<p><strong>ವಾರಣಾಸಿ:</strong>'ಅಂಗಡಿಯಲ್ಲಿ ಆಧಾರ್ ಕಾರ್ಡ್ ಅಡವಿಟ್ಟರೆ ಈರುಳ್ಳಿ ಸಾಲ ಪಡೆಯಬಹುದು'- <a href="https://www.prajavani.net/tags/onion-price" target="_blank">ಈರುಳ್ಳಿ ಬೆಲೆ</a> ಏರಿಕೆ ಖಂಡಿಸಿ ಸಮಾಜವಾದಿ ಪಕ್ಷದ ಯುವ ಸಂಘಟನೆ ನಡೆಸಿರುವವಿನೂತನ ಪ್ರತಿಭಟನೆ ಇದು.</p>.<p>ಈ ಬಗ್ಗೆ ಎಎನ್ಐ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ಸಮಾಜವಾದಿ ಪಕ್ಷದ ಕಾರ್ಯಕರ್ತರು, ಈರುಳ್ಳಿ ಬೆಲೆ ಏರಿಕೆಯನ್ನು ಖಂಡಿಸಿ ನಾವು ಪ್ರತಿಭಟನೆ ಮಾಡುತ್ತಿದ್ದೇವೆ. ಅಂಗಡಿಯಲ್ಲಿ ಆಧಾರ್ ಕಾರ್ಡ್ ಅಥವಾ ಬೆಳ್ಳಿ ಆಭರಣ ಅಡವಿಟ್ಟು ಈರುಳ್ಳಿ ಸಾಲ ಪಡೆಯಬಹುದು. ಕೆಲವು ಅಂಗಡಿಗಳಲ್ಲಿ ಈರುಳ್ಳಿಯನ್ನು ಲಾಕರ್ನಲ್ಲಿಡಲಾಗಿದೆ ಎಂದಿದ್ದಾರೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/district/gadaga/onion-686685.html" target="_blank">ಗದಗ | ಬೆಲೆ ಏರಿಕೆ: ಈರುಳ್ಳಿಗೆ ರೈತರ ಕಾವಲು</a></p>.<p>ಈರುಳ್ಳಿ ಬೆಲೆ ಏರಿಕೆ ಖಂಡಿಸಿ ಲಖನೌದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ವಿಧಾನಸೌಧದ ಹೊರಗೆ 1 ಕೆಜಿ ಈರುಳ್ಳಿಗೆ ₹40ರಂತೆ ಮಾರಾಟ ಮಾಡಿ ಪ್ರತಿಭಟಿಸಿದ್ದರು.</p>.<p>ಪ್ರತಿಭಟನೆ ಬಗ್ಗೆ ಮಾತನಾಡಿದ್ದ ಕಾಂಗ್ರೆಸ್ ನೇತಾರ ಶೈಲೇಂದ್ರ ತಿವಾರಿ, ಈರುಳ್ಳಿ ಬೆಲೆ ಏರಿಕೆ ಜನ ಸಾಮಾನ್ಯರಿಗೆ ಹೊರೆಯಾಗಿದೆ. ಈ ಸರ್ಕಾರ ಜನರ ಕಷ್ಟಗಳಿಗೆ ಸ್ಪಂದಿಸುತ್ತಿಲ್ಲ ಎಂದಿದ್ದಾರೆ.</p>.<p><strong>ಇದನ್ನೂ ಓದಿ</strong>:<a href="https://www.prajavani.net/stories/national/onions-price-raise-import-from-egypt-turkey-to-reach-markets-686790.html" target="_blank">ಟರ್ಕಿ, ಈಜಿಪ್ಟ್ನಿಂದ ಬರಲಿದೆ ಈರುಳ್ಳಿ</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಾರಣಾಸಿ:</strong>'ಅಂಗಡಿಯಲ್ಲಿ ಆಧಾರ್ ಕಾರ್ಡ್ ಅಡವಿಟ್ಟರೆ ಈರುಳ್ಳಿ ಸಾಲ ಪಡೆಯಬಹುದು'- <a href="https://www.prajavani.net/tags/onion-price" target="_blank">ಈರುಳ್ಳಿ ಬೆಲೆ</a> ಏರಿಕೆ ಖಂಡಿಸಿ ಸಮಾಜವಾದಿ ಪಕ್ಷದ ಯುವ ಸಂಘಟನೆ ನಡೆಸಿರುವವಿನೂತನ ಪ್ರತಿಭಟನೆ ಇದು.</p>.<p>ಈ ಬಗ್ಗೆ ಎಎನ್ಐ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ಸಮಾಜವಾದಿ ಪಕ್ಷದ ಕಾರ್ಯಕರ್ತರು, ಈರುಳ್ಳಿ ಬೆಲೆ ಏರಿಕೆಯನ್ನು ಖಂಡಿಸಿ ನಾವು ಪ್ರತಿಭಟನೆ ಮಾಡುತ್ತಿದ್ದೇವೆ. ಅಂಗಡಿಯಲ್ಲಿ ಆಧಾರ್ ಕಾರ್ಡ್ ಅಥವಾ ಬೆಳ್ಳಿ ಆಭರಣ ಅಡವಿಟ್ಟು ಈರುಳ್ಳಿ ಸಾಲ ಪಡೆಯಬಹುದು. ಕೆಲವು ಅಂಗಡಿಗಳಲ್ಲಿ ಈರುಳ್ಳಿಯನ್ನು ಲಾಕರ್ನಲ್ಲಿಡಲಾಗಿದೆ ಎಂದಿದ್ದಾರೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/district/gadaga/onion-686685.html" target="_blank">ಗದಗ | ಬೆಲೆ ಏರಿಕೆ: ಈರುಳ್ಳಿಗೆ ರೈತರ ಕಾವಲು</a></p>.<p>ಈರುಳ್ಳಿ ಬೆಲೆ ಏರಿಕೆ ಖಂಡಿಸಿ ಲಖನೌದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ವಿಧಾನಸೌಧದ ಹೊರಗೆ 1 ಕೆಜಿ ಈರುಳ್ಳಿಗೆ ₹40ರಂತೆ ಮಾರಾಟ ಮಾಡಿ ಪ್ರತಿಭಟಿಸಿದ್ದರು.</p>.<p>ಪ್ರತಿಭಟನೆ ಬಗ್ಗೆ ಮಾತನಾಡಿದ್ದ ಕಾಂಗ್ರೆಸ್ ನೇತಾರ ಶೈಲೇಂದ್ರ ತಿವಾರಿ, ಈರುಳ್ಳಿ ಬೆಲೆ ಏರಿಕೆ ಜನ ಸಾಮಾನ್ಯರಿಗೆ ಹೊರೆಯಾಗಿದೆ. ಈ ಸರ್ಕಾರ ಜನರ ಕಷ್ಟಗಳಿಗೆ ಸ್ಪಂದಿಸುತ್ತಿಲ್ಲ ಎಂದಿದ್ದಾರೆ.</p>.<p><strong>ಇದನ್ನೂ ಓದಿ</strong>:<a href="https://www.prajavani.net/stories/national/onions-price-raise-import-from-egypt-turkey-to-reach-markets-686790.html" target="_blank">ಟರ್ಕಿ, ಈಜಿಪ್ಟ್ನಿಂದ ಬರಲಿದೆ ಈರುಳ್ಳಿ</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>