿಸುತ್ತಿದೆ. ಈ ಭಾಗವಾಗಿ ರಾಜ್ಯದ ಪ್ರಮುಖ ಪಕ್ಷಗಳ ಜತೆಗೆ ಶನಿವಾರ ಸಭೆ ನಡೆಸಿತು. ಕಾಂಗ್ರೆಸ್, ಬಿಜೆಪಿ, ಜೆಡಿಎಸ್, ಎಎಪಿ ಸೇರಿ ಹಲವು ಪಕ್ಷಗಳು ಸಭೆಯಲ್ಲಿ ಭಾಗಿಯಾಗಿ ತಮ್ಮ ಅಭಿಪ್ರಾಯವನ್ನು ಮಂಡಿಸಿದವು.</p>.<p>ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಚೌಧರಿ, ‘ಒಂದು ದೇಶ–ಒಂದು ಚುನಾವಣೆಯ ಅನುಕೂಲಗಳ ಬಗ್ಗೆ ಪಕ್ಷಗಳಿಗೆ ಮನವರಿಕೆ ಮಾಡಿಕೊಡಲಾಗಿದೆ. ಎಲ್ಲರೂ ತಮ್ಮ–ತಮ್ಮ ಅಭಿಪ್ರಾಯ ಮತ್ತು ನಿಲುವನ್ನು ಸಭೆಯಲ್ಲಿ ಮಂಡಿಸಿದವು’ ಎಂದರು.</p>.<p>‘ಒಂದು ಚುನಾವಣೆಯಿಂದ ದೇಶಕ್ಕೆ ಹಲವು ಅನುಕೂಲಗಳಿವೆ. ಲೋಕಸಭೆ ಮತ್ತು ಎಲ್ಲ ರಾಜ್ಯಗಳ ವಿಧಾನಸಭೆಗೆ ಚುನಾವಣೆ ನಡೆಸಲು ಆಗುತ್ತಿರುವ ಒಟ್ಟು ವೆಚ್ಚದಲ್ಲಿ, ಸುಮಾರು ₹7.50 ಲಕ್ಷ ಕೋಟಿಯಷ್ಟು ಉಳಿತಾಯ ಮಾಡಲು ಒಂದು ದೇಶ–ಒಂದು ಚುನಾವಣೆಯಿಂದ ಸಾಧ್ಯವಾಗಲಿದೆ’ ಎಂದರು.</p>.<p>‘ಒಂದು ದೇಶ–ಒಂದು ಚುನಾವಣೆ’ಯ ನಿಯಮಗಳಲ್ಲಿ ಕೆಲವು ಬದಲಾವಣೆಗಳನ್ನು ಮಾಡಿಕೊಳ್ಳಬೇಕು ಎಂದು ಜೆಡಿಎಸ್ ಮನವಿ ಸಲ್ಲಿಸಿದೆ. ಸಂಸದ ಮಲ್ಲೇಶ್ ಬಾಬು ನೇತೃತ್ವದಲ್ಲಿ ಜೆಡಿಎಸ್ ನಾಯಕರು ಸಭೆಯಲ್ಲಿ ಭಾಗಿಯಾಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>