<p><strong>ನವದೆಹಲಿ:</strong> ಭಯೋತ್ಪಾದನೆ ವಿರುದ್ಧದ ಭಾರತದ ಕಠಿಣ ನಿಲುವನ್ನು ‘ಆಪರೇಷನ್ ಸಿಂಧೂರ’ ಜಗತ್ತಿಗೆ ಸ್ಪಷ್ಟಪಡಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಪ್ರತಿಪದಿಸಿದ್ದಾರೆ. ಅಲ್ಲದೆ ರಾಷ್ಟ್ರದ ಹಿತಾಸಕ್ತಿಗಾಗಿ ತಮ್ಮ ಸರ್ಕಾರ ಸೂಕ್ತವಾದ ಯಾವುದೇ ಕ್ರಮಗಳನ್ನು ತೆಗೆದುಕೊಳ್ಳುತ್ತದೆ ಎಂದು ಮಂಗಳವಾರ ಅವರು ಹೇಳಿದ್ದಾರೆ.</p>.ಅಪರೇಷನ್ ಸಿಂಧೂರ IAFನ ಅಪ್ರತಿಮ ಪರಾಕ್ರಮಕ್ಕೆ ಸಾಕ್ಷಿ: ವಾಯುಪಡೆ ಮುಖ್ಯಸ್ಥ.<p>ಆಧ್ಯಾತ್ಮಿಕ ಗುರು, ಸಾಮಾಜ ಸುಧಾರಕ ನಾರಾಯಣ ಗುರು ಮತ್ತು ಮಹಾತ್ಮ ಗಾಂಧಿಯವರ ನಡುವಿನ ಸಂಭಾಷಣೆಯ ಶತಮಾನೋತ್ಸವದ ಆಚರಣೆಯ ಕಾರ್ಯಕ್ರಮದಲ್ಲಿ ಅವರು ಮಾತನಾಡಿದ್ದಾರೆ.</p><p>ಸಂಘರ್ಷದ ವೇಳೆ ಭಾರತದಲ್ಲಿ ತಯಾರಾದ ಶಸ್ತ್ರಾಸ್ತ್ರಗಳು ತಮ್ಮ ಪ್ರಭಾವವನ್ನು ತೋರಿಸಿದವು ಎಂದು ಪಾಕಿಸ್ತಾನದ ಹೆಸರನ್ನು ಉಲ್ಲೇಖಿಸಿದೇ ಅವರು ಹೇಳಿದ್ದಾರೆ.</p><p>‘ಭಾರತೀಯರ ರಕ್ತವನ್ನು ಚೆಲ್ಲುವ ಭಯೋತ್ಪಾದಕರಿಗೆ ಯಾವುದೇ ಅಡಗುತಾಣವು ಸುರಕ್ಷಿತವಲ್ಲ ಎಂದು ನಾವು ತೋರಿಸಿದ್ದೇವೆ. ಯಾವುದೇ ತಾರತಮ್ಯವಿಲ್ಲದ ಬಲಿಷ್ಠ ಭಾರತವನ್ನು ಬಯಸಿದ ಪೂಜ್ಯ ಆಧ್ಯಾತ್ಮಿಕ ವ್ಯಕ್ತಿಯ ಆದರ್ಶಗಳ ಮೇಲೆ ನಮ್ಮ ಸರ್ಕಾರ ಕೆಲಸ ಮಾಡಿದೆ’ ಎಂದರು.</p>.ಆಪರೇಷನ್ ಸಿಂಧೂರ | ಸರ್ವಪಕ್ಷಗಳ ನಿಯೋಗ ಭೇಟಿಯಾದ ಪ್ರಧಾನಿ ನರೇಂದ್ರ ಮೋದಿ.<p>ಕಳೆದ 11 ವರ್ಷಗಳಲ್ಲಿ ನಮ್ಮ ಸರ್ಕಾರವು ಸಾಮಾಜಿಕ, ಆರ್ಥಿಕ ಮತ್ತು ರಕ್ಷಣಾ ಕ್ಷೇತ್ರಗಳಲ್ಲಿ ಭಾರತವನ್ನು ಬಲಿಷ್ಠಗೊಳಿಸಲು ಕೆಲಸ ಮಾಡಿದೆ. ಭಾರತವು ತನ್ನ ರಕ್ಷಣಾ ಅಗತ್ಯಗಳನ್ನು ಪೂರೈಸಲು ವಿದೇಶಗಳ ಮೇಲಿನ ಅವಲಂಬನೆ ಕಡಿಮೆಯಾಗುತ್ತಿದೆ ಮತ್ತು ರಕ್ಷಣಾ ವಲಯದಲ್ಲಿ ಭಾರತ ಆತ್ಮನಿರ್ಭರವಾಗುತ್ತಿದೆ’ ಎಂದು ಹೇಳಿದ್ದಾರೆ.</p><p>ಪಹಲ್ಗಾಮ್ನಲ್ಲಿ ನಾಗರಿಕರ ಮೇಲೆ ಭಯೋತ್ಪಾದಕರು ಭೀಕರ ದಾಳಿ ನಡೆಸಿದ ಬಳಿಕ ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿನ ಭಯೋತ್ಪಾದಕ ತಾಣಗಳ ಮೇಲೆ ಭಾರತೀಯ ಸೇನೆಯು 22 ನಿಮಿಷಗಳಲ್ಲಿ ದೇಶದಲ್ಲಿ ತಯಾರಿಸಿದ ಶಸ್ತ್ರಾಸ್ತ್ರಗಳೊಂದಿಗೆ ಶತ್ರುಗಳನ್ನು ಮಂಡಿಯೂರಿಸಿತು ಎಂದು ತಿಳಿಸಿದ್ದಾರೆ.</p><p>ಭಾರತದಲ್ಲಿ ತಯಾರಿಸಿದ ಶಸ್ತ್ರಾಸ್ತ್ರಗಳನ್ನು ಭವಿಷ್ಯದಲ್ಲಿ ಪ್ರಪಂಚದಾದ್ಯಂತ ವಿತರಿಸಲಾಗುವುದು ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.</p>.ಆಪರೇಷನ್ ಸಿಂಧೂರ | ಜಮ್ಮು–ಕಾಶ್ಮೀರದಲ್ಲಿ ಭಯೋತ್ಪಾದನೆ ದಿನಗಳು ಅಂತ್ಯ: PM ಮೋದಿ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಭಯೋತ್ಪಾದನೆ ವಿರುದ್ಧದ ಭಾರತದ ಕಠಿಣ ನಿಲುವನ್ನು ‘ಆಪರೇಷನ್ ಸಿಂಧೂರ’ ಜಗತ್ತಿಗೆ ಸ್ಪಷ್ಟಪಡಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಪ್ರತಿಪದಿಸಿದ್ದಾರೆ. ಅಲ್ಲದೆ ರಾಷ್ಟ್ರದ ಹಿತಾಸಕ್ತಿಗಾಗಿ ತಮ್ಮ ಸರ್ಕಾರ ಸೂಕ್ತವಾದ ಯಾವುದೇ ಕ್ರಮಗಳನ್ನು ತೆಗೆದುಕೊಳ್ಳುತ್ತದೆ ಎಂದು ಮಂಗಳವಾರ ಅವರು ಹೇಳಿದ್ದಾರೆ.</p>.ಅಪರೇಷನ್ ಸಿಂಧೂರ IAFನ ಅಪ್ರತಿಮ ಪರಾಕ್ರಮಕ್ಕೆ ಸಾಕ್ಷಿ: ವಾಯುಪಡೆ ಮುಖ್ಯಸ್ಥ.<p>ಆಧ್ಯಾತ್ಮಿಕ ಗುರು, ಸಾಮಾಜ ಸುಧಾರಕ ನಾರಾಯಣ ಗುರು ಮತ್ತು ಮಹಾತ್ಮ ಗಾಂಧಿಯವರ ನಡುವಿನ ಸಂಭಾಷಣೆಯ ಶತಮಾನೋತ್ಸವದ ಆಚರಣೆಯ ಕಾರ್ಯಕ್ರಮದಲ್ಲಿ ಅವರು ಮಾತನಾಡಿದ್ದಾರೆ.</p><p>ಸಂಘರ್ಷದ ವೇಳೆ ಭಾರತದಲ್ಲಿ ತಯಾರಾದ ಶಸ್ತ್ರಾಸ್ತ್ರಗಳು ತಮ್ಮ ಪ್ರಭಾವವನ್ನು ತೋರಿಸಿದವು ಎಂದು ಪಾಕಿಸ್ತಾನದ ಹೆಸರನ್ನು ಉಲ್ಲೇಖಿಸಿದೇ ಅವರು ಹೇಳಿದ್ದಾರೆ.</p><p>‘ಭಾರತೀಯರ ರಕ್ತವನ್ನು ಚೆಲ್ಲುವ ಭಯೋತ್ಪಾದಕರಿಗೆ ಯಾವುದೇ ಅಡಗುತಾಣವು ಸುರಕ್ಷಿತವಲ್ಲ ಎಂದು ನಾವು ತೋರಿಸಿದ್ದೇವೆ. ಯಾವುದೇ ತಾರತಮ್ಯವಿಲ್ಲದ ಬಲಿಷ್ಠ ಭಾರತವನ್ನು ಬಯಸಿದ ಪೂಜ್ಯ ಆಧ್ಯಾತ್ಮಿಕ ವ್ಯಕ್ತಿಯ ಆದರ್ಶಗಳ ಮೇಲೆ ನಮ್ಮ ಸರ್ಕಾರ ಕೆಲಸ ಮಾಡಿದೆ’ ಎಂದರು.</p>.ಆಪರೇಷನ್ ಸಿಂಧೂರ | ಸರ್ವಪಕ್ಷಗಳ ನಿಯೋಗ ಭೇಟಿಯಾದ ಪ್ರಧಾನಿ ನರೇಂದ್ರ ಮೋದಿ.<p>ಕಳೆದ 11 ವರ್ಷಗಳಲ್ಲಿ ನಮ್ಮ ಸರ್ಕಾರವು ಸಾಮಾಜಿಕ, ಆರ್ಥಿಕ ಮತ್ತು ರಕ್ಷಣಾ ಕ್ಷೇತ್ರಗಳಲ್ಲಿ ಭಾರತವನ್ನು ಬಲಿಷ್ಠಗೊಳಿಸಲು ಕೆಲಸ ಮಾಡಿದೆ. ಭಾರತವು ತನ್ನ ರಕ್ಷಣಾ ಅಗತ್ಯಗಳನ್ನು ಪೂರೈಸಲು ವಿದೇಶಗಳ ಮೇಲಿನ ಅವಲಂಬನೆ ಕಡಿಮೆಯಾಗುತ್ತಿದೆ ಮತ್ತು ರಕ್ಷಣಾ ವಲಯದಲ್ಲಿ ಭಾರತ ಆತ್ಮನಿರ್ಭರವಾಗುತ್ತಿದೆ’ ಎಂದು ಹೇಳಿದ್ದಾರೆ.</p><p>ಪಹಲ್ಗಾಮ್ನಲ್ಲಿ ನಾಗರಿಕರ ಮೇಲೆ ಭಯೋತ್ಪಾದಕರು ಭೀಕರ ದಾಳಿ ನಡೆಸಿದ ಬಳಿಕ ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿನ ಭಯೋತ್ಪಾದಕ ತಾಣಗಳ ಮೇಲೆ ಭಾರತೀಯ ಸೇನೆಯು 22 ನಿಮಿಷಗಳಲ್ಲಿ ದೇಶದಲ್ಲಿ ತಯಾರಿಸಿದ ಶಸ್ತ್ರಾಸ್ತ್ರಗಳೊಂದಿಗೆ ಶತ್ರುಗಳನ್ನು ಮಂಡಿಯೂರಿಸಿತು ಎಂದು ತಿಳಿಸಿದ್ದಾರೆ.</p><p>ಭಾರತದಲ್ಲಿ ತಯಾರಿಸಿದ ಶಸ್ತ್ರಾಸ್ತ್ರಗಳನ್ನು ಭವಿಷ್ಯದಲ್ಲಿ ಪ್ರಪಂಚದಾದ್ಯಂತ ವಿತರಿಸಲಾಗುವುದು ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.</p>.ಆಪರೇಷನ್ ಸಿಂಧೂರ | ಜಮ್ಮು–ಕಾಶ್ಮೀರದಲ್ಲಿ ಭಯೋತ್ಪಾದನೆ ದಿನಗಳು ಅಂತ್ಯ: PM ಮೋದಿ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>