ಪ್ರಧಾನಿಯವರು ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವ ನಿರ್ಧಾರ ಪ್ರಕಟಿಸಿದ ಒಂದು ದಿನದ ಬಳಿಕ ಟ್ವೀಟ್ ಮಾಡಿರುವ ಅವರು, ‘ಪ್ರಧಾನಿಯವರ ಈ ಘೋಷಣೆಯು ಮುತ್ಸದ್ದಿತನದ ನಡೆ ಎಂದು ಗೃಹ ಸಚಿವರು ಶ್ಲಾಘಿಸಿದ್ದಾರೆ. ಬಿಜೆಪಿ ಅಧ್ಯಕ್ಷರು, ಪ್ರಧಾನಿ ರೈತರ ಬಗ್ಗೆ ಅಪಾರ ಕಾಳಜಿ ಹೊಂದಿದ್ದಾರೆ ಎಂದು ಪ್ರತಿಕ್ರಿಯಿಸಿದ್ದಾರೆ. ರಕ್ಷಣಾ ಸಚಿವರು, ರೈತರ ಕಲ್ಯಾಣಕ್ಕಾಗಿ ಪ್ರಧಾನಿ ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ಶ್ಲಾಘಿಸಿದ್ದಾರೆ. ಆದರೆ ಈ ಮಹಾನ್ ನಾಯಕರು ಕಳೆದ ಹದಿನೈದು ತಿಂಗಳು ಎಲ್ಲಿದ್ದರು ಮತ್ತು ಅವರ ಬುದ್ಧಿವಂತ ಸಲಹೆಗಳು ಎಲ್ಲಿದ್ದವು?’ ಎಂದು ಪ್ರಶ್ನಿಸಿದ್ದಾರೆ.