ಕೇಂದ್ರದ ಬಿಜೆಪಿ ಸರ್ಕಾರ ಹತ್ತು ಉದ್ಯಮಿಗಳ ₹ 16 ಲಕ್ಷ ಕೋಟಿ ಸಾಲವನ್ನು ಮನ್ನಾ ಮಾಡಿದೆ. ಆದರೆ ರೈತರು ಹೋರಾಟ ಮಾಡುತ್ತಿರುವ ಎಂಎಸ್ಪಿಗೆ ಕಾನೂನು ಖಾತರಿ ನೀಡಲು ನಿರಾಕರಿಸುತ್ತಿದೆ ಎಂದು ಕೇಂದ್ರದ ವಿರುದ್ಧ ಆರೋಪಿಸಿದರು.
ಇತರೆ ಹಿಂದುಳಿದ ವರ್ಗಗಳು, ದಲಿತರು ಮತ್ತು ಬುಡಕಟ್ಟು ಜನಾಂಗದವರು ಸೇರಿದಂತೆ ದೇಶದ ಶೇ. 73ರಷ್ಟು ಜನರಿಗೆ ಸರ್ಕಾರ ಮತ್ತು ಇತರೆ ಕ್ಷೇತ್ರಗಳಲ್ಲಿ ಯಾವುದೇ ಪ್ರಾತಿನಿಧ್ಯವಿಲ್ಲ. ಜಾತಿ ಆಧಾರಿತ ಜನಗಣತಿ ಮಾಡುವುದರಿಂದ ವಿವಿಧ ಕ್ಷೇತ್ರಗಳಲ್ಲಿ ಈ ಸಮುದಾಯಗಳ ಸಮಾನ ಭಾಗವಹಿಸುವಿಕೆಯನ್ನು ಖಾತ್ರಿಪಡಿಸಬಹುದು. ಇದರಿಂದ ಈ ಸಮುದಾಯಗಳಿಗೆ ನ್ಯಾಯ ಸಿಗಲಿದೆ ಎಂದು ರಾಹುಲ್ ಗಾಂಧಿ ಹೇಳಿದರು.
ಮಧ್ಯಪ್ರದೇಶದ ಮೊರೇನಾ, ಗ್ವಾಲಿಯರ್, ಗುನಾ, ರಾಜಗಢ, ಶಾಜಾಪುರ, ಉಜ್ಜಯಿನಿ, ಧಾರ್ ಹಾಗೂ ರಟ್ಲಂ ಜಿಲ್ಲೆಗಳಲ್ಲಿ ನ್ಯಾಯಾ ಯಾತ್ರೆ ಸಾಗಲಿದ್ದು, ಮಾ. 6ಕ್ಕೆ ಮತ್ತೆ ರಾಜಸ್ಥಾನವನ್ನು ಪ್ರವೇಶಿಸಲಿದೆ.