<p><strong>ಗ್ಯಾಂಗ್ಟಕ್:</strong> ದೇಶದಲ್ಲಿ ಉಗ್ರವಾದ ಸೃಷ್ಟಿಸುವವರಿಗೆ ಆಪರೇಷನ್ ಸಿಂಧೂರ್ ತಕ್ಕ ಪ್ರತ್ಯುತ್ತರವಾಗಿದೆ ಮತ್ತು ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ದೇಶ ಒಂದಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ ಪ್ರತಿಪಾದಿಸಿದರು.</p><p>ಪ್ರತಿಕೂಲ ಹವಾಮಾನದ ಕಾರಣದಿಂದ ಪ್ರಧಾನಿ ನರೇಂದ್ರ ಮೋದಿಯವರು ಸಿಕ್ಕಿಂ ಭೇಟಿಯನ್ನು ರದ್ದುಗೊಳಿಸಿ, ಸಿಕ್ಕಿಂ ಉದಯದ 50ನೇ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ವರ್ಚುವಲ್ ಮೂಲಕ ಮಾತನಾಡಿದರು.</p><p>ಹಿಮಾಲಯದ ಈ ರಾಜ್ಯವು ದೇಶದ ಹೆಮ್ಮೆ, ಈ ಭಾಗದ ಜನರು ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಟ್ಟಿದ್ದಾರೆ ಎಂದು ನರೇಂದ್ರ ಮೋದಿ ಹೇಳಿದರು.</p>.<p>ಆಪರೇಷನ್ ಸಿಂಧೂರ ದೇಶದಲ್ಲಿ ಭಯೋತ್ಪಾದನೆ ಸೃಷ್ಟಿಸಿದವರಿಗೆ ತಕ್ಕ ಪ್ರತ್ಯುತ್ತರವಾಗಿದೆ. ಪಹಲ್ಗಾಮ್ನಲ್ಲಿ ಭಯೋತ್ಪಾದಕರು ಮಾಡಿದ್ದು ಮಾನವೀಯತೆ ಮೇಲಿನ ದಾಳಿಯಾಗಿದೆ. ನಾವು ಈಗ ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಒಂದಾಗಿದ್ದೇವೆ ಎಂದು ಪ್ರಧಾನಿ ಮೋದಿ ಹೇಳಿದರು.</p><p>ನಾನು ಸಿಕ್ಕಿಂ ಉದಯದ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಲು ಬಯಸಿದ್ದೆ, ಆದರೆ ಪ್ರತಿಕೂಲ ಹವಾಮಾನದಿಂದ ಬರಲು ಸಾಧ್ಯವಾಗಲಿಲ್ಲ ಎಂದರು.</p><p>ಜಾಗತಿಕವಾಗಿ ಭಾರತವನ್ನು ಕ್ರೀಡಾ ಮಹಾಶಕ್ತಿಯಾಗಿ ಬೆಳೆಸಲು ಎನ್ಡಿಎ ಸರ್ಕಾರ ಬದ್ಧವಾಗಿದೆ, ಸಿಕ್ಕಿಂ ಸೇರಿದಂತೆ ಈಶಾನ್ಯದ ರಾಜ್ಯಗಳು ಈ ದಿಕ್ಕಿನಲ್ಲಿ ಸಾಗಬೇಕು ಎಂದು ಪ್ರಧಾನಿ ಹೇಳಿದರು.</p><p>ಸಿಕ್ಕಿಂ ಸಾಹಸ ಕ್ರೀಡೆಗಳ ಕೇಂದ್ರವಾಗುವ ಸಾಮರ್ಥ್ಯ ಹೊಂದಿದೆ ಎಂದ ಅವರು, ಇಲ್ಲಿ ಸಾವಯವ ಉತ್ಪನ್ನಗಳ ರಫ್ತು ಹೆಚ್ಚಾಗುತ್ತಿರುವುದು ರಾಜ್ಯದ ದೊಡ್ಡ ಸಾಧನೆಯಾಗಿದೆ ಎಂದರು.</p><p>ಸಿಕ್ಕಿಂ ಜೀವವೈವಿಧ್ಯದಲ್ಲಿ ಸಮೃದ್ಧವಾಗಿದೆ ಮತ್ತು ಪ್ರಕೃತಿ ಸಂರಕ್ಷಣೆಯಲ್ಲಿ ಮಾದರಿಯಾಗಿದೆ ಎಂದರು.</p>.ಪ್ರತಿಕೂಲ ಹವಾಮಾನ: ಪ್ರಧಾನಿ ಮೋದಿ ಸಿಕ್ಕಿಂ ಭೇಟಿ ರದ್ದು; ವರ್ಚುವಲ್ನಲ್ಲಿ ಭಾಗಿ.ಅಗ್ನಿವೀರರಿಗೆ ಸಿಕ್ಕಿಂ ಪೊಲೀಸ್ ಇಲಾಖೆಯಲ್ಲಿ ಶೇ 20ರಷ್ಟು ಮೀಸಲಾತಿ: CM ಘೋಷಣೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗ್ಯಾಂಗ್ಟಕ್:</strong> ದೇಶದಲ್ಲಿ ಉಗ್ರವಾದ ಸೃಷ್ಟಿಸುವವರಿಗೆ ಆಪರೇಷನ್ ಸಿಂಧೂರ್ ತಕ್ಕ ಪ್ರತ್ಯುತ್ತರವಾಗಿದೆ ಮತ್ತು ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ದೇಶ ಒಂದಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ ಪ್ರತಿಪಾದಿಸಿದರು.</p><p>ಪ್ರತಿಕೂಲ ಹವಾಮಾನದ ಕಾರಣದಿಂದ ಪ್ರಧಾನಿ ನರೇಂದ್ರ ಮೋದಿಯವರು ಸಿಕ್ಕಿಂ ಭೇಟಿಯನ್ನು ರದ್ದುಗೊಳಿಸಿ, ಸಿಕ್ಕಿಂ ಉದಯದ 50ನೇ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ವರ್ಚುವಲ್ ಮೂಲಕ ಮಾತನಾಡಿದರು.</p><p>ಹಿಮಾಲಯದ ಈ ರಾಜ್ಯವು ದೇಶದ ಹೆಮ್ಮೆ, ಈ ಭಾಗದ ಜನರು ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಟ್ಟಿದ್ದಾರೆ ಎಂದು ನರೇಂದ್ರ ಮೋದಿ ಹೇಳಿದರು.</p>.<p>ಆಪರೇಷನ್ ಸಿಂಧೂರ ದೇಶದಲ್ಲಿ ಭಯೋತ್ಪಾದನೆ ಸೃಷ್ಟಿಸಿದವರಿಗೆ ತಕ್ಕ ಪ್ರತ್ಯುತ್ತರವಾಗಿದೆ. ಪಹಲ್ಗಾಮ್ನಲ್ಲಿ ಭಯೋತ್ಪಾದಕರು ಮಾಡಿದ್ದು ಮಾನವೀಯತೆ ಮೇಲಿನ ದಾಳಿಯಾಗಿದೆ. ನಾವು ಈಗ ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಒಂದಾಗಿದ್ದೇವೆ ಎಂದು ಪ್ರಧಾನಿ ಮೋದಿ ಹೇಳಿದರು.</p><p>ನಾನು ಸಿಕ್ಕಿಂ ಉದಯದ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಲು ಬಯಸಿದ್ದೆ, ಆದರೆ ಪ್ರತಿಕೂಲ ಹವಾಮಾನದಿಂದ ಬರಲು ಸಾಧ್ಯವಾಗಲಿಲ್ಲ ಎಂದರು.</p><p>ಜಾಗತಿಕವಾಗಿ ಭಾರತವನ್ನು ಕ್ರೀಡಾ ಮಹಾಶಕ್ತಿಯಾಗಿ ಬೆಳೆಸಲು ಎನ್ಡಿಎ ಸರ್ಕಾರ ಬದ್ಧವಾಗಿದೆ, ಸಿಕ್ಕಿಂ ಸೇರಿದಂತೆ ಈಶಾನ್ಯದ ರಾಜ್ಯಗಳು ಈ ದಿಕ್ಕಿನಲ್ಲಿ ಸಾಗಬೇಕು ಎಂದು ಪ್ರಧಾನಿ ಹೇಳಿದರು.</p><p>ಸಿಕ್ಕಿಂ ಸಾಹಸ ಕ್ರೀಡೆಗಳ ಕೇಂದ್ರವಾಗುವ ಸಾಮರ್ಥ್ಯ ಹೊಂದಿದೆ ಎಂದ ಅವರು, ಇಲ್ಲಿ ಸಾವಯವ ಉತ್ಪನ್ನಗಳ ರಫ್ತು ಹೆಚ್ಚಾಗುತ್ತಿರುವುದು ರಾಜ್ಯದ ದೊಡ್ಡ ಸಾಧನೆಯಾಗಿದೆ ಎಂದರು.</p><p>ಸಿಕ್ಕಿಂ ಜೀವವೈವಿಧ್ಯದಲ್ಲಿ ಸಮೃದ್ಧವಾಗಿದೆ ಮತ್ತು ಪ್ರಕೃತಿ ಸಂರಕ್ಷಣೆಯಲ್ಲಿ ಮಾದರಿಯಾಗಿದೆ ಎಂದರು.</p>.ಪ್ರತಿಕೂಲ ಹವಾಮಾನ: ಪ್ರಧಾನಿ ಮೋದಿ ಸಿಕ್ಕಿಂ ಭೇಟಿ ರದ್ದು; ವರ್ಚುವಲ್ನಲ್ಲಿ ಭಾಗಿ.ಅಗ್ನಿವೀರರಿಗೆ ಸಿಕ್ಕಿಂ ಪೊಲೀಸ್ ಇಲಾಖೆಯಲ್ಲಿ ಶೇ 20ರಷ್ಟು ಮೀಸಲಾತಿ: CM ಘೋಷಣೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>