<p><strong>ನವದೆಹಲಿ:</strong> 'ಆಪರೇಷನ್ ಸಿಂಧೂ' ಕಾರ್ಯಾಚರಣೆ ಮೂಲಕ ಇರಾನ್ನಿಂದ ಈವರೆಗೂ 1,117 ಭಾರತೀಯರನ್ನು ಕರೆತರಲಾಗಿದೆ ಎಂದು ಭಾರತೀಯ ವಿದೇಶಾಂಗ ಇಲಾಖೆ ಮಾಹಿತಿ ನೀಡಿದೆ.</p><p>ಈ ಕರಿತು ಸಾಮಾಜಿಕ ಮಾಧ್ಯಮ 'ಎಕ್ಸ್'ನಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಮಾಹಿತಿ ನೀಡಿದ್ದಾರೆ. </p><p>'ಜೂನ್ 21, ಶನಿವಾರ ರಾತ್ರಿ 11.30ಕ್ಕೆ ವಿಶೇಷ ವಿಮಾನವು ಮಶ್ಹದ್ನಿಂದ ನವದೆಹಲಿಗೆ ಬಂದಿಳಿಯಿತು. ಈ ವಿಮಾನದಲ್ಲಿ 290 ಭಾರತೀಯ ಪ್ರಜೆಗಳು ಇರಾನ್ನಿಂದ ಸುರಕ್ಷಿತವಾಗಿ ಸ್ವದೇಶಕ್ಕೆ ಮರಳಿದ್ದಾರೆ' ಎಂದು ಅವರು ತಿಳಿಸಿದ್ದಾರೆ. </p><p>'ಇದರೊಂದಿಗೆ ಈವರೆಗೆ 1,117 ಭಾರತೀಯ ಪ್ರಜೆಗಳನ್ನು ಇರಾನ್ನಿಂದ ಕರೆತರಲಾಗಿದೆ' ಎಂದು ಹೇಳಿದ್ದಾರೆ. </p><p>ಭಾರತಕ್ಕೆ ವಾಪಾಸ್ ಬಂದವರಲ್ಲಿ ವಿದ್ಯಾರ್ಥಿಗಳು ಸೇರಿದ್ದಾರೆ. ಸುರಕ್ಷಿತವಾಗಿ ಲ್ಯಾಂಡ್ ಆಗಿರುವ ಪ್ರಜೆಗಳು, ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, ಭಾರತ ಸರ್ಕಾರಕ್ಕೆ ಧನ್ಯವಾದಗಳನ್ನು ಸಲ್ಲಿಸಿದ್ದಾರೆ. </p><p>ಇಸ್ರೇಲ್ ಹಾಗೂ ಇರಾನ್ ನಡುವಣ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನ ಸ್ಥಿತಿ ಮುಂದುವರಿದಿದೆ. </p><p>ಈ ಮೊದಲು ಸಂಘರ್ಷಪೀಡಿತ ಇರಾನ್ನಿಂದ ಭಾರತೀಯರನ್ನು ಕರೆತರಲು ಭಾರತ ಸರ್ಕಾರವು 'ಆಪರೇಷನ್ ಸಿಂಧೂ' ಆರಂಭಿಸಿತ್ತು. ಇದಕ್ಕೆ ಸಮಾನವಾಗಿ ಇಸ್ರೇಲ್ನಿಂದಲೂ ಭಾರತೀಯರನ್ನು ಕರೆತರಲು ಕ್ರಮ ಕೈಗೊಳ್ಳಲಾಗಿದೆ. </p> .Operation Sindhu | ಇರಾನ್ನಿಂದ 800ಕ್ಕೂ ಹೆಚ್ಚು ಭಾರತೀಯರು ವಾಪಸ್.Operation Sindhu: ಇರಾನ್ ನಂತರ ಇಸ್ರೇಲ್ನಿಂದಲೂ ಭಾರತೀಯರನ್ನು ಕರೆತರಲು ಕ್ರಮ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> 'ಆಪರೇಷನ್ ಸಿಂಧೂ' ಕಾರ್ಯಾಚರಣೆ ಮೂಲಕ ಇರಾನ್ನಿಂದ ಈವರೆಗೂ 1,117 ಭಾರತೀಯರನ್ನು ಕರೆತರಲಾಗಿದೆ ಎಂದು ಭಾರತೀಯ ವಿದೇಶಾಂಗ ಇಲಾಖೆ ಮಾಹಿತಿ ನೀಡಿದೆ.</p><p>ಈ ಕರಿತು ಸಾಮಾಜಿಕ ಮಾಧ್ಯಮ 'ಎಕ್ಸ್'ನಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಮಾಹಿತಿ ನೀಡಿದ್ದಾರೆ. </p><p>'ಜೂನ್ 21, ಶನಿವಾರ ರಾತ್ರಿ 11.30ಕ್ಕೆ ವಿಶೇಷ ವಿಮಾನವು ಮಶ್ಹದ್ನಿಂದ ನವದೆಹಲಿಗೆ ಬಂದಿಳಿಯಿತು. ಈ ವಿಮಾನದಲ್ಲಿ 290 ಭಾರತೀಯ ಪ್ರಜೆಗಳು ಇರಾನ್ನಿಂದ ಸುರಕ್ಷಿತವಾಗಿ ಸ್ವದೇಶಕ್ಕೆ ಮರಳಿದ್ದಾರೆ' ಎಂದು ಅವರು ತಿಳಿಸಿದ್ದಾರೆ. </p><p>'ಇದರೊಂದಿಗೆ ಈವರೆಗೆ 1,117 ಭಾರತೀಯ ಪ್ರಜೆಗಳನ್ನು ಇರಾನ್ನಿಂದ ಕರೆತರಲಾಗಿದೆ' ಎಂದು ಹೇಳಿದ್ದಾರೆ. </p><p>ಭಾರತಕ್ಕೆ ವಾಪಾಸ್ ಬಂದವರಲ್ಲಿ ವಿದ್ಯಾರ್ಥಿಗಳು ಸೇರಿದ್ದಾರೆ. ಸುರಕ್ಷಿತವಾಗಿ ಲ್ಯಾಂಡ್ ಆಗಿರುವ ಪ್ರಜೆಗಳು, ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, ಭಾರತ ಸರ್ಕಾರಕ್ಕೆ ಧನ್ಯವಾದಗಳನ್ನು ಸಲ್ಲಿಸಿದ್ದಾರೆ. </p><p>ಇಸ್ರೇಲ್ ಹಾಗೂ ಇರಾನ್ ನಡುವಣ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನ ಸ್ಥಿತಿ ಮುಂದುವರಿದಿದೆ. </p><p>ಈ ಮೊದಲು ಸಂಘರ್ಷಪೀಡಿತ ಇರಾನ್ನಿಂದ ಭಾರತೀಯರನ್ನು ಕರೆತರಲು ಭಾರತ ಸರ್ಕಾರವು 'ಆಪರೇಷನ್ ಸಿಂಧೂ' ಆರಂಭಿಸಿತ್ತು. ಇದಕ್ಕೆ ಸಮಾನವಾಗಿ ಇಸ್ರೇಲ್ನಿಂದಲೂ ಭಾರತೀಯರನ್ನು ಕರೆತರಲು ಕ್ರಮ ಕೈಗೊಳ್ಳಲಾಗಿದೆ. </p> .Operation Sindhu | ಇರಾನ್ನಿಂದ 800ಕ್ಕೂ ಹೆಚ್ಚು ಭಾರತೀಯರು ವಾಪಸ್.Operation Sindhu: ಇರಾನ್ ನಂತರ ಇಸ್ರೇಲ್ನಿಂದಲೂ ಭಾರತೀಯರನ್ನು ಕರೆತರಲು ಕ್ರಮ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>