<p class="title"><strong>ನವದೆಹಲಿ: </strong>ಉದ್ಯೋಗ ನೇಮಕಾತಿಗೆ ಆನ್ಲೈನ್ ಪ್ರವೇಶ ಪರೀಕ್ಷೆ ಹಾಗೂ ಕೇಂದ್ರ ಸರ್ಕಾರಿ ನೌಕರರ ಕೌಶಲ ವೃದ್ಧಿಗೆ ಮಿಷನ್ ಕರ್ಮಯೋಗಿ ಯೋಜನೆ ಜಾರಿಗೆ ಕೇಂದ್ರ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಸಚಿವಾಲಯವು 2020ರಲ್ಲಿ ಕೈಗೊಂಡಿರುವ ಪ್ರಮುಖ ತೀರ್ಮಾನಗಳು.</p>.<p class="title">ಕೋವಿಡ್ ಸ್ಥಿತಿಯ ನಡುವೆಯೂ ಸಚಿವಾಲಯವು ಕೇಂದ್ರದ ಎಲ್ಲ ಕಚೇರಿಗಳಲ್ಲಿ ಸುಗಮ ಆಡಳಿತಕ್ಕಾಗಿ ಹಾಗೂ 48 ಲಕ್ಷ ನೌಕರರ ಆರೋಗ್ಯ ರಕ್ಷಣೆಯ ದೃಷ್ಟಿಯಿಂದ ಅಗತ್ಯ ಮುಂಜಾಗ್ರತೆ ಕ್ರಮಗಳನ್ನು ಸಚಿವಾಲಯವು ಸಕಾಲದಲ್ಲಿ ಕೈಗೊಂಡಿತ್ತು.</p>.<p class="title">ಸೋಂಕು ತಡೆ ಕ್ರಮವಾಗಿ ಮನೆಯಿಂದಲೇ ಕಾರ್ಯನಿರ್ವಹಿಸುವ ವ್ಯವಸ್ಥೆಯನ್ನು ಜಾರಿಗೆ ತರುವ ಮೂಲಕ ಕೇಂದ್ರ ಸರ್ಕಾರದ ಸಂಸ್ಥೆಗಳು ನಿಗದಿಯಂತೆ ಕಾರ್ಯನಿರ್ವಹಿಸಲು ಕ್ರಮವಹಿಸಲಾಯಿತು. ನಿವೃತ್ತ ನೌಕರರು ಪಿಂಚಣಿ ಪಡೆಯಲು ಅಗತ್ಯ ಪ್ರಮಾಣಪತ್ರ ಸಲ್ಲಿಸಲು ಅನುವಾಗುವಂತೆ ವಿವಿಧ ಕ್ರಮಗಳನ್ನು ಜಾರಿಗೊಳಿಸಲಾಗಿತ್ತು.</p>.<p>ಅಲ್ಲದೆ, ನವೆಂಬರ್ ತಿಂಗಳಲ್ಲಿ ಆನ್ಲೈನ್ ಮೂಲಕವೇ ಪ್ರಮಾಣಪತ್ರ ಸಲ್ಲಿಸುವ ನಿವೃತ್ತರಿಗೆ ಮನೆ ಬಾಗಿಲಿನಲ್ಲಿಯೇ ಪೋಸ್ಟ್ಮನ್ ಮೂಲಕ ಸೌಲಭ್ಯ ತಲುಪಿಸುವ ವ್ಯವಸ್ಥೆ ಜಾರಿಗೊಳಿಸಲಾಯಿತು.</p>.<p>ಕೋವಿಡ್ ಪರಿಸ್ಥಿತಿಯಲ್ಲಿ ಮನೆಯಲ್ಲಿಯೇ ಇರಬೇಕಾದ ಸ್ಥಿತಿಯಲ್ಲಿ ಪ್ರಮಾಣಪತ್ರವನ್ನು ಸಲ್ಲಿಸಬೇಕಾಗಿದ್ದ ಪಿಂಚಣಿದಾರರಿಗೆ ಈ ಕ್ರಮವು ದೊಡ್ಡ ನಿರಾಳಭಾವವನ್ನು ನೀಡಿತ್ತು ಎಂದು ಸಚಿವಾಲಯದ ಹೇಳಿಕೆಯು ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ನವದೆಹಲಿ: </strong>ಉದ್ಯೋಗ ನೇಮಕಾತಿಗೆ ಆನ್ಲೈನ್ ಪ್ರವೇಶ ಪರೀಕ್ಷೆ ಹಾಗೂ ಕೇಂದ್ರ ಸರ್ಕಾರಿ ನೌಕರರ ಕೌಶಲ ವೃದ್ಧಿಗೆ ಮಿಷನ್ ಕರ್ಮಯೋಗಿ ಯೋಜನೆ ಜಾರಿಗೆ ಕೇಂದ್ರ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಸಚಿವಾಲಯವು 2020ರಲ್ಲಿ ಕೈಗೊಂಡಿರುವ ಪ್ರಮುಖ ತೀರ್ಮಾನಗಳು.</p>.<p class="title">ಕೋವಿಡ್ ಸ್ಥಿತಿಯ ನಡುವೆಯೂ ಸಚಿವಾಲಯವು ಕೇಂದ್ರದ ಎಲ್ಲ ಕಚೇರಿಗಳಲ್ಲಿ ಸುಗಮ ಆಡಳಿತಕ್ಕಾಗಿ ಹಾಗೂ 48 ಲಕ್ಷ ನೌಕರರ ಆರೋಗ್ಯ ರಕ್ಷಣೆಯ ದೃಷ್ಟಿಯಿಂದ ಅಗತ್ಯ ಮುಂಜಾಗ್ರತೆ ಕ್ರಮಗಳನ್ನು ಸಚಿವಾಲಯವು ಸಕಾಲದಲ್ಲಿ ಕೈಗೊಂಡಿತ್ತು.</p>.<p class="title">ಸೋಂಕು ತಡೆ ಕ್ರಮವಾಗಿ ಮನೆಯಿಂದಲೇ ಕಾರ್ಯನಿರ್ವಹಿಸುವ ವ್ಯವಸ್ಥೆಯನ್ನು ಜಾರಿಗೆ ತರುವ ಮೂಲಕ ಕೇಂದ್ರ ಸರ್ಕಾರದ ಸಂಸ್ಥೆಗಳು ನಿಗದಿಯಂತೆ ಕಾರ್ಯನಿರ್ವಹಿಸಲು ಕ್ರಮವಹಿಸಲಾಯಿತು. ನಿವೃತ್ತ ನೌಕರರು ಪಿಂಚಣಿ ಪಡೆಯಲು ಅಗತ್ಯ ಪ್ರಮಾಣಪತ್ರ ಸಲ್ಲಿಸಲು ಅನುವಾಗುವಂತೆ ವಿವಿಧ ಕ್ರಮಗಳನ್ನು ಜಾರಿಗೊಳಿಸಲಾಗಿತ್ತು.</p>.<p>ಅಲ್ಲದೆ, ನವೆಂಬರ್ ತಿಂಗಳಲ್ಲಿ ಆನ್ಲೈನ್ ಮೂಲಕವೇ ಪ್ರಮಾಣಪತ್ರ ಸಲ್ಲಿಸುವ ನಿವೃತ್ತರಿಗೆ ಮನೆ ಬಾಗಿಲಿನಲ್ಲಿಯೇ ಪೋಸ್ಟ್ಮನ್ ಮೂಲಕ ಸೌಲಭ್ಯ ತಲುಪಿಸುವ ವ್ಯವಸ್ಥೆ ಜಾರಿಗೊಳಿಸಲಾಯಿತು.</p>.<p>ಕೋವಿಡ್ ಪರಿಸ್ಥಿತಿಯಲ್ಲಿ ಮನೆಯಲ್ಲಿಯೇ ಇರಬೇಕಾದ ಸ್ಥಿತಿಯಲ್ಲಿ ಪ್ರಮಾಣಪತ್ರವನ್ನು ಸಲ್ಲಿಸಬೇಕಾಗಿದ್ದ ಪಿಂಚಣಿದಾರರಿಗೆ ಈ ಕ್ರಮವು ದೊಡ್ಡ ನಿರಾಳಭಾವವನ್ನು ನೀಡಿತ್ತು ಎಂದು ಸಚಿವಾಲಯದ ಹೇಳಿಕೆಯು ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>