<p><strong>ನವದೆಹಲಿ</strong>: ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಯಾವುದೇ ತಕರಾರು ಇಲ್ಲ. ಆದರೆ, ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣಗಳಿಗೆ ಸಂಬಂಧಿಸಿದಂತೆ ಸಾಮಾಜಿಕ ಮಾಧ್ಯಮಗಳಲ್ಲಿ ಯಾವುದೇ ಪೋಸ್ಟ್ಗಳನ್ನು ಹಂಚಿಕೊಳ್ಳುವಂತಿಲ್ಲ ಎಂದು ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮೊಹಮದಾಬಾದ್ ಅವರಿಗೆ ಸುಪ್ರೀಂ ಕೋರ್ಟ್ ಸೂಚಿಸಿದೆ.</p><p>ಭಯೋತ್ಪಾದಕರು ಮತ್ತು ಅವರ ನೆಲೆಗಳನ್ನು ಗುರಿಯಾಗಿಸಿ ಪಾಕಿಸ್ತಾನ ಹಾಗೂ ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಭಾರತೀಯ ಸೇನೆ ನಡೆಸಿದ 'ಆಪರೇಷನ್ ಸಿಂಧೂರ'ಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಮಾಧ್ಯಮಗಳಲ್ಲಿ ವಿವಾದಾತ್ಮಕ ಪೋಸ್ಟ್ ಹಂಚಿಕೊಂಡಿದ್ದ ಆರೋಪ ಅಲಿ ಅವರ ಮೇಲಿದೆ.</p><p>ಅಲಿ ಅವರಿಗೆ ಮಧ್ಯಂತರ ಜಾಮೀನು ನೀಡುವ ಸಂದರ್ಭದಲ್ಲಿ ವಿಧಿಸಿರುವ ಷರತ್ತುಗಳಿಗೆ ಮಾರ್ಪಾಡು ಮಾಡಲು ನ್ಯಾ. ಸೂರ್ಯಕಾಂತ್ ಹಾಗೂ ನ್ಯಾ. ದೀಪಂಕರ್ ದತ್ತಾ ಅವರಿದ್ದ ಪೀಠ ನಿರಾಕರಿಸಿದ್ದು, ಸಾಮಾಜಿಕ ಮಾಧ್ಯಮಗಳಲ್ಲಿ ಈಗಾಗಲೇ ಹಂಚಿಕೊಂಡಿರುವ ಪೋಸ್ಟ್ಗಳಿಗೆ ಸಂಬಂಧಿಸಿದಂತೆ ತನಿಖೆ ಪ್ರಗತಿಯಲ್ಲಿದೆ. ಹಾಗಾಗಿ, ಆ ವಿಚಾರವಾಗಿ ಯಾವುದೇ ಪೋಸ್ಟ್, ಬರಹ ಅಥವಾ ಭಾಷಣವನ್ನು ಹಂಚಿಕೊಳ್ಳುವಂತಿಲ್ಲ ಎಂದು ಸ್ಪಷ್ಟವಾಗಿ ಪುನರುಚ್ಛರಿಸಿದೆ.</p><p>ಅಷ್ಟೇ ಅಲ್ಲದೆ, ಭಾರತದ ನೆಲದಲ್ಲಿ ನಡೆದ ಉಗ್ರರ ದಾಳಿ ಹಾಗೂ ಅದಕ್ಕೆ ಭಾರತೀಯ ಸಶಸ್ತ್ರ ಪಡೆಗಳು ಪ್ರತಿ ದಾಳಿ ಕುರಿತು ಯಾವುದೇ ಅಭಿಪ್ರಾಯ ವ್ಯಕ್ತಪಡಿಸದಂತೆಯೂ ಎಚ್ಚರಿಸಿದೆ.</p><p>ಅಲಿ ಅವರಿಗೆ ನೀಡಿರುವ ಮಧ್ಯಂತರ ಜಾಮೀನನು ಅವಧಿಯನ್ನು ವಿಸ್ತರಿಸುತ್ತಿರುವುದಾಗಿಯೂ ಹೇಳಿರುವ ಕೋರ್ಟ್, ಮುಂದಿನ ವಿಚಾರಣಾ ದಿನಾಂಕದ ವೇಳೆಗೆ ತನಿಖೆ ಪೂರ್ಣಗೊಳಸುವಂತೆ ಎಸ್ಐಟಿಗೆ ನಿರ್ದೇಶನ ನೀಡಿದೆ.</p><p>'ಕರ್ನಲ್ ಸೋಫಿಯಾ ಅವರನ್ನು ಶ್ಲಾಘಿಸುವ ಬಲಪಂಥೀಯರು, ಗುಂಪು ಹಲ್ಲೆಗಳು ಹಾಗೂ ಬುಲ್ಡೋಜರ್ ಕ್ರಮದ ಸಂತ್ರಸ್ತರಿಗೆ ರಕ್ಷಣೆ ನೀಡುವಂತೆಯೂ ಒತ್ತಾಯಿಸಬೇಕು' ಎಂದು ಖಾನ್ ಅವರು ಮೇ 7ರಂದು ಪೋಸ್ಟ್ ಮಾಡಿದ್ದರು. ಈ ಕುರಿತು ಎರಡು ಎಫ್ಐಆರ್ ದಾಖಲಾಗಿವೆ. ಅದರಂತೆ ಅವರನ್ನು ಮೇ 18ರಂದು ಪೊಲೀಸರು ಬಂಧಿಸಿದ್ದರು.</p>.ಸೋಫಿಯಾ, ವ್ಯೋಮಿಕಾ ಬಗ್ಗೆ ಅವಹೇಳನ: ಹರಿಯಾಣ ಖಾಸಗಿ ವಿ.ವಿ ಪ್ರೊಫೆಸರ್ ಬಂಧನ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಯಾವುದೇ ತಕರಾರು ಇಲ್ಲ. ಆದರೆ, ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣಗಳಿಗೆ ಸಂಬಂಧಿಸಿದಂತೆ ಸಾಮಾಜಿಕ ಮಾಧ್ಯಮಗಳಲ್ಲಿ ಯಾವುದೇ ಪೋಸ್ಟ್ಗಳನ್ನು ಹಂಚಿಕೊಳ್ಳುವಂತಿಲ್ಲ ಎಂದು ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮೊಹಮದಾಬಾದ್ ಅವರಿಗೆ ಸುಪ್ರೀಂ ಕೋರ್ಟ್ ಸೂಚಿಸಿದೆ.</p><p>ಭಯೋತ್ಪಾದಕರು ಮತ್ತು ಅವರ ನೆಲೆಗಳನ್ನು ಗುರಿಯಾಗಿಸಿ ಪಾಕಿಸ್ತಾನ ಹಾಗೂ ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಭಾರತೀಯ ಸೇನೆ ನಡೆಸಿದ 'ಆಪರೇಷನ್ ಸಿಂಧೂರ'ಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಮಾಧ್ಯಮಗಳಲ್ಲಿ ವಿವಾದಾತ್ಮಕ ಪೋಸ್ಟ್ ಹಂಚಿಕೊಂಡಿದ್ದ ಆರೋಪ ಅಲಿ ಅವರ ಮೇಲಿದೆ.</p><p>ಅಲಿ ಅವರಿಗೆ ಮಧ್ಯಂತರ ಜಾಮೀನು ನೀಡುವ ಸಂದರ್ಭದಲ್ಲಿ ವಿಧಿಸಿರುವ ಷರತ್ತುಗಳಿಗೆ ಮಾರ್ಪಾಡು ಮಾಡಲು ನ್ಯಾ. ಸೂರ್ಯಕಾಂತ್ ಹಾಗೂ ನ್ಯಾ. ದೀಪಂಕರ್ ದತ್ತಾ ಅವರಿದ್ದ ಪೀಠ ನಿರಾಕರಿಸಿದ್ದು, ಸಾಮಾಜಿಕ ಮಾಧ್ಯಮಗಳಲ್ಲಿ ಈಗಾಗಲೇ ಹಂಚಿಕೊಂಡಿರುವ ಪೋಸ್ಟ್ಗಳಿಗೆ ಸಂಬಂಧಿಸಿದಂತೆ ತನಿಖೆ ಪ್ರಗತಿಯಲ್ಲಿದೆ. ಹಾಗಾಗಿ, ಆ ವಿಚಾರವಾಗಿ ಯಾವುದೇ ಪೋಸ್ಟ್, ಬರಹ ಅಥವಾ ಭಾಷಣವನ್ನು ಹಂಚಿಕೊಳ್ಳುವಂತಿಲ್ಲ ಎಂದು ಸ್ಪಷ್ಟವಾಗಿ ಪುನರುಚ್ಛರಿಸಿದೆ.</p><p>ಅಷ್ಟೇ ಅಲ್ಲದೆ, ಭಾರತದ ನೆಲದಲ್ಲಿ ನಡೆದ ಉಗ್ರರ ದಾಳಿ ಹಾಗೂ ಅದಕ್ಕೆ ಭಾರತೀಯ ಸಶಸ್ತ್ರ ಪಡೆಗಳು ಪ್ರತಿ ದಾಳಿ ಕುರಿತು ಯಾವುದೇ ಅಭಿಪ್ರಾಯ ವ್ಯಕ್ತಪಡಿಸದಂತೆಯೂ ಎಚ್ಚರಿಸಿದೆ.</p><p>ಅಲಿ ಅವರಿಗೆ ನೀಡಿರುವ ಮಧ್ಯಂತರ ಜಾಮೀನನು ಅವಧಿಯನ್ನು ವಿಸ್ತರಿಸುತ್ತಿರುವುದಾಗಿಯೂ ಹೇಳಿರುವ ಕೋರ್ಟ್, ಮುಂದಿನ ವಿಚಾರಣಾ ದಿನಾಂಕದ ವೇಳೆಗೆ ತನಿಖೆ ಪೂರ್ಣಗೊಳಸುವಂತೆ ಎಸ್ಐಟಿಗೆ ನಿರ್ದೇಶನ ನೀಡಿದೆ.</p><p>'ಕರ್ನಲ್ ಸೋಫಿಯಾ ಅವರನ್ನು ಶ್ಲಾಘಿಸುವ ಬಲಪಂಥೀಯರು, ಗುಂಪು ಹಲ್ಲೆಗಳು ಹಾಗೂ ಬುಲ್ಡೋಜರ್ ಕ್ರಮದ ಸಂತ್ರಸ್ತರಿಗೆ ರಕ್ಷಣೆ ನೀಡುವಂತೆಯೂ ಒತ್ತಾಯಿಸಬೇಕು' ಎಂದು ಖಾನ್ ಅವರು ಮೇ 7ರಂದು ಪೋಸ್ಟ್ ಮಾಡಿದ್ದರು. ಈ ಕುರಿತು ಎರಡು ಎಫ್ಐಆರ್ ದಾಖಲಾಗಿವೆ. ಅದರಂತೆ ಅವರನ್ನು ಮೇ 18ರಂದು ಪೊಲೀಸರು ಬಂಧಿಸಿದ್ದರು.</p>.ಸೋಫಿಯಾ, ವ್ಯೋಮಿಕಾ ಬಗ್ಗೆ ಅವಹೇಳನ: ಹರಿಯಾಣ ಖಾಸಗಿ ವಿ.ವಿ ಪ್ರೊಫೆಸರ್ ಬಂಧನ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>