<p><strong>ಅಮರಾವತಿ</strong>: ಮಾತೃಭಾಷೆಯಲ್ಲಿ ಅಧ್ಯಯನ ಮಾಡುವ ಜನರು ಮಾತ್ರ ಪ್ರಪಂಚದಾದ್ಯಂತ ಯಶಸ್ವಿಯಾಗಿದ್ದಾರೆ. ಇಂಗ್ಲಿಷ್ ಭಾಷೆ ಮಾತ್ರ ಜ್ಞಾನವನ್ನು ಖಾತರಿಪಡಿಸುತ್ತದೆ ಎಂಬ ತಪ್ಪು ಕಲ್ಪನೆ ಪ್ರಚಲಿತವಾಗಿದೆ ಎಂದು ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು ಹೇಳಿದ್ದಾರೆ.</p><p>ವಿಧಾನಸಭೆಯನ್ನು ಉದ್ಧೇಶಿಸಿ ಮಾತನಾಡಿದ ಅವರು, ‘ಭಾಷೆ ಸಂವಹನಕ್ಕಾಗಿ ಮಾತ್ರ. ಜ್ಞಾನವು ಭಾಷೆಯೊಂದಿಗೆ ಬರುವುದಿಲ್ಲ. ತಮ್ಮ ಮಾತೃಭಾಷೆಯಲ್ಲಿ ಅಧ್ಯಯನ ಮಾಡುವ ಜನರು ಮಾತ್ರ ಪ್ರಪಂಚದಾದ್ಯಂತ ಯಶಸ್ವಿಯಾಗಿದ್ದಾರೆ. ಮಾತೃಭಾಷೆಯ ಮೂಲಕ ಕಲಿಯುವುದು ಸುಲಭ’ ಎಂದು ತಿಳಿಸಿದ್ದಾರೆ.</p><p>‘ನಾನು ನಿಮಗೆ ಸ್ಪಷ್ಟವಾಗಿ ಹೇಳುತ್ತಿದ್ದೇನೆ, ಭಾಷೆ ಇರುವುದು ದ್ವೇಷಿಸಲು ಅಲ್ಲ. ಇಲ್ಲಿ (ಆಂಧ್ರಪ್ರದೇಶ) ಮಾತೃಭಾಷೆ ತೆಲುಗು. ರಾಷ್ಟ್ರೀಯ ಭಾಷೆ ಹಿಂದಿ ಮತ್ತು ಅಂತರರಾಷ್ಟ್ರೀಯ ಭಾಷೆ ಇಂಗ್ಲಿಷ್’ ಎಂದು ನಾಯ್ಡು ಹೇಳಿದ್ದಾರೆ.</p><p>ಮಾತೃಭಾಷೆಯನ್ನು ಮರೆಯದೆ ಜೀವನೋಪಾಯಕ್ಕಾಗಿ ಸಾಧ್ಯವಾದಷ್ಟು ಇತರ ಭಾಷೆಗಳನ್ನು ಕಲಿಯುವುದು ಮುಖ್ಯ. ಹಿಂದಿ ಕಲಿಯುವುದರಿಂದ ದೆಹಲಿಯಲ್ಲಿ ನಿರರ್ಗಳವಾಗಿ ಮಾತನಾಡಲು ಸಾಧ್ಯವಾಗುತ್ತದೆ ಎಂದು ಅವರು ತಿಳಿಸಿದ್ದಾರೆ.</p><p>ಜಪಾನ್ ಮತ್ತು ಜರ್ಮನಿಯಂತಹ ಇತರ ದೇಶಗಳಿಗೆ ಅನೇಕ ಜನರು ಹೋಗುತ್ತಿರುವುದರಿಂದ, ಆ ಭಾಷೆಗಳನ್ನು ಇಲ್ಲಿಯೂ ಕಲಿಯಲು ಸಾಧ್ಯವಾದರೆ, ಜನರು ಆ ವಿದೇಶಿ ತಾಣಗಳಿಗೆ ಭೇಟಿ ನೀಡಿದಾಗ ತುಂಬಾ ಸಹಾಯಕವಾಗುತ್ತದೆ. ಆದ್ದರಿಂದ, ‘ಭಾಷೆಗಳ ಮೇಲೆ ಅನಗತ್ಯ ರಾಜಕೀಯ’ ಮಾಡುವ ಅಗತ್ಯವಿಲ್ಲ ಎಂದು ಅವರು ಹೇಳಿದ್ದಾರೆ.</p><p>ಸಾಧ್ಯವಾದಷ್ಟು ಭಾಷೆಗಳನ್ನು ಕಲಿಯುವಂತೆ ನಾಯ್ಡು ಕರೆ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಮರಾವತಿ</strong>: ಮಾತೃಭಾಷೆಯಲ್ಲಿ ಅಧ್ಯಯನ ಮಾಡುವ ಜನರು ಮಾತ್ರ ಪ್ರಪಂಚದಾದ್ಯಂತ ಯಶಸ್ವಿಯಾಗಿದ್ದಾರೆ. ಇಂಗ್ಲಿಷ್ ಭಾಷೆ ಮಾತ್ರ ಜ್ಞಾನವನ್ನು ಖಾತರಿಪಡಿಸುತ್ತದೆ ಎಂಬ ತಪ್ಪು ಕಲ್ಪನೆ ಪ್ರಚಲಿತವಾಗಿದೆ ಎಂದು ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು ಹೇಳಿದ್ದಾರೆ.</p><p>ವಿಧಾನಸಭೆಯನ್ನು ಉದ್ಧೇಶಿಸಿ ಮಾತನಾಡಿದ ಅವರು, ‘ಭಾಷೆ ಸಂವಹನಕ್ಕಾಗಿ ಮಾತ್ರ. ಜ್ಞಾನವು ಭಾಷೆಯೊಂದಿಗೆ ಬರುವುದಿಲ್ಲ. ತಮ್ಮ ಮಾತೃಭಾಷೆಯಲ್ಲಿ ಅಧ್ಯಯನ ಮಾಡುವ ಜನರು ಮಾತ್ರ ಪ್ರಪಂಚದಾದ್ಯಂತ ಯಶಸ್ವಿಯಾಗಿದ್ದಾರೆ. ಮಾತೃಭಾಷೆಯ ಮೂಲಕ ಕಲಿಯುವುದು ಸುಲಭ’ ಎಂದು ತಿಳಿಸಿದ್ದಾರೆ.</p><p>‘ನಾನು ನಿಮಗೆ ಸ್ಪಷ್ಟವಾಗಿ ಹೇಳುತ್ತಿದ್ದೇನೆ, ಭಾಷೆ ಇರುವುದು ದ್ವೇಷಿಸಲು ಅಲ್ಲ. ಇಲ್ಲಿ (ಆಂಧ್ರಪ್ರದೇಶ) ಮಾತೃಭಾಷೆ ತೆಲುಗು. ರಾಷ್ಟ್ರೀಯ ಭಾಷೆ ಹಿಂದಿ ಮತ್ತು ಅಂತರರಾಷ್ಟ್ರೀಯ ಭಾಷೆ ಇಂಗ್ಲಿಷ್’ ಎಂದು ನಾಯ್ಡು ಹೇಳಿದ್ದಾರೆ.</p><p>ಮಾತೃಭಾಷೆಯನ್ನು ಮರೆಯದೆ ಜೀವನೋಪಾಯಕ್ಕಾಗಿ ಸಾಧ್ಯವಾದಷ್ಟು ಇತರ ಭಾಷೆಗಳನ್ನು ಕಲಿಯುವುದು ಮುಖ್ಯ. ಹಿಂದಿ ಕಲಿಯುವುದರಿಂದ ದೆಹಲಿಯಲ್ಲಿ ನಿರರ್ಗಳವಾಗಿ ಮಾತನಾಡಲು ಸಾಧ್ಯವಾಗುತ್ತದೆ ಎಂದು ಅವರು ತಿಳಿಸಿದ್ದಾರೆ.</p><p>ಜಪಾನ್ ಮತ್ತು ಜರ್ಮನಿಯಂತಹ ಇತರ ದೇಶಗಳಿಗೆ ಅನೇಕ ಜನರು ಹೋಗುತ್ತಿರುವುದರಿಂದ, ಆ ಭಾಷೆಗಳನ್ನು ಇಲ್ಲಿಯೂ ಕಲಿಯಲು ಸಾಧ್ಯವಾದರೆ, ಜನರು ಆ ವಿದೇಶಿ ತಾಣಗಳಿಗೆ ಭೇಟಿ ನೀಡಿದಾಗ ತುಂಬಾ ಸಹಾಯಕವಾಗುತ್ತದೆ. ಆದ್ದರಿಂದ, ‘ಭಾಷೆಗಳ ಮೇಲೆ ಅನಗತ್ಯ ರಾಜಕೀಯ’ ಮಾಡುವ ಅಗತ್ಯವಿಲ್ಲ ಎಂದು ಅವರು ಹೇಳಿದ್ದಾರೆ.</p><p>ಸಾಧ್ಯವಾದಷ್ಟು ಭಾಷೆಗಳನ್ನು ಕಲಿಯುವಂತೆ ನಾಯ್ಡು ಕರೆ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>