<p>ಪಹಲ್ಗಾಮ್ನಲ್ಲಿ ಭಾರತೀಯ ಪ್ರವಾಸಿಗರ ಮೇಲೆ ಉಗ್ರರು ನಡೆಸಿದ ದಾಳಿಗೆ ‘ಆಪರೇಷನ್ ಸಿಂಧೂರ’ದ ಮೂಲಕ ಪ್ರತೀಕಾರ ತೀರಿಸಿಕೊಂಡಿದೆ ಭಾರತ. ಬುಧವಾರ ಅಂದರೆ, ಮೇ 7ರ ನಸುಕಿನ ವೇಳೆ ಕ್ಷಿಪಣಿಗಳ ಮೂಲಕ ಸೇನೆಯು ಈ ದಾಳಿ ನಡೆಸಿದೆ. ಈ ದಾಳಿಯಲ್ಲಿ, ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಾದ್ಯಂತ ಲಷ್ಕರ್-ಎ-ತಯಬಾ ಅಂದ್ರೆ ಎಲ್ಇಟಿ ಮತ್ತು ಜೈಶ್-ಎ-ಮೊಹಮ್ಮದ್ ಅಂದ್ರೆ ಜೆಇಎಂ ಉಗ್ರ ಸಂಘಟನೆಗಳ ನೆಲೆಗಳನ್ನು ಧ್ವಂಸ ಮಾಡಿದೆ. ಭಯೋತ್ಪಾದಕರ 21 ನೆಲೆಗಳಲ್ಲಿ 9 ನೆಲೆಗಳ ಮೇಲೆ ಮಾತ್ರ ಸದ್ಯ ದಾಳಿ ನಡೆದಿದೆ. ಉಗ್ರರ ಈ ಅಡಗುದಾಣಗಳಲ್ಲಿ ವಿಶ್ವವೇ ಬೆಚ್ಚಿ ಬೀಳುವಂತಹ ಚಟುವಟಿಕೆ ನಡೆಯುತ್ತಿತ್ತು ಎಂದು ಸೇನೆಯ ಅಧಿಕಾರಿಗಳು ಹೇಳುತ್ತಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>