<p><strong>ಬೆಂಗಳೂರು:</strong> ಇಸ್ರೇಲ್ ಹಾಗೂ ಇರಾನ್ ನಡುವಣ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಬಿಕ್ಕಟ್ಟು ತೀವ್ರಗೊಂಡಿದೆ. ಸಂಘರ್ಷ ಪೀಡಿತ ಇರಾನ್ನಿಂದ ಭಾರತೀಯರನ್ನು ಸುರಕ್ಷಿತವಾಗಿ ಕರೆತರಲು 'ಆಪರೇಷನ್ ಸಿಂಧು' ಘೋಷಿಸಿದ್ದ ಕೇಂದ್ರ ಸರ್ಕಾರವು ಈಗ ಇದಕ್ಕೆ ಸಮಾನವಾಗಿ ಇಸ್ರೇಲ್ನಿಂದಲೂ ಭಾರತೀಯ ಪ್ರಜೆಗಳನ್ನು ಕರೆತರಲು ಕ್ರಮ ಕೈಗೊಂಡಿದೆ.</p><p>ಈ ಕುರಿತು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಪ್ರಕಟಣೆ ಹೊರಡಿಸಿದ್ದು, ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಮಾಹಿತಿ ಹಂಚಿಕೊಂಡಿದ್ದಾರೆ. </p><p>ಇಸ್ರೇಲ್ ಮತ್ತು ಇರಾನ್ ನಡುವಣ ಇತ್ತೀಚಿನ ಬೆಳವಣಿಗೆಗಳನ್ನು ಗಮನದಲ್ಲಿಟ್ಟುಕೊಂಡು, ಇಸ್ರೇಲ್ನಿಂದ ಹೊರ ಬರಲು ಬಯಸುವ ಭಾರತೀಯ ಪ್ರಜೆಗಳನ್ನು ಸ್ಥಳಾಂತರಿಸಲು ಭಾರತ ಸರ್ಕಾರ ನಿರ್ಧರಿಸಿದೆ. ಇಸ್ರೇಲ್ನಿಂದ ಭಾರತಕ್ಕೆ ಅವರ ಪ್ರಯಾಣವನ್ನು ಭೂಗಡಿಯ ನಂತರ ವಿಮಾನದ ಮೂಲಕ ಸುಗಮಗೊಳಿಸುತ್ತದೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ. </p><p>ಟೆಲ್ ಅವೀವ್ನಲ್ಲಿರುವ ಭಾರತೀಯ ಕಚೇರಿಯು ಪ್ರಜೆಗಳ ಸ್ಥಳಾಂತರಕ್ಕೆ ಬೇಕಾದ ವ್ಯವಸ್ಥೆಗಳನ್ನು ಮಾಡಲಿದೆ. ಅಲ್ಲದೆ ಈಗಾಗಲೇ ಹೆಸರು ನೋಂದಾಯಿಸದ ಪ್ರಜೆಗಳು ಈ ಕೆಳಗಿನ ಲಿಂಕ್ಗೆ ಭೇಟಿ ಕೊಟ್ಟು ಹೆಸರು ನೋಂದಾಯಿಸಿಕೊಳ್ಳುವಂತೆ ವಿನಂತಿಸಲಾಗಿದೆ. </p><p>ಲಿಂಕ್ ಇಲ್ಲಿದೆ: (<a href="https://www.indembassyisrael.gov.in/indian_national_reg">https://www.indembassyisrael.gov.in/indian_national_reg</a>) </p><p>ಯಾವುದೇ ಸಂದೇಹಗಳಿದ್ದರೆ 24/7 ಗಂಟೆ ಚಾಲ್ತಿಯಲ್ಲಿರುವ ದೂರವಾಣಿ ಸಂಖ್ಯೆಗೆ ಸಂಪರ್ಕಿಸಲು ಕೋರಲಾಗಿದೆ. </p><p>ದೂರವಾಣಿ ಸಂಖ್ಯೆಗಳು: <strong>+972 54-7520711; +972 54-3278392;</strong> </p><p>ಇಮೇಲ್: <strong>cons1.telaviv@mea.gov.in.</strong></p><p>ಇಸ್ರೇಲ್ನಲ್ಲಿರುವ ಎಲ್ಲ ಭಾರತೀಯ ಪ್ರಜೆಗಳು ಜಾಗರೂಕರಾಗಿರುವಂತೆಯೂ ಸೂಚನೆ ನೀಡಲಾಗಿದ್ದು, ಅಲ್ಲಿನ ಸರ್ಕಾರ ನೀಡುವ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆಯೂ ತಿಳಿಸಲಾಗಿದೆ. </p><p>ವಿದೇಶದಲ್ಲಿರುವ ಭಾರತೀಯ ಪ್ರಜೆಗಳ ಸುರಕ್ಷತೆಗೆ ಭಾರತ ಸರ್ಕಾರವು ಹೆಚ್ಚಿನ ಆದ್ಯತೆ ನೀಡುತ್ತದೆ. ಈಗಿನ ಪರಿಸ್ಥಿತಿಯ ಮೇಲೆ ಸರ್ಕಾರವು ಸೂಕ್ಷ್ಮ ನಿಗಾ ವಹಿಸುತ್ತಿದೆ ಎಂದು ಹೇಳಿದೆ. </p> .Operation Sindhu: ಇರಾನ್ನಲ್ಲಿರುವ ಭಾರತೀಯರ ಸ್ಥಳಾಂತರಕ್ಕೆ ‘ಆಪರೇಷನ್ ಸಿಂಧು’.ಇಸ್ರೇಲ್ ಮೇಲೆ ದೀರ್ಘ ಶ್ರೇಣಿಯ, ಶಕ್ತಿಶಾಲಿ 'Sejjil' ಕ್ಷಿಪಣಿ ದಾಳಿ: ಇರಾನ್ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಇಸ್ರೇಲ್ ಹಾಗೂ ಇರಾನ್ ನಡುವಣ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಬಿಕ್ಕಟ್ಟು ತೀವ್ರಗೊಂಡಿದೆ. ಸಂಘರ್ಷ ಪೀಡಿತ ಇರಾನ್ನಿಂದ ಭಾರತೀಯರನ್ನು ಸುರಕ್ಷಿತವಾಗಿ ಕರೆತರಲು 'ಆಪರೇಷನ್ ಸಿಂಧು' ಘೋಷಿಸಿದ್ದ ಕೇಂದ್ರ ಸರ್ಕಾರವು ಈಗ ಇದಕ್ಕೆ ಸಮಾನವಾಗಿ ಇಸ್ರೇಲ್ನಿಂದಲೂ ಭಾರತೀಯ ಪ್ರಜೆಗಳನ್ನು ಕರೆತರಲು ಕ್ರಮ ಕೈಗೊಂಡಿದೆ.</p><p>ಈ ಕುರಿತು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಪ್ರಕಟಣೆ ಹೊರಡಿಸಿದ್ದು, ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಮಾಹಿತಿ ಹಂಚಿಕೊಂಡಿದ್ದಾರೆ. </p><p>ಇಸ್ರೇಲ್ ಮತ್ತು ಇರಾನ್ ನಡುವಣ ಇತ್ತೀಚಿನ ಬೆಳವಣಿಗೆಗಳನ್ನು ಗಮನದಲ್ಲಿಟ್ಟುಕೊಂಡು, ಇಸ್ರೇಲ್ನಿಂದ ಹೊರ ಬರಲು ಬಯಸುವ ಭಾರತೀಯ ಪ್ರಜೆಗಳನ್ನು ಸ್ಥಳಾಂತರಿಸಲು ಭಾರತ ಸರ್ಕಾರ ನಿರ್ಧರಿಸಿದೆ. ಇಸ್ರೇಲ್ನಿಂದ ಭಾರತಕ್ಕೆ ಅವರ ಪ್ರಯಾಣವನ್ನು ಭೂಗಡಿಯ ನಂತರ ವಿಮಾನದ ಮೂಲಕ ಸುಗಮಗೊಳಿಸುತ್ತದೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ. </p><p>ಟೆಲ್ ಅವೀವ್ನಲ್ಲಿರುವ ಭಾರತೀಯ ಕಚೇರಿಯು ಪ್ರಜೆಗಳ ಸ್ಥಳಾಂತರಕ್ಕೆ ಬೇಕಾದ ವ್ಯವಸ್ಥೆಗಳನ್ನು ಮಾಡಲಿದೆ. ಅಲ್ಲದೆ ಈಗಾಗಲೇ ಹೆಸರು ನೋಂದಾಯಿಸದ ಪ್ರಜೆಗಳು ಈ ಕೆಳಗಿನ ಲಿಂಕ್ಗೆ ಭೇಟಿ ಕೊಟ್ಟು ಹೆಸರು ನೋಂದಾಯಿಸಿಕೊಳ್ಳುವಂತೆ ವಿನಂತಿಸಲಾಗಿದೆ. </p><p>ಲಿಂಕ್ ಇಲ್ಲಿದೆ: (<a href="https://www.indembassyisrael.gov.in/indian_national_reg">https://www.indembassyisrael.gov.in/indian_national_reg</a>) </p><p>ಯಾವುದೇ ಸಂದೇಹಗಳಿದ್ದರೆ 24/7 ಗಂಟೆ ಚಾಲ್ತಿಯಲ್ಲಿರುವ ದೂರವಾಣಿ ಸಂಖ್ಯೆಗೆ ಸಂಪರ್ಕಿಸಲು ಕೋರಲಾಗಿದೆ. </p><p>ದೂರವಾಣಿ ಸಂಖ್ಯೆಗಳು: <strong>+972 54-7520711; +972 54-3278392;</strong> </p><p>ಇಮೇಲ್: <strong>cons1.telaviv@mea.gov.in.</strong></p><p>ಇಸ್ರೇಲ್ನಲ್ಲಿರುವ ಎಲ್ಲ ಭಾರತೀಯ ಪ್ರಜೆಗಳು ಜಾಗರೂಕರಾಗಿರುವಂತೆಯೂ ಸೂಚನೆ ನೀಡಲಾಗಿದ್ದು, ಅಲ್ಲಿನ ಸರ್ಕಾರ ನೀಡುವ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆಯೂ ತಿಳಿಸಲಾಗಿದೆ. </p><p>ವಿದೇಶದಲ್ಲಿರುವ ಭಾರತೀಯ ಪ್ರಜೆಗಳ ಸುರಕ್ಷತೆಗೆ ಭಾರತ ಸರ್ಕಾರವು ಹೆಚ್ಚಿನ ಆದ್ಯತೆ ನೀಡುತ್ತದೆ. ಈಗಿನ ಪರಿಸ್ಥಿತಿಯ ಮೇಲೆ ಸರ್ಕಾರವು ಸೂಕ್ಷ್ಮ ನಿಗಾ ವಹಿಸುತ್ತಿದೆ ಎಂದು ಹೇಳಿದೆ. </p> .Operation Sindhu: ಇರಾನ್ನಲ್ಲಿರುವ ಭಾರತೀಯರ ಸ್ಥಳಾಂತರಕ್ಕೆ ‘ಆಪರೇಷನ್ ಸಿಂಧು’.ಇಸ್ರೇಲ್ ಮೇಲೆ ದೀರ್ಘ ಶ್ರೇಣಿಯ, ಶಕ್ತಿಶಾಲಿ 'Sejjil' ಕ್ಷಿಪಣಿ ದಾಳಿ: ಇರಾನ್ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>