ನವದೆಹಲಿ: ಲೋಕಸಭೆ ಮತ್ತು ರಾಜ್ಯಗಳ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸುವ ‘ಒಂದು ರಾಷ್ಟ್ರ, ಒಂದು ಚುನಾವಣೆ’ಯನ್ನು (ಒಎನ್ಒಇ) ಕಟುವಾಗಿ ವಿರೋಧಿಸಿರುವ ಎಎಪಿಯು, ಈ ಪ್ರಸ್ತಾವವು ಪ್ರಜಾಪ್ರಭುತ್ವಕ್ಕೆ ಹಾನಿ ಉಂಟುಮಾಡುತ್ತದೆ ಎಂದು ಮಾಜಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರ ನೇತೃತ್ವದ ಸಮಿತಿಗೆ ಹೇಳಿದೆ.