<p><strong>ನವದೆಹಲಿ:</strong> 'ಆಪರೇಷನ್ ಸಿಂಧೂರ' ಇನ್ನೂ ಮುಂದುವರಿದಿದ್ದು, ಶತ್ರುಗಳು ದುಸ್ಸಾಹಸಕ್ಕೆ ಮುಂದಾದರೆ ತಕ್ಕ ಪ್ರತ್ಯುತ್ತರ ನೀಡಲಾಗುವುದು ಎಂದು ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ, ಇಂದು (ಮಂಗಳವಾರ) ಪಾಕಿಸ್ತಾನಕ್ಕೆ ಸ್ಪಷ್ಟ ಸಂದೇಶ ರವಾನಿಸಿದ್ದಾರೆ. </p><p>ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ದ್ವಿವೇದಿ, 'ಚೀನಾ ಜೊತೆ ಹೊಂದಿಕೊಂಡಿರುವ ವಾಸ್ತವಿಕ ನಿಯಂತ್ರಣ ರೇಖೆ (ಎಲ್ಎಸಿ)ಯಲ್ಲಿ ಪರಿಸ್ಥಿತಿ ಸ್ಥಿರವಾಗಿದ್ದು, ಆದರೂ ಜಾಗರೂಕತೆಯಿಂದಿರುವ ಅಗತ್ಯವಿದೆ' ಎಂದಿದ್ದಾರೆ. </p>.ಆಪರೇಷನ್ ಸಿಂಧೂರದ ಮೊದಲ ದಿನವೇ ಭಾರತ ಸೋತಿತ್ತು: ‘ಕೈ’ ನಾಯಕ ಪೃಥ್ವಿರಾಜ್ ವಿವಾದ.666 ಆಪರೇಷನ್ ಡ್ರೀಮ್ ಥಿಯೇಟರ್: ಡಾಲಿ-ಶಿವಣ್ಣ ಸಿನಿಮಾಗೆ ಪ್ರಿಯಾಂಕಾ ಮೋಹನ್ ನಾಯಕಿ.<p>ಆಪರೇಷನ್ ಸಿಂಧೂರ ಕಾರ್ಯಾಚರಣೆಯ ಕುರಿತು ವಿವಿಧ ಅಂಶಗಳನ್ನು ವಿವರಣೆ ನೀಡಿದ ಜನರಲ್ ದ್ವಿವೇದಿ, 'ನಿಮಗೆಲ್ಲರಿಗೂ ತಿಳಿದಿರುವಂತೆಯೇ ಆಪರೇಷನ್ ಸಿಂಧೂರ ಮುಂದುವರಿದಿದೆ. ಎಲ್ಲ ರೀತಿಯಲ್ಲೂ ಸೇನೆ ಸನ್ನದ್ಧವಾಗಿದೆ' ಎಂದು ತಿಳಿಸಿದ್ದಾರೆ. </p><p>ಗಡಿಯಾಚೆಗಿನ ಭಯೋತ್ಪಾದನೆಗೆ ಭಾರತ ಸ್ಪಷ್ಟವಾದ ಉತ್ತರ ನೀಡಿದೆ. ಇದು ಸಿದ್ಧತೆ, ನಿಖರತೆ ಹಾಗೂ ಕಾರ್ಯತಂತ್ರದ ಭಾಗವಾಗಿದೆ ಎಂದು ಅವರು ಹೇಳಿದ್ದಾರೆ. </p><p>ಜಮ್ಮು ಮತ್ತು ಕಾಶ್ಮೀರದಲ್ಲಿ ಪರಿಸ್ಥಿತಿ ಸೂಕ್ಷ್ಮವಾಗಿದ್ದರೂ ನಿಯಂತ್ರಣದಲ್ಲಿದೆ ಎಂದು ಅವರು ತಿಳಿಸಿದ್ದಾರೆ. </p><p>ಕಳೆದ ವರ್ಷ ಪಹಲ್ಗಾಮ್ನಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದನಾ ದಾಳಿಗೆ ಪ್ರತೀಕಾರವಾಗಿ ಪಾಕಿಸ್ತಾನದ ಉಗ್ರ ನೆಲೆಗಳನ್ನು ಗುರಿಯಾಗಿಸಿ ಭಾರತ, ಆಪರೇಷನ್ ಸಿಂಧೂರ ಕಾರ್ಯಾಚರಣೆಯನ್ನು ನಡೆಸಿತ್ತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> 'ಆಪರೇಷನ್ ಸಿಂಧೂರ' ಇನ್ನೂ ಮುಂದುವರಿದಿದ್ದು, ಶತ್ರುಗಳು ದುಸ್ಸಾಹಸಕ್ಕೆ ಮುಂದಾದರೆ ತಕ್ಕ ಪ್ರತ್ಯುತ್ತರ ನೀಡಲಾಗುವುದು ಎಂದು ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ, ಇಂದು (ಮಂಗಳವಾರ) ಪಾಕಿಸ್ತಾನಕ್ಕೆ ಸ್ಪಷ್ಟ ಸಂದೇಶ ರವಾನಿಸಿದ್ದಾರೆ. </p><p>ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ದ್ವಿವೇದಿ, 'ಚೀನಾ ಜೊತೆ ಹೊಂದಿಕೊಂಡಿರುವ ವಾಸ್ತವಿಕ ನಿಯಂತ್ರಣ ರೇಖೆ (ಎಲ್ಎಸಿ)ಯಲ್ಲಿ ಪರಿಸ್ಥಿತಿ ಸ್ಥಿರವಾಗಿದ್ದು, ಆದರೂ ಜಾಗರೂಕತೆಯಿಂದಿರುವ ಅಗತ್ಯವಿದೆ' ಎಂದಿದ್ದಾರೆ. </p>.ಆಪರೇಷನ್ ಸಿಂಧೂರದ ಮೊದಲ ದಿನವೇ ಭಾರತ ಸೋತಿತ್ತು: ‘ಕೈ’ ನಾಯಕ ಪೃಥ್ವಿರಾಜ್ ವಿವಾದ.666 ಆಪರೇಷನ್ ಡ್ರೀಮ್ ಥಿಯೇಟರ್: ಡಾಲಿ-ಶಿವಣ್ಣ ಸಿನಿಮಾಗೆ ಪ್ರಿಯಾಂಕಾ ಮೋಹನ್ ನಾಯಕಿ.<p>ಆಪರೇಷನ್ ಸಿಂಧೂರ ಕಾರ್ಯಾಚರಣೆಯ ಕುರಿತು ವಿವಿಧ ಅಂಶಗಳನ್ನು ವಿವರಣೆ ನೀಡಿದ ಜನರಲ್ ದ್ವಿವೇದಿ, 'ನಿಮಗೆಲ್ಲರಿಗೂ ತಿಳಿದಿರುವಂತೆಯೇ ಆಪರೇಷನ್ ಸಿಂಧೂರ ಮುಂದುವರಿದಿದೆ. ಎಲ್ಲ ರೀತಿಯಲ್ಲೂ ಸೇನೆ ಸನ್ನದ್ಧವಾಗಿದೆ' ಎಂದು ತಿಳಿಸಿದ್ದಾರೆ. </p><p>ಗಡಿಯಾಚೆಗಿನ ಭಯೋತ್ಪಾದನೆಗೆ ಭಾರತ ಸ್ಪಷ್ಟವಾದ ಉತ್ತರ ನೀಡಿದೆ. ಇದು ಸಿದ್ಧತೆ, ನಿಖರತೆ ಹಾಗೂ ಕಾರ್ಯತಂತ್ರದ ಭಾಗವಾಗಿದೆ ಎಂದು ಅವರು ಹೇಳಿದ್ದಾರೆ. </p><p>ಜಮ್ಮು ಮತ್ತು ಕಾಶ್ಮೀರದಲ್ಲಿ ಪರಿಸ್ಥಿತಿ ಸೂಕ್ಷ್ಮವಾಗಿದ್ದರೂ ನಿಯಂತ್ರಣದಲ್ಲಿದೆ ಎಂದು ಅವರು ತಿಳಿಸಿದ್ದಾರೆ. </p><p>ಕಳೆದ ವರ್ಷ ಪಹಲ್ಗಾಮ್ನಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದನಾ ದಾಳಿಗೆ ಪ್ರತೀಕಾರವಾಗಿ ಪಾಕಿಸ್ತಾನದ ಉಗ್ರ ನೆಲೆಗಳನ್ನು ಗುರಿಯಾಗಿಸಿ ಭಾರತ, ಆಪರೇಷನ್ ಸಿಂಧೂರ ಕಾರ್ಯಾಚರಣೆಯನ್ನು ನಡೆಸಿತ್ತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>