<p><strong>ಆಂಧ್ರಪ್ರದೇಶ:</strong> ಆಪರೇಷನ್ ಸಿಂಧೂರ ಕಾರ್ಯಾಚರಣೆಯಲ್ಲಿ ಹುತಾತ್ಮರಾದ ಯೋಧ, ಮುದಾವತ್ ಮುರಳಿ ನಾಯಕ್ (23) ಅವರ ಮೃತದೇಹ ಹುಟ್ಟೂರಿಗೆ ತಲುಪಿದೆ.</p><p>23ರ ಯುವ ಯೋಧ ನಾಯಕ್ ಆಂಧ್ರಪ್ರದೇಶದ ಶ್ರೀಸತ್ಯಸಾಯಿ ಜಿಲ್ಲೆಯ ಕಲ್ಲಿ ತಾಂಡಾ ಗ್ರಾಮದವರು. ಇವರು ಅಗ್ನಿವೀರ ಯೋಧರಾಗಿದ್ದರು. ಶುಕ್ರವಾರ ಜಮ್ಮು ಮತ್ತು ಕಾಶ್ಮೀರದಲ್ಲಿ ಪಾಕಿಸ್ತಾನ ಸೇನೆಯೊಂದಿಗೆ ಗುಂಡಿನ ಕಾಳಗ ನಡೆಸುವಾಗ ಮೃತಪಟ್ಟಿದ್ದರು.</p><p>ನಾಯಕ್ ಅವರ ಮೃತದೇಹ ಹುಟ್ಟೂರಿಗೆ ತೆರಳುವಾಗ ದಾರಿಯುದ್ದಕ್ಕೂ ನೂರಾರು ಜನ ನಿಂತು ಹುತಾತ್ಮ ಯೋಧನಿಗೆ ಕಂಬನಿಯ ವಿದಾಯ ಹೇಳಿದರು. ‘ಭಾರತ್ ಮಾತಾ ಕಿ ಜೈ’, ‘ಮುರಳಿ ನಾಯಕ್ ಅಮರ್ ರಹೇ’ ಎಂಬ ಘೋಷಣೆಗಳು ಮೊಳಗಿದ್ದವು.</p><p>ಮೃತದೇಹ ಮನೆಗೆ ತೆರಳುತ್ತಿದ್ದಂತೆ ನಾಯಕ್ ಅವರ ತಾಯಿ ಜ್ಯೋತಿ ಬಾಯಿ ಸೇರಿದಂತೆ ಕುಟುಂಬ ಸದಸ್ಯರ ಆಕ್ರಂದನ ಮುಗಿಲು ಮುಟ್ಟಿತ್ತು, ದುಃಖದ ಮಡುವಿನಲ್ಲೂ ‘ವಂದೇ ಮಾತರಂ’ ಎನ್ನುವ ಘೋಷದ ಮೂಲಕ ಹುತಾತ್ಮ ಯೋಧನಿಗೆ ಅಂತಿಮ ನಮನ ಸಲ್ಲಿಸಿದ್ದು, ನೆರೆದವರ ಕಣ್ಣಾಲಿಗಳನ್ನು ತುಂಬಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಆಂಧ್ರಪ್ರದೇಶ:</strong> ಆಪರೇಷನ್ ಸಿಂಧೂರ ಕಾರ್ಯಾಚರಣೆಯಲ್ಲಿ ಹುತಾತ್ಮರಾದ ಯೋಧ, ಮುದಾವತ್ ಮುರಳಿ ನಾಯಕ್ (23) ಅವರ ಮೃತದೇಹ ಹುಟ್ಟೂರಿಗೆ ತಲುಪಿದೆ.</p><p>23ರ ಯುವ ಯೋಧ ನಾಯಕ್ ಆಂಧ್ರಪ್ರದೇಶದ ಶ್ರೀಸತ್ಯಸಾಯಿ ಜಿಲ್ಲೆಯ ಕಲ್ಲಿ ತಾಂಡಾ ಗ್ರಾಮದವರು. ಇವರು ಅಗ್ನಿವೀರ ಯೋಧರಾಗಿದ್ದರು. ಶುಕ್ರವಾರ ಜಮ್ಮು ಮತ್ತು ಕಾಶ್ಮೀರದಲ್ಲಿ ಪಾಕಿಸ್ತಾನ ಸೇನೆಯೊಂದಿಗೆ ಗುಂಡಿನ ಕಾಳಗ ನಡೆಸುವಾಗ ಮೃತಪಟ್ಟಿದ್ದರು.</p><p>ನಾಯಕ್ ಅವರ ಮೃತದೇಹ ಹುಟ್ಟೂರಿಗೆ ತೆರಳುವಾಗ ದಾರಿಯುದ್ದಕ್ಕೂ ನೂರಾರು ಜನ ನಿಂತು ಹುತಾತ್ಮ ಯೋಧನಿಗೆ ಕಂಬನಿಯ ವಿದಾಯ ಹೇಳಿದರು. ‘ಭಾರತ್ ಮಾತಾ ಕಿ ಜೈ’, ‘ಮುರಳಿ ನಾಯಕ್ ಅಮರ್ ರಹೇ’ ಎಂಬ ಘೋಷಣೆಗಳು ಮೊಳಗಿದ್ದವು.</p><p>ಮೃತದೇಹ ಮನೆಗೆ ತೆರಳುತ್ತಿದ್ದಂತೆ ನಾಯಕ್ ಅವರ ತಾಯಿ ಜ್ಯೋತಿ ಬಾಯಿ ಸೇರಿದಂತೆ ಕುಟುಂಬ ಸದಸ್ಯರ ಆಕ್ರಂದನ ಮುಗಿಲು ಮುಟ್ಟಿತ್ತು, ದುಃಖದ ಮಡುವಿನಲ್ಲೂ ‘ವಂದೇ ಮಾತರಂ’ ಎನ್ನುವ ಘೋಷದ ಮೂಲಕ ಹುತಾತ್ಮ ಯೋಧನಿಗೆ ಅಂತಿಮ ನಮನ ಸಲ್ಲಿಸಿದ್ದು, ನೆರೆದವರ ಕಣ್ಣಾಲಿಗಳನ್ನು ತುಂಬಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>