<p><strong>ನವದೆಹಲಿ</strong>: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಚುನಾವಣಾ ಆಯೋಗ ಮತ್ತು ಪ್ರಜಾಪ್ರಭುತ್ವದ ಇತರ ಸಂಸ್ಥೆಗಳ ವಿರುದ್ಧ ಪ್ರಚೋದನಾಕಾರಿ ಮತ್ತು ಆಧಾರರಹಿತ ಆರೋಪಗಳನ್ನು ಮಾಡುತ್ತಿರುವುದು ಸರಿಯಲ್ಲ ಎಂದು ದೇಶದ ವಿವಿಧ ಕ್ಷೇತ್ರಗಳ 272 ಗಣ್ಯರ ಗುಂಪು ಬಹಿರಂಗ ಪತ್ರ ಬರೆದಿದೆ.</p><p>16 ಮಾಜಿ ನ್ಯಾಯಾಧೀಶರು, 123 ನಿವೃತ್ತ ಅಧಿಕಾರಿಗಳು, 14 ಮಾಜಿ ರಾಯಭಾರಿಗಳು, 133 ನಿವೃತ್ತ ಸಶಸ್ತ್ರ ಪಡೆಗಳ ಅಧಿಕಾರಿಗಳು ಈ ಪತ್ರಕ್ಕೆ ಸಹಿ ಹಾಕಿದ್ದಾರೆ. ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಪಕ್ಷವನ್ನು ಉದ್ದೇಶಿಸಿ ಈ ಪತ್ರ ಬರೆಯಲಾಗಿದೆ.</p>.<p>ಚುನಾವಣಾ ಆಯೋಗದ ವಿರುದ್ಧ ಮತಕಳವು ಆರೋಪವನ್ನು ಪದೇ ಪದೇ ಮಾಡುತ್ತಿರುವ ರಾಹುಲ್ ಅವರು ಈ ಸಂಬಂಧ ಔಪಚಾರಿಕ ದೂರು ನೀಡುವ ಅಥವಾ ಪ್ರಮಾಣ ಸಲ್ಲಿಸುವ ಗೋಜಿಗೆ ಹೋಗಿಲ್ಲ ಎಂದು ಗುಂಪು ಕಿಡಿಕಾರಿದೆ.</p>.<p>‘ಸುಳ್ಳು ಆರೋಪಗಳ ಮೂಲಕ ಭಾರತದ ಪ್ರಜಾಪ್ರಭುತ್ವದ ಸಂಸ್ಥೆಗಳ ಮೇಲೆ ದಾಳಿ ನಡೆಸುವುದು ತೀವ್ರ ಕಳವಳಕಾರಿ ವಿಷಯವಾಗಿದ್ದು, ನಾಗರಿಕ ಸಮಾಜದ ಹಿರಿಯ ನಾಗರಿಕರಾದ ನಾವು ಅದನ್ನು ಖಂಡಿಸುತ್ತೇವೆ’ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಚುನಾವಣಾ ಆಯೋಗ ಮತ್ತು ಪ್ರಜಾಪ್ರಭುತ್ವದ ಇತರ ಸಂಸ್ಥೆಗಳ ವಿರುದ್ಧ ಪ್ರಚೋದನಾಕಾರಿ ಮತ್ತು ಆಧಾರರಹಿತ ಆರೋಪಗಳನ್ನು ಮಾಡುತ್ತಿರುವುದು ಸರಿಯಲ್ಲ ಎಂದು ದೇಶದ ವಿವಿಧ ಕ್ಷೇತ್ರಗಳ 272 ಗಣ್ಯರ ಗುಂಪು ಬಹಿರಂಗ ಪತ್ರ ಬರೆದಿದೆ.</p><p>16 ಮಾಜಿ ನ್ಯಾಯಾಧೀಶರು, 123 ನಿವೃತ್ತ ಅಧಿಕಾರಿಗಳು, 14 ಮಾಜಿ ರಾಯಭಾರಿಗಳು, 133 ನಿವೃತ್ತ ಸಶಸ್ತ್ರ ಪಡೆಗಳ ಅಧಿಕಾರಿಗಳು ಈ ಪತ್ರಕ್ಕೆ ಸಹಿ ಹಾಕಿದ್ದಾರೆ. ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಪಕ್ಷವನ್ನು ಉದ್ದೇಶಿಸಿ ಈ ಪತ್ರ ಬರೆಯಲಾಗಿದೆ.</p>.<p>ಚುನಾವಣಾ ಆಯೋಗದ ವಿರುದ್ಧ ಮತಕಳವು ಆರೋಪವನ್ನು ಪದೇ ಪದೇ ಮಾಡುತ್ತಿರುವ ರಾಹುಲ್ ಅವರು ಈ ಸಂಬಂಧ ಔಪಚಾರಿಕ ದೂರು ನೀಡುವ ಅಥವಾ ಪ್ರಮಾಣ ಸಲ್ಲಿಸುವ ಗೋಜಿಗೆ ಹೋಗಿಲ್ಲ ಎಂದು ಗುಂಪು ಕಿಡಿಕಾರಿದೆ.</p>.<p>‘ಸುಳ್ಳು ಆರೋಪಗಳ ಮೂಲಕ ಭಾರತದ ಪ್ರಜಾಪ್ರಭುತ್ವದ ಸಂಸ್ಥೆಗಳ ಮೇಲೆ ದಾಳಿ ನಡೆಸುವುದು ತೀವ್ರ ಕಳವಳಕಾರಿ ವಿಷಯವಾಗಿದ್ದು, ನಾಗರಿಕ ಸಮಾಜದ ಹಿರಿಯ ನಾಗರಿಕರಾದ ನಾವು ಅದನ್ನು ಖಂಡಿಸುತ್ತೇವೆ’ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>