<p><strong>ಹೈದರಾಬಾದ್</strong>: ಆಂಧ್ರಪ್ರದೇಶದ ಡಾ.ಬಿ.ಆರ್.ಅಂಬೇಡ್ಕರ್ ಕೋನಸೀಮ ಜಿಲ್ಲೆಯಲ್ಲಿರುವ ಒಎನ್ಜಿಸಿಗೆ ಸೇರಿದ ಡ್ರಿಲ್ಲಿಂಗ್ ತಾಣದಲ್ಲಿ ಸೋಮವಾರ ಭಾರಿ ಪ್ರಮಾಣದಲ್ಲಿ ಅನಿಲ ಸೋರಿಕೆಯಾದ ಪರಿಣಾಮ ಬೆಂಕಿ ಹೊತ್ತಿಕೊಂಡು ಆತಂಕ ಸೃಷ್ಟಿಯಾಗಿತ್ತು.</p>.<p>ಜಿಲ್ಲೆಯ ಮಲ್ಕಿಪುರಂ ತಾಲ್ಲೂಕಿನ ಇರುಸುಮಂಡಲಮ್ ಗ್ರಾಮದಲ್ಲಿ ಈ ಅವಘಡ ಸಂಭವಿಸಿದೆ. ಅನಿಲವು ಗಗನಮುಖಿಯಾಗಿ ಹೊರಹೊಮ್ಮಿದ್ದಲ್ಲದೇ, ಭಾರಿ ಪ್ರಮಾಣದ ಜ್ವಾಲೆ ಹೊತ್ತಿಕೊಳ್ಳಲೂ ಕಾರಣವಾಯಿತು. ಇದರ ಪರಿಣಾಮವಾಗಿ, ಆ ಪ್ರದೇಶದಲ್ಲಿ 500ಕ್ಕೂ ಹೆಚ್ಚು ತೆಂಗಿನ ಮರಗಳು ಸುಟ್ಟು ಕರಕಲಾಗಿವೆ.</p>.<p>ಈ ಅವಘಡ ಸಂಭವಿಸಿದ ಬೆನ್ನಲ್ಲೇ, ಮುಂಜಾಗ್ರತಾ ಕ್ರಮವಾಗಿ ಡ್ರಿಲ್ಲಿಂಗ್ ತಾಣದಿಂದ 5 ಕಿ.ಮೀ. ವ್ಯಾಪ್ತಿಯಲ್ಲಿ ವಾಸ ಮಾಡುತ್ತಿರುವ ಜನರನ್ನು ಅಧಿಕಾರಿಗಳು ಸ್ಥಳಾಂತರಗೊಳಿಸಿದರು.</p>.<p>ಅಗ್ನಿಶಾಮಕ ದಳ ಹಾಗೂ ತುರ್ತು ಸ್ಪಂದನಾ ತಂಡಗಳು ಸ್ಥಳಕ್ಕೆ ಧಾವಿಸಿ, ಅನಿಲ ಸೋರಿಕೆ ತಡೆಗಟ್ಟುವ ಜೊತೆಗೆ ಬೆಂಕಿ ನಂದಿಸಿದವು. ಬಾಧಿತ ಗ್ರಾಮಗಳ ಜನರಿಗಾಗಿ ಪರಿಹಾರ ಕೇಂದ್ರಗಳನ್ನು ಆರಂಭಿಸಲಾಗಿದೆ.</p>.<p>‘ಘಟನಾ ಸ್ಥಳದ ಸುತ್ತಮುತ್ತಲಿನ ಗ್ರಾಮಗಳ ಜನರಿಗೆ ಹಾಗೂ ಬಾಧಿತರಿಗೆ ಆಹಾರ, ನೀರು ಪೂರೈಕೆ ಹಾಗೂ ವೈದ್ಯಕೀಯ ಸೇವೆ ಒದಗಿಸುವಲ್ಲಿ ಯಾವುದೇ ಅಡಚಣೆಯಾಗದಂತೆ ಕ್ರಮ ಕೈಗೊಳ್ಳಬೇಕು’ ಎಂದು ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.</p>.<p><strong>ಘಟನಾ ಸ್ಥಳ:</strong> ಒಎನ್ಜಿಸಿಯು ಕೃಷ್ಣಾ ಗೋದಾವರಿ(ಕೆಜಿ) ತೀರ ಪ್ರದೇಶದಲ್ಲಿ ನೈಸರ್ಗಿಕ ಅನಿಲ ಸಂಸ್ಕರಣಾ ಕಾರ್ಯಾಚರಣೆ ನಡೆಸುತ್ತಿದೆ. ಇದರ ಭಾಗವಾಗಿ ಇರುಸುಮಂಡಲಮ್ ಗ್ರಾಮದ ಬಳಿ ಇರುವ ತಾಣದಲ್ಲಿ ಕಂಪನಿ ಪರವಾಗಿ ಡೀಪ್ ಇಂಡಸ್ಟ್ರೀಸ್ ಲಿಮಿಟೆಡ್, ಮೋರಿ ಫೀಲ್ಡ್ನಲ್ಲಿ ಡ್ರಿಲ್ಲಿಂಗ್ ಕಾರ್ಯಾಚರಣೆ ನಡೆಸುತ್ತಿದೆ.</p>.<p>ಕಾರ್ಯಾಚರಣೆ ವೇಳೆ, ಒತ್ತಡದಲ್ಲಿ ದಿಢೀರ್ ಹೆಚ್ಚಳ ಉಂಟಾಗಿದ್ದೇ ಅವಘಡಕ್ಕೆ ಕಾರಣ ಎಂಬುದು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ. ಈ ತಾಣದಿಂದ 500–600 ಮೀಟರ್ ವ್ಯಾಪ್ತಿಯಲ್ಲಿ ಜನವಸತಿ ಇಲ್ಲ. ಹೀಗಾಗಿ ಯಾವುದೇ ಸಾವು–ನೋವು ಸಂಭವಿಸಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೈದರಾಬಾದ್</strong>: ಆಂಧ್ರಪ್ರದೇಶದ ಡಾ.ಬಿ.ಆರ್.ಅಂಬೇಡ್ಕರ್ ಕೋನಸೀಮ ಜಿಲ್ಲೆಯಲ್ಲಿರುವ ಒಎನ್ಜಿಸಿಗೆ ಸೇರಿದ ಡ್ರಿಲ್ಲಿಂಗ್ ತಾಣದಲ್ಲಿ ಸೋಮವಾರ ಭಾರಿ ಪ್ರಮಾಣದಲ್ಲಿ ಅನಿಲ ಸೋರಿಕೆಯಾದ ಪರಿಣಾಮ ಬೆಂಕಿ ಹೊತ್ತಿಕೊಂಡು ಆತಂಕ ಸೃಷ್ಟಿಯಾಗಿತ್ತು.</p>.<p>ಜಿಲ್ಲೆಯ ಮಲ್ಕಿಪುರಂ ತಾಲ್ಲೂಕಿನ ಇರುಸುಮಂಡಲಮ್ ಗ್ರಾಮದಲ್ಲಿ ಈ ಅವಘಡ ಸಂಭವಿಸಿದೆ. ಅನಿಲವು ಗಗನಮುಖಿಯಾಗಿ ಹೊರಹೊಮ್ಮಿದ್ದಲ್ಲದೇ, ಭಾರಿ ಪ್ರಮಾಣದ ಜ್ವಾಲೆ ಹೊತ್ತಿಕೊಳ್ಳಲೂ ಕಾರಣವಾಯಿತು. ಇದರ ಪರಿಣಾಮವಾಗಿ, ಆ ಪ್ರದೇಶದಲ್ಲಿ 500ಕ್ಕೂ ಹೆಚ್ಚು ತೆಂಗಿನ ಮರಗಳು ಸುಟ್ಟು ಕರಕಲಾಗಿವೆ.</p>.<p>ಈ ಅವಘಡ ಸಂಭವಿಸಿದ ಬೆನ್ನಲ್ಲೇ, ಮುಂಜಾಗ್ರತಾ ಕ್ರಮವಾಗಿ ಡ್ರಿಲ್ಲಿಂಗ್ ತಾಣದಿಂದ 5 ಕಿ.ಮೀ. ವ್ಯಾಪ್ತಿಯಲ್ಲಿ ವಾಸ ಮಾಡುತ್ತಿರುವ ಜನರನ್ನು ಅಧಿಕಾರಿಗಳು ಸ್ಥಳಾಂತರಗೊಳಿಸಿದರು.</p>.<p>ಅಗ್ನಿಶಾಮಕ ದಳ ಹಾಗೂ ತುರ್ತು ಸ್ಪಂದನಾ ತಂಡಗಳು ಸ್ಥಳಕ್ಕೆ ಧಾವಿಸಿ, ಅನಿಲ ಸೋರಿಕೆ ತಡೆಗಟ್ಟುವ ಜೊತೆಗೆ ಬೆಂಕಿ ನಂದಿಸಿದವು. ಬಾಧಿತ ಗ್ರಾಮಗಳ ಜನರಿಗಾಗಿ ಪರಿಹಾರ ಕೇಂದ್ರಗಳನ್ನು ಆರಂಭಿಸಲಾಗಿದೆ.</p>.<p>‘ಘಟನಾ ಸ್ಥಳದ ಸುತ್ತಮುತ್ತಲಿನ ಗ್ರಾಮಗಳ ಜನರಿಗೆ ಹಾಗೂ ಬಾಧಿತರಿಗೆ ಆಹಾರ, ನೀರು ಪೂರೈಕೆ ಹಾಗೂ ವೈದ್ಯಕೀಯ ಸೇವೆ ಒದಗಿಸುವಲ್ಲಿ ಯಾವುದೇ ಅಡಚಣೆಯಾಗದಂತೆ ಕ್ರಮ ಕೈಗೊಳ್ಳಬೇಕು’ ಎಂದು ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.</p>.<p><strong>ಘಟನಾ ಸ್ಥಳ:</strong> ಒಎನ್ಜಿಸಿಯು ಕೃಷ್ಣಾ ಗೋದಾವರಿ(ಕೆಜಿ) ತೀರ ಪ್ರದೇಶದಲ್ಲಿ ನೈಸರ್ಗಿಕ ಅನಿಲ ಸಂಸ್ಕರಣಾ ಕಾರ್ಯಾಚರಣೆ ನಡೆಸುತ್ತಿದೆ. ಇದರ ಭಾಗವಾಗಿ ಇರುಸುಮಂಡಲಮ್ ಗ್ರಾಮದ ಬಳಿ ಇರುವ ತಾಣದಲ್ಲಿ ಕಂಪನಿ ಪರವಾಗಿ ಡೀಪ್ ಇಂಡಸ್ಟ್ರೀಸ್ ಲಿಮಿಟೆಡ್, ಮೋರಿ ಫೀಲ್ಡ್ನಲ್ಲಿ ಡ್ರಿಲ್ಲಿಂಗ್ ಕಾರ್ಯಾಚರಣೆ ನಡೆಸುತ್ತಿದೆ.</p>.<p>ಕಾರ್ಯಾಚರಣೆ ವೇಳೆ, ಒತ್ತಡದಲ್ಲಿ ದಿಢೀರ್ ಹೆಚ್ಚಳ ಉಂಟಾಗಿದ್ದೇ ಅವಘಡಕ್ಕೆ ಕಾರಣ ಎಂಬುದು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ. ಈ ತಾಣದಿಂದ 500–600 ಮೀಟರ್ ವ್ಯಾಪ್ತಿಯಲ್ಲಿ ಜನವಸತಿ ಇಲ್ಲ. ಹೀಗಾಗಿ ಯಾವುದೇ ಸಾವು–ನೋವು ಸಂಭವಿಸಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>