<p><strong>ಭೋಪಾಲ್:</strong> ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕೃಷಿ ಉತ್ಪನ್ನಗಳ ಕನಿಷ್ಠ ಬೆಂಬಲ ಬೆಲೆಗೆ(ಎಂಎಸ್ಪಿ) ಕಾನೂನಿನ ಖಾತರಿ ನೀಡಲಾಗುವುದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. </p><p>ರಾಹುಲ್ ಗಾಂಧಿ ನೇತೃತ್ವದ ಭಾರತ ಜೋಡೊ ನ್ಯಾಯ ಯಾತ್ರೆಯು ರಾಜಸ್ಥಾನದ ಧೋಲಪುರದಿಂದ ಶನಿವಾರ ಮಧ್ಯಾಹ್ನ ಮಧ್ಯಪ್ರದೇಶಕ್ಕೆ ಪ್ರವೇಶ ಮಾಡಿತು. ಈ ವೇಳೆ ಮಧ್ಯಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಜಿತು ಪಟ್ವಾರಿ ಅವರು ಮೊರೆನಾ ಜಿಲ್ಲೆಯ ಗಡಿಯಲ್ಲಿ ರಾಹುಲ್ ಗಾಂಧಿ ಅವರನ್ನು ರಾಜ್ಯಕ್ಕೆ ಬರಮಾಡಿಕೊಂಡರು.</p><p>ಮೊರೆನಾದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಕನಿಷ್ಠ ಬೆಂಬಲ ಬೆಲೆಗೆ (ಎಂಎಸ್ಪಿ) ಕಾನೂನಿನ ಖಾತರಿ ನೀಡಲಾಗುವುದು ಎಂದು ಭರವಸೆ ನೀಡಿದರು.</p>.ಐದು ವರ್ಷ ಎಂಎಸ್ಪಿ ಖಾತರಿ: ರೈತ ಮುಖಂಡರ ಮುಂದೆ ಕೇಂದ್ರ ಸರ್ಕಾರದ ಪ್ರಸ್ತಾವ.ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ನಮ್ಮ ಮೊದಲ ಗ್ಯಾರಂಟಿ ಎಂಎಸ್ಪಿ ಖಾತರಿ: ಖರ್ಗೆ.<p>ಕೇಂದ್ರದ ಬಿಜೆಪಿ ಸರ್ಕಾರ ಹತ್ತು ಉದ್ಯಮಿಗಳ ₹ 16 ಲಕ್ಷ ಕೋಟಿ ಸಾಲವನ್ನು ಮನ್ನಾ ಮಾಡಿದೆ. ಆದರೆ ರೈತರು ಹೋರಾಟ ಮಾಡುತ್ತಿರುವ ಎಂಎಸ್ಪಿಗೆ ಕಾನೂನು ಖಾತರಿ ನೀಡಲು ನಿರಾಕರಿಸುತ್ತಿದೆ ಎಂದು ಕೇಂದ್ರದ ವಿರುದ್ಧ ಆರೋಪಿಸಿದರು.</p><p>ಇತರೆ ಹಿಂದುಳಿದ ವರ್ಗಗಳು, ದಲಿತರು ಮತ್ತು ಬುಡಕಟ್ಟು ಜನಾಂಗದವರು ಸೇರಿದಂತೆ ದೇಶದ ಶೇ. 73ರಷ್ಟು ಜನರಿಗೆ ಸರ್ಕಾರ ಮತ್ತು ಇತರೆ ಕ್ಷೇತ್ರಗಳಲ್ಲಿ ಯಾವುದೇ ಪ್ರಾತಿನಿಧ್ಯವಿಲ್ಲ. ಜಾತಿ ಆಧಾರಿತ ಜನಗಣತಿ ಮಾಡುವುದರಿಂದ ವಿವಿಧ ಕ್ಷೇತ್ರಗಳಲ್ಲಿ ಈ ಸಮುದಾಯಗಳ ಸಮಾನ ಭಾಗವಹಿಸುವಿಕೆಯನ್ನು ಖಾತ್ರಿಪಡಿಸಬಹುದು. ಇದರಿಂದ ಈ ಸಮುದಾಯಗಳಿಗೆ ನ್ಯಾಯ ಸಿಗಲಿದೆ ಎಂದು ರಾಹುಲ್ ಗಾಂಧಿ ಹೇಳಿದರು.</p><p>ಮಧ್ಯಪ್ರದೇಶದ ಮೊರೇನಾ, ಗ್ವಾಲಿಯರ್, ಗುನಾ, ರಾಜಗಢ, ಶಾಜಾಪುರ, ಉಜ್ಜಯಿನಿ, ಧಾರ್ ಹಾಗೂ ರಟ್ಲಂ ಜಿಲ್ಲೆಗಳಲ್ಲಿ ನ್ಯಾಯಾ ಯಾತ್ರೆ ಸಾಗಲಿದ್ದು, ಮಾ. 6ಕ್ಕೆ ಮತ್ತೆ ರಾಜಸ್ಥಾನವನ್ನು ಪ್ರವೇಶಿಸಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭೋಪಾಲ್:</strong> ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕೃಷಿ ಉತ್ಪನ್ನಗಳ ಕನಿಷ್ಠ ಬೆಂಬಲ ಬೆಲೆಗೆ(ಎಂಎಸ್ಪಿ) ಕಾನೂನಿನ ಖಾತರಿ ನೀಡಲಾಗುವುದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. </p><p>ರಾಹುಲ್ ಗಾಂಧಿ ನೇತೃತ್ವದ ಭಾರತ ಜೋಡೊ ನ್ಯಾಯ ಯಾತ್ರೆಯು ರಾಜಸ್ಥಾನದ ಧೋಲಪುರದಿಂದ ಶನಿವಾರ ಮಧ್ಯಾಹ್ನ ಮಧ್ಯಪ್ರದೇಶಕ್ಕೆ ಪ್ರವೇಶ ಮಾಡಿತು. ಈ ವೇಳೆ ಮಧ್ಯಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಜಿತು ಪಟ್ವಾರಿ ಅವರು ಮೊರೆನಾ ಜಿಲ್ಲೆಯ ಗಡಿಯಲ್ಲಿ ರಾಹುಲ್ ಗಾಂಧಿ ಅವರನ್ನು ರಾಜ್ಯಕ್ಕೆ ಬರಮಾಡಿಕೊಂಡರು.</p><p>ಮೊರೆನಾದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಕನಿಷ್ಠ ಬೆಂಬಲ ಬೆಲೆಗೆ (ಎಂಎಸ್ಪಿ) ಕಾನೂನಿನ ಖಾತರಿ ನೀಡಲಾಗುವುದು ಎಂದು ಭರವಸೆ ನೀಡಿದರು.</p>.ಐದು ವರ್ಷ ಎಂಎಸ್ಪಿ ಖಾತರಿ: ರೈತ ಮುಖಂಡರ ಮುಂದೆ ಕೇಂದ್ರ ಸರ್ಕಾರದ ಪ್ರಸ್ತಾವ.ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ನಮ್ಮ ಮೊದಲ ಗ್ಯಾರಂಟಿ ಎಂಎಸ್ಪಿ ಖಾತರಿ: ಖರ್ಗೆ.<p>ಕೇಂದ್ರದ ಬಿಜೆಪಿ ಸರ್ಕಾರ ಹತ್ತು ಉದ್ಯಮಿಗಳ ₹ 16 ಲಕ್ಷ ಕೋಟಿ ಸಾಲವನ್ನು ಮನ್ನಾ ಮಾಡಿದೆ. ಆದರೆ ರೈತರು ಹೋರಾಟ ಮಾಡುತ್ತಿರುವ ಎಂಎಸ್ಪಿಗೆ ಕಾನೂನು ಖಾತರಿ ನೀಡಲು ನಿರಾಕರಿಸುತ್ತಿದೆ ಎಂದು ಕೇಂದ್ರದ ವಿರುದ್ಧ ಆರೋಪಿಸಿದರು.</p><p>ಇತರೆ ಹಿಂದುಳಿದ ವರ್ಗಗಳು, ದಲಿತರು ಮತ್ತು ಬುಡಕಟ್ಟು ಜನಾಂಗದವರು ಸೇರಿದಂತೆ ದೇಶದ ಶೇ. 73ರಷ್ಟು ಜನರಿಗೆ ಸರ್ಕಾರ ಮತ್ತು ಇತರೆ ಕ್ಷೇತ್ರಗಳಲ್ಲಿ ಯಾವುದೇ ಪ್ರಾತಿನಿಧ್ಯವಿಲ್ಲ. ಜಾತಿ ಆಧಾರಿತ ಜನಗಣತಿ ಮಾಡುವುದರಿಂದ ವಿವಿಧ ಕ್ಷೇತ್ರಗಳಲ್ಲಿ ಈ ಸಮುದಾಯಗಳ ಸಮಾನ ಭಾಗವಹಿಸುವಿಕೆಯನ್ನು ಖಾತ್ರಿಪಡಿಸಬಹುದು. ಇದರಿಂದ ಈ ಸಮುದಾಯಗಳಿಗೆ ನ್ಯಾಯ ಸಿಗಲಿದೆ ಎಂದು ರಾಹುಲ್ ಗಾಂಧಿ ಹೇಳಿದರು.</p><p>ಮಧ್ಯಪ್ರದೇಶದ ಮೊರೇನಾ, ಗ್ವಾಲಿಯರ್, ಗುನಾ, ರಾಜಗಢ, ಶಾಜಾಪುರ, ಉಜ್ಜಯಿನಿ, ಧಾರ್ ಹಾಗೂ ರಟ್ಲಂ ಜಿಲ್ಲೆಗಳಲ್ಲಿ ನ್ಯಾಯಾ ಯಾತ್ರೆ ಸಾಗಲಿದ್ದು, ಮಾ. 6ಕ್ಕೆ ಮತ್ತೆ ರಾಜಸ್ಥಾನವನ್ನು ಪ್ರವೇಶಿಸಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>