ಘಟನೆಯಲ್ಲಿ ಮೃತಪಟ್ಟ ಹೆಚ್ಚಿನವರು ಪರಿಶಿಷ್ಟ ಜಾತಿ ಹಾಗೂ ಮುಸ್ಲಿಂ ಸಮುದಾಯಕ್ಕೆ ಸೇರಿದವರು ಎಂದು ಪಾರ್ಮರ್ ತಿಳಿಸಿದರು.
‘ಮನೆ ಮನೆಗೆ ತೆರಳಿ ಕೆಲಸ ಮಾಡಿ ಮಗನನ್ನು ಬೆಳೆಸಿದೆ. ಸರ್ಕಾರದ ಯಾವುದೇ ಪರಿಹಾರವೂ ನನಗಾಗಿರುವ ಗಾಯವನ್ನು ಅಳಿಸಲು ಸಾಧ್ಯವಿಲ್ಲ’ ಎಂದು ಘಟನೆಯಲ್ಲಿ ಮಗನನ್ನು ಕಳೆದುಕೊಂಡ ತಾಯಿಯೊಬ್ಬರು ದುಃಖ ವ್ಯಕ್ತಪಡಿಸಿದರು.
ಗುಜರಾತ್ ಹೈಕೋರ್ಟ್ಗೆ ಸಲ್ಲಿಕೆಯಾದ ವರದಿ ಪ್ರಕಾರ ಈ ದುರಂತದಿಂದಾಗಿ, 20 ಮಕ್ಕಳು ಅನಾಥರಾಗಿದ್ದಾರೆ. 13 ಮಕ್ಕಳು ತಂದೆ–ತಾಯಿಯಲ್ಲಿ ಒಬ್ಬರನ್ನು ಕಳೆದುಕೊಂಡಿದ್ದಾರೆ. 7 ಮಕ್ಕಳು ಇಬ್ಬರನ್ನೂ ಕಳೆದುಕೊಂಡಿದ್ದಾರೆ.