<p><strong>ಶಿವಸಾಗರ್, ಅಸ್ಸಾಂ: </strong>ಸರ್ಕಾರಿ ಸ್ವಾಮ್ಯದ ತೈಲ ಕಂಪನಿ ಒಎನ್ಜಿಸಿಯ ಮೂವರು ನೌಕರರನ್ನು ಶಂಕಿತ ಉಲ್ಫಾ ಉಗ್ರರು ಬುಧವಾರಅಸ್ಸಾಂ-ನಾಗಾಲ್ಯಾಂಡ್ ಗಡಿಯಲ್ಲಿರುವ ಶಿವಸಾಗರ ಜಿಲ್ಲೆಯ ಲಕ್ವಾ ತೈಲಕ್ಷೇತ್ರದಿಂದ ಅಪಹರಿಸಿದ್ದಾರೆ ಎಂದು ತೈಲ ಕಂಪನಿಯ ಪ್ರಕಟಣೆ ತಿಳಿಸಿದೆ.</p>.<p>ಶಿವಸಾಗರದ ಲಕ್ವಾ ಕ್ಷೇತ್ರದ ಒಎನ್ಜಿಸಿಯ ರಿಗ್ ಸೈಟ್ನಿಂದ ಮೂವರು ನೌಕರರನ್ನು ಬುಧವಾರ ಮುಂಜಾನೆ ಅಪರಿಚಿತ ಶಸ್ತ್ರಸಜ್ಜಿತ ದುಷ್ಕರ್ಮಿಗಳು ಅಪಹರಿಸಿದ್ದಾರೆ ಎಂದು ಪ್ರಕಟಣೆಯಲ್ಲಿ ವಿವರಿಸಲಾಗಿದೆ.</p>.<p>ಉತ್ಪಾದನಾ ವಿಭಾಗದ ಕಿರಿಯ ತಂತ್ರಜ್ಞರಾದ ಎಂಎಂ ಗೊಗೊಯ್ ಮತ್ತು ರಿತುಲ್ ಸೈಕಿಯಾ ಹಾಗೂ ಸಹಾಯಕ ಜೂನಿಯರ್ ಎಂಜಿನಿಯರ್ ಅಲಕೇಶ್ ಸೈಕಿಯಾ ಅಪಹೃತಗೊಂಡಿರುವ ನೌಕರರು ಎಂದು ಒಎನ್ಜಿಸಿ ವಕ್ತಾರರು ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.</p>.<p>‘ಈ ನೌಕರರನ್ನು ಒಎನ್ಜಿಸಿಗೆ ಸೇರಿದ ವಾಹನದಲ್ಲೇ ಅಪಹರಿಸಲಾಗಿದೆ. ಆ ವಾಹನವನ್ನು ಅಸ್ಸಾಂ–ನಾಗಾಲ್ಯಾಂಡ್ ಗಡಿಯ ಸಮೀಪದ ನಿಮೊನಗಡ ಅರಣ್ಯದ ಬಳಿ ಪತ್ತೆಯಾಗಿದೆ‘ ಎಂದು ಕಂಪನಿ ಪ್ರಕಟಣೆಯಲ್ಲಿ ತಿಳಿಸಿದೆ.</p>.<p>ಪ್ರಾಥಮಿಕ ಮಾಹಿತಿಯ ಪ್ರಕಾರ ಈ ಅಪಹರಣದ ಹಿಂದೆ ಶಂಕಿತ ಉಲ್ಫಾ ಉಗ್ರರ ಕೈವಾಡವಿದ್ದು, ಅವರು ನಾಗಲ್ಯಾಂಡ್ ಮೂಲಕ ಪರಾರಿಯಾಗಿದ್ದಾರೆ ಎಂದು ಶಿವಸಾಗರ ಜಿಲ್ಲಾಡಳಿತದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ತನಿಖೆಯ ನಂತರ ಪೂರ್ಣ ವಿಷಯ ತಿಳಿಯಲಿದೆ‘ ಎಂದು ಅವರು ಹೇಳಿದ್ದಾರೆ.</p>.<p>ಪ್ರಕರಣಕ್ಕೆ ಸಂಬಂಧಿಸಿದಂತೆ ಒಎನ್ಜಿಸಿ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ. ತನಿಖೆ ಮುಂದುವರಿದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಸಾಗರ್, ಅಸ್ಸಾಂ: </strong>ಸರ್ಕಾರಿ ಸ್ವಾಮ್ಯದ ತೈಲ ಕಂಪನಿ ಒಎನ್ಜಿಸಿಯ ಮೂವರು ನೌಕರರನ್ನು ಶಂಕಿತ ಉಲ್ಫಾ ಉಗ್ರರು ಬುಧವಾರಅಸ್ಸಾಂ-ನಾಗಾಲ್ಯಾಂಡ್ ಗಡಿಯಲ್ಲಿರುವ ಶಿವಸಾಗರ ಜಿಲ್ಲೆಯ ಲಕ್ವಾ ತೈಲಕ್ಷೇತ್ರದಿಂದ ಅಪಹರಿಸಿದ್ದಾರೆ ಎಂದು ತೈಲ ಕಂಪನಿಯ ಪ್ರಕಟಣೆ ತಿಳಿಸಿದೆ.</p>.<p>ಶಿವಸಾಗರದ ಲಕ್ವಾ ಕ್ಷೇತ್ರದ ಒಎನ್ಜಿಸಿಯ ರಿಗ್ ಸೈಟ್ನಿಂದ ಮೂವರು ನೌಕರರನ್ನು ಬುಧವಾರ ಮುಂಜಾನೆ ಅಪರಿಚಿತ ಶಸ್ತ್ರಸಜ್ಜಿತ ದುಷ್ಕರ್ಮಿಗಳು ಅಪಹರಿಸಿದ್ದಾರೆ ಎಂದು ಪ್ರಕಟಣೆಯಲ್ಲಿ ವಿವರಿಸಲಾಗಿದೆ.</p>.<p>ಉತ್ಪಾದನಾ ವಿಭಾಗದ ಕಿರಿಯ ತಂತ್ರಜ್ಞರಾದ ಎಂಎಂ ಗೊಗೊಯ್ ಮತ್ತು ರಿತುಲ್ ಸೈಕಿಯಾ ಹಾಗೂ ಸಹಾಯಕ ಜೂನಿಯರ್ ಎಂಜಿನಿಯರ್ ಅಲಕೇಶ್ ಸೈಕಿಯಾ ಅಪಹೃತಗೊಂಡಿರುವ ನೌಕರರು ಎಂದು ಒಎನ್ಜಿಸಿ ವಕ್ತಾರರು ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.</p>.<p>‘ಈ ನೌಕರರನ್ನು ಒಎನ್ಜಿಸಿಗೆ ಸೇರಿದ ವಾಹನದಲ್ಲೇ ಅಪಹರಿಸಲಾಗಿದೆ. ಆ ವಾಹನವನ್ನು ಅಸ್ಸಾಂ–ನಾಗಾಲ್ಯಾಂಡ್ ಗಡಿಯ ಸಮೀಪದ ನಿಮೊನಗಡ ಅರಣ್ಯದ ಬಳಿ ಪತ್ತೆಯಾಗಿದೆ‘ ಎಂದು ಕಂಪನಿ ಪ್ರಕಟಣೆಯಲ್ಲಿ ತಿಳಿಸಿದೆ.</p>.<p>ಪ್ರಾಥಮಿಕ ಮಾಹಿತಿಯ ಪ್ರಕಾರ ಈ ಅಪಹರಣದ ಹಿಂದೆ ಶಂಕಿತ ಉಲ್ಫಾ ಉಗ್ರರ ಕೈವಾಡವಿದ್ದು, ಅವರು ನಾಗಲ್ಯಾಂಡ್ ಮೂಲಕ ಪರಾರಿಯಾಗಿದ್ದಾರೆ ಎಂದು ಶಿವಸಾಗರ ಜಿಲ್ಲಾಡಳಿತದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ತನಿಖೆಯ ನಂತರ ಪೂರ್ಣ ವಿಷಯ ತಿಳಿಯಲಿದೆ‘ ಎಂದು ಅವರು ಹೇಳಿದ್ದಾರೆ.</p>.<p>ಪ್ರಕರಣಕ್ಕೆ ಸಂಬಂಧಿಸಿದಂತೆ ಒಎನ್ಜಿಸಿ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ. ತನಿಖೆ ಮುಂದುವರಿದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>