<p>ನವದೆಹಲಿ (ಪಿಟಿಐ): ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಭಾರತ ನಡೆಸಿದ ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆ ಗುರುವಾರ ಒಂದು ವರ್ಷ ಪೂರೈಸಿದೆ.</p>.<p>ಕಾರ್ಯಾಚರಣೆ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ ಅವರು ‘ಎಕ್ಸ್’ನಲ್ಲಿ ಸಂದೇಶ ಹಂಚಿಕೊಂಡಿದ್ದು, ‘ಭಯೋತ್ಪಾದನೆಯ ವಿರುದ್ಧ ಭಾರತದ ಕಠಿಣ ನಿಲುವು ಮತ್ತು ರಾಷ್ಟ್ರ ಭದ್ರತೆಯ ದೃಢ ಸಂಕಲ್ಪವನ್ನು ಆಪರೇಷನ್ ಸಿಂಧೂರ ಪ್ರತಿಬಿಂಬಿಸುತ್ತದೆ’ ಎಂದು ಹೇಳಿದ್ದಾರೆ.</p>.<p>‘ಆಪರೇಷನ್ ಸಿಂಧೂರ’ ಕಾರ್ಯಾಚರಣೆ ನೆನಪಿನ ನಿಮಿತ್ತ ರಕ್ಷಣಾ ಸಚಿವ ರಾಜನಾಥ ಸಿಂಗ್, ವಿದೇಶಾಂಗ ಸಚಿವ ಎಸ್.ಜೈಶಂಕರ್, ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಹಲವು ಸಚಿವರು ತಮ್ಮ ಸಾಮಾಜಿಕ ಜಾಲತಾಣಗಳ ಪ್ರೊಫೈಲ್ ಫೋಟೋ ಬದಲಿಸಿ, ‘ಆಪರೇಷನ್ ಸಿಂಧೂರ’ ಚಿಹ್ನೆಯನ್ನು ಹಾಕಿಕೊಂಡಿದ್ದಾರೆ.</p>.<p>ಭದ್ರತಾಪಡೆಗಳಿಗೆ ಗೌರವ ಸೂಚಿಸುವ ನಿಟ್ಟಿನಲ್ಲಿ ಪ್ರೊಫೈಲ್ ಫೋಟೊ ಬದಲಿಸಿ, ಸಿಂಧೂರ ಚಿಹ್ನೆ ಬಳಸುವಂತೆ ಎಲ್ಲರಿಗೂ ಪ್ರಧಾನಿ ಮೋದಿ ಕರೆ ನೀಡಿದ್ದರು.</p>.<p>ವಿಶೇಷ ಪ್ರಾರ್ಥನೆ: ಜಮ್ಮು–ಕಾಶ್ಮೀರದ ಪೂಂಚ್ ಜಿಲ್ಲೆಯ ಗುರುದ್ವಾರ ಶ್ರೀ ಗುರು ಸಿಂಗ್ ಸಭಾದಲ್ಲಿ ಜನರು ಗುರುವಾರ ವಿಶೇಷ ಪ್ರಾರ್ಥನೆ ಸಲ್ಲಿಸಿ, ಶಾಂತಿಗಾಗಿ ಪ್ರಾರ್ಥಿಸಿದರು. ಜತೆಗೆ ಗಡಿಭಾಗದಲ್ಲಿ ಹತ್ಯೆಗೀಡಾದವರನ್ನೂ ಸ್ಮರಿಸಿದ್ದಾರೆ.ಪೂಂಚ್ ಜಿಲ್ಲೆಯಲ್ಲಿ 12 ಮಂದಿ ಮೃತಪಟ್ಟಿದ್ದರು.</p>.<p>ನಾಶ ಖಚಿತ: ‘ಯಾವ ಭಯೋತ್ಪಾದಕ ನೆಲೆಯೂ ಸುರಕ್ಷಿತವಲ್ಲ ಅವುಗಳನ್ನೂ ನಾಶಪಡಿಸಲಾಗುವುದು ಎಂಬ ಸ್ಪಷ್ಟ ಸಂದೇಶವನ್ನು ‘ಸಿಂಧೂರ’ ಕಾರ್ಯಾಚರಣೆ ನೀಡಿದೆ. ಇದು ಕೇವಲ ಅಂತ್ಯವಲ್ಲ, ಆರಂಭ’ ಎಂದು ಭಾರತೀಯ ಭದ್ರತಾಪಡೆಗಳು ಹೇಳಿವೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260508-51-1271368557</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನವದೆಹಲಿ (ಪಿಟಿಐ): ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಭಾರತ ನಡೆಸಿದ ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆ ಗುರುವಾರ ಒಂದು ವರ್ಷ ಪೂರೈಸಿದೆ.</p>.<p>ಕಾರ್ಯಾಚರಣೆ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ ಅವರು ‘ಎಕ್ಸ್’ನಲ್ಲಿ ಸಂದೇಶ ಹಂಚಿಕೊಂಡಿದ್ದು, ‘ಭಯೋತ್ಪಾದನೆಯ ವಿರುದ್ಧ ಭಾರತದ ಕಠಿಣ ನಿಲುವು ಮತ್ತು ರಾಷ್ಟ್ರ ಭದ್ರತೆಯ ದೃಢ ಸಂಕಲ್ಪವನ್ನು ಆಪರೇಷನ್ ಸಿಂಧೂರ ಪ್ರತಿಬಿಂಬಿಸುತ್ತದೆ’ ಎಂದು ಹೇಳಿದ್ದಾರೆ.</p>.<p>‘ಆಪರೇಷನ್ ಸಿಂಧೂರ’ ಕಾರ್ಯಾಚರಣೆ ನೆನಪಿನ ನಿಮಿತ್ತ ರಕ್ಷಣಾ ಸಚಿವ ರಾಜನಾಥ ಸಿಂಗ್, ವಿದೇಶಾಂಗ ಸಚಿವ ಎಸ್.ಜೈಶಂಕರ್, ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಹಲವು ಸಚಿವರು ತಮ್ಮ ಸಾಮಾಜಿಕ ಜಾಲತಾಣಗಳ ಪ್ರೊಫೈಲ್ ಫೋಟೋ ಬದಲಿಸಿ, ‘ಆಪರೇಷನ್ ಸಿಂಧೂರ’ ಚಿಹ್ನೆಯನ್ನು ಹಾಕಿಕೊಂಡಿದ್ದಾರೆ.</p>.<p>ಭದ್ರತಾಪಡೆಗಳಿಗೆ ಗೌರವ ಸೂಚಿಸುವ ನಿಟ್ಟಿನಲ್ಲಿ ಪ್ರೊಫೈಲ್ ಫೋಟೊ ಬದಲಿಸಿ, ಸಿಂಧೂರ ಚಿಹ್ನೆ ಬಳಸುವಂತೆ ಎಲ್ಲರಿಗೂ ಪ್ರಧಾನಿ ಮೋದಿ ಕರೆ ನೀಡಿದ್ದರು.</p>.<p>ವಿಶೇಷ ಪ್ರಾರ್ಥನೆ: ಜಮ್ಮು–ಕಾಶ್ಮೀರದ ಪೂಂಚ್ ಜಿಲ್ಲೆಯ ಗುರುದ್ವಾರ ಶ್ರೀ ಗುರು ಸಿಂಗ್ ಸಭಾದಲ್ಲಿ ಜನರು ಗುರುವಾರ ವಿಶೇಷ ಪ್ರಾರ್ಥನೆ ಸಲ್ಲಿಸಿ, ಶಾಂತಿಗಾಗಿ ಪ್ರಾರ್ಥಿಸಿದರು. ಜತೆಗೆ ಗಡಿಭಾಗದಲ್ಲಿ ಹತ್ಯೆಗೀಡಾದವರನ್ನೂ ಸ್ಮರಿಸಿದ್ದಾರೆ.ಪೂಂಚ್ ಜಿಲ್ಲೆಯಲ್ಲಿ 12 ಮಂದಿ ಮೃತಪಟ್ಟಿದ್ದರು.</p>.<p>ನಾಶ ಖಚಿತ: ‘ಯಾವ ಭಯೋತ್ಪಾದಕ ನೆಲೆಯೂ ಸುರಕ್ಷಿತವಲ್ಲ ಅವುಗಳನ್ನೂ ನಾಶಪಡಿಸಲಾಗುವುದು ಎಂಬ ಸ್ಪಷ್ಟ ಸಂದೇಶವನ್ನು ‘ಸಿಂಧೂರ’ ಕಾರ್ಯಾಚರಣೆ ನೀಡಿದೆ. ಇದು ಕೇವಲ ಅಂತ್ಯವಲ್ಲ, ಆರಂಭ’ ಎಂದು ಭಾರತೀಯ ಭದ್ರತಾಪಡೆಗಳು ಹೇಳಿವೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260508-51-1271368557</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>