<p><strong>ನವದೆಹಲಿ:</strong> ಪಾಕಿಸ್ತಾನದ ನೆಲದಿಂದ ಕಾರ್ಯನಿರ್ವಹಿಸುತ್ತಿರುವ ಉಗ್ರರ ಚಟುವಟಿಕೆ ಕುರಿತು ದೇಶದ ನಿಲುವನ್ನು ಮನವರಿಕೆ ಮಾಡಿಕೊಡಲು ಜನತಾದಳ (ಯು) ಸಂಸದ ಸಂಜಯ್ ಝಾ ನೇತೃತ್ವದ ಸರ್ವಪಕ್ಷಗಳ ನಿಯೋಗವು ಬುಧವಾರ ಜಪಾನ್ಗೆ ತೆರಳಿತು.</p>.<p>ಈ ನಿಯೋಗವು ದಕ್ಷಿಣ ಕೊರಿಯಾ, ಮಲೇಷ್ಯಾ, ಇಂಡೊನೇಷ್ಯಾ, ಸಿಂಗಪುರಕ್ಕೆ ಭೇಟಿ ನೀಡಲಿದೆ. ಆಪರೇಷನ್ ಸಿಂಧೂರ ಮತ್ತು ಆನಂತರ ಭಾರತ–ಪಾಕಿಸ್ತಾನ ನಡುವೆ ನಡೆದ ಸಂಘರ್ಷದ ಹಿನ್ನೆಲೆಯಲ್ಲಿ ಜಾಗತಿಕವಾಗಿ ಭಾರತದ ನಿಲುವನ್ನು ತಿಳಿಸುವುದು ನಿಯೋಗದ ಭೇಟಿಯ ಉದ್ದೇಶವಾಗಿದೆ.</p>.<p>ಈ ನಿಯೋಗದಲ್ಲಿ ಬಿಜೆಪಿ ಸಂಸದರಾದ ಅಪರಾಜಿತಾ ಸಾರಂಗಿ, ಬ್ರಿಜ್ಲಾಲ್, ಪ್ರಧಾನ್ ಬರುವಾ, ಹೇಮಾಂಗ್ ಜೋಶಿ, ಕಾಂಗ್ರೆಸ್ನ ಸಲ್ಮಾನ್ ಖುರ್ಷಿದ್, ಟಿಎಂಸಿ ಸಂಸದ ಅಭಿಷೇಕ್ ಬ್ಯಾನರ್ಜಿ, ಸಿಪಿಎಂನ ಜಾನ್ ಬ್ರಿಟ್ಟಾಸ್ ಮತ್ತು ಮಾಜಿ ರಾಯಭಾರಿ ಮೋಹನ್ ಕುಮಾರ್ ಇದ್ದಾರೆ.</p>.<p>ಶಿವಸೇನಾ ಸಂಸದ ಶ್ರೀಕಾಂತ್ ಶಿಂದೆ ನೇತೃತ್ವದ ಮತ್ತೊಂದು ನಿಯೋಗವು ಯುಎಇ, ಲಿಬಿರಿಯಾ, ಕಾಂಗೊ ಮತ್ತು ಸಿಯಾರಾ ಲಿಯೊನ್ಗೆ ಭೇಟಿ ನೀಡಲು ನಿರ್ಗಮಿಸಿತು. ಕೇಂದ್ರ ಸರ್ಕಾರವು ಸರ್ವಪಕ್ಷಗಳ ಸದಸ್ಯರ ಏಳು ನಿಯೋಗಗಳನ್ನು ವಿವಿಧ ದೇಶಗಳಿಗೆ ಕಳುಹಿಸುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಪಾಕಿಸ್ತಾನದ ನೆಲದಿಂದ ಕಾರ್ಯನಿರ್ವಹಿಸುತ್ತಿರುವ ಉಗ್ರರ ಚಟುವಟಿಕೆ ಕುರಿತು ದೇಶದ ನಿಲುವನ್ನು ಮನವರಿಕೆ ಮಾಡಿಕೊಡಲು ಜನತಾದಳ (ಯು) ಸಂಸದ ಸಂಜಯ್ ಝಾ ನೇತೃತ್ವದ ಸರ್ವಪಕ್ಷಗಳ ನಿಯೋಗವು ಬುಧವಾರ ಜಪಾನ್ಗೆ ತೆರಳಿತು.</p>.<p>ಈ ನಿಯೋಗವು ದಕ್ಷಿಣ ಕೊರಿಯಾ, ಮಲೇಷ್ಯಾ, ಇಂಡೊನೇಷ್ಯಾ, ಸಿಂಗಪುರಕ್ಕೆ ಭೇಟಿ ನೀಡಲಿದೆ. ಆಪರೇಷನ್ ಸಿಂಧೂರ ಮತ್ತು ಆನಂತರ ಭಾರತ–ಪಾಕಿಸ್ತಾನ ನಡುವೆ ನಡೆದ ಸಂಘರ್ಷದ ಹಿನ್ನೆಲೆಯಲ್ಲಿ ಜಾಗತಿಕವಾಗಿ ಭಾರತದ ನಿಲುವನ್ನು ತಿಳಿಸುವುದು ನಿಯೋಗದ ಭೇಟಿಯ ಉದ್ದೇಶವಾಗಿದೆ.</p>.<p>ಈ ನಿಯೋಗದಲ್ಲಿ ಬಿಜೆಪಿ ಸಂಸದರಾದ ಅಪರಾಜಿತಾ ಸಾರಂಗಿ, ಬ್ರಿಜ್ಲಾಲ್, ಪ್ರಧಾನ್ ಬರುವಾ, ಹೇಮಾಂಗ್ ಜೋಶಿ, ಕಾಂಗ್ರೆಸ್ನ ಸಲ್ಮಾನ್ ಖುರ್ಷಿದ್, ಟಿಎಂಸಿ ಸಂಸದ ಅಭಿಷೇಕ್ ಬ್ಯಾನರ್ಜಿ, ಸಿಪಿಎಂನ ಜಾನ್ ಬ್ರಿಟ್ಟಾಸ್ ಮತ್ತು ಮಾಜಿ ರಾಯಭಾರಿ ಮೋಹನ್ ಕುಮಾರ್ ಇದ್ದಾರೆ.</p>.<p>ಶಿವಸೇನಾ ಸಂಸದ ಶ್ರೀಕಾಂತ್ ಶಿಂದೆ ನೇತೃತ್ವದ ಮತ್ತೊಂದು ನಿಯೋಗವು ಯುಎಇ, ಲಿಬಿರಿಯಾ, ಕಾಂಗೊ ಮತ್ತು ಸಿಯಾರಾ ಲಿಯೊನ್ಗೆ ಭೇಟಿ ನೀಡಲು ನಿರ್ಗಮಿಸಿತು. ಕೇಂದ್ರ ಸರ್ಕಾರವು ಸರ್ವಪಕ್ಷಗಳ ಸದಸ್ಯರ ಏಳು ನಿಯೋಗಗಳನ್ನು ವಿವಿಧ ದೇಶಗಳಿಗೆ ಕಳುಹಿಸುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>