<p><strong>ನವದೆಹಲಿ</strong>: ‘ಆಪರೇಷನ್ ಸಿಂಧೂರ ಇನ್ನೂ ಮುಂದುವರೆದಿದ್ದು, ಸೇನೆಯು ದಿನದ 24 ಗಂಟೆಯನ್ನೂ ಒಳಗೊಂಡು ವರ್ಷವಿಡೀ ಸನ್ನದ್ಧವಾಗಿರಬೇಕು’ ಎಂದು ರಕ್ಷಣಾ ಪಡೆಗಳ ಮುಖ್ಯಸ್ಥ(ಸಿಡಿಎಸ್) ಜನರಲ್ ಅನಿಲ್ ಚೌಹಾಣ್ ಹೇಳಿದ್ದಾರೆ.</p><p>ಇಲ್ಲಿನ ಸುಬ್ರತೋ ಪಾರ್ಕ್ನಲ್ಲಿ ಆಯೋಜಿಸಲಾಗಿದ್ದ ರಕ್ಷಣಾ ವಿಚಾರ ಸಂಕಿರಣದಲ್ಲಿ ಮಾತನಾಡಿದ ಅವರು, ಭವಿಷ್ಯದಲ್ಲಿ ಮಿಲಿಟರಿಗೆ ಮಾಹಿತಿ ಯೋಧರು, ತಂತ್ರಜ್ಞಾನ ಯೋಧರು ಮತ್ತು ವಿದ್ವಾಂಸ ಯೋಧರು ಬೇಕಾಗುತ್ತಾರೆ ಎಂದು ಹೇಳಿದರು.</p><p>ಯಾವುದೇ ಸಂದರ್ಭದಲ್ಲಿ ಯುದ್ಧ ಆಗಬಹುದಾದ ಈ ಸನ್ನಿವೇಶದಲ್ಲಿ ಭವಿಷ್ಯದ ಸೈನಿಕನು ಮಾಹಿತಿ, ತಂತ್ರಜ್ಞಾನ ಮತ್ತು ವಿದ್ವಾಂಸನಾಗಿರಬೇಕು ಎಂದು ಸಿಡಿಎಸ್ ಹೇಳಿದರು.</p><p>ಯುದ್ಧದಲ್ಲಿ ರನ್ನರ್ ಅಪ್ ಇರುವುದಿಲ್ಲ. ಯಾವುದೇ ಮಿಲಿಟರಿ ನಿರಂತರ ಎಚ್ಚರಿಕೆಯಿಂದ ಇರಬೇಕು ಮತ್ತು ಉನ್ನತಮಟ್ಟದ ಕಾರ್ಯಾಚರಣೆಗೆ ಸದಾ ಸನ್ನದ್ಧರಾಗಿರಬೇಕು. ಉದಾಹರಣೆಗೆ ನಮ್ಮ ಆಪರೇಷನ್ ಸಿಂಧೂರ ಈಗಲೂ ಮುಂದುವರಿದಿದೆ. ವರ್ಷದ 365 ದಿನ, ದಿನದ 24 ಗಂಟೆಯೂ ನಾವು ಸಜ್ಜಾಗಿರಬೇಲು ಎಂದಿದ್ದಾರೆ.</p><p>ಪಹಲ್ಗಾಮ್ನಲ್ಲಿ ಏಪ್ರಿಲ್ 22ರಂದು ಭಯೋತ್ಪಾದಕ ದಾಳಿಗೆ ಪ್ರತಿಯಾಗಿ ಮೇ 7ರಂದು ಆಪರೇಷನ್ ಸಿಂಧೂರ ಆರಂಭಿಸಿದ್ದ ಭಾರತೀಯ ಸೇನೆ, ಪಾಕಿಸ್ತಾನದಲ್ಲಿ ಉಗ್ರರ ಪ್ರಮುಖ ನೆಲೆಗಳನ್ನು ಧ್ವಂಸ ಮಾಡಿತ್ತು.</p><p><strong>‘ಆಪರೇಷನ್ ಸಿಂಧೂರ–ಅಧ್ಯಯನ ಅಗತ್ಯ’</strong> </p><p> ‘50ಕ್ಕಿಂತಲೂ ಕಡಿಮೆ ಆಯುಧಗಳನ್ನು ಬಳಸಿಯೂ ಎದುರಾಳಿಯನ್ನು ಹೇಗೆ ಮಾತುಕತೆಗೆ ಬರುವಂತೆ ಮಾಡಬಹುದು’ ಎನ್ನುವುದನ್ನು ‘ಆಪರೇಷನ್ ಸಿಂಧೂರ’ ಸಾಬೀತುಪಡಿಸಿದೆ’ ಎಂದು ಭಾರತೀಯ ವಾಯುಪಡೆಯ ಉಪ ಮುಖ್ಯಸ್ಥ ಏರ್ ಮಾರ್ಷಲ್ ನರ್ಮದೇಶ್ವರ್ ತಿವಾರಿ ಹೇಳಿದರು. ಸೆಂಟರ್ ಫಾರ್ ಏರ್ ಸ್ಟಡೀಸ್ (ಸಿಎಪಿಎಸ್) ಮತ್ತು ಕಾಲೇಜ್ ಆಫ್ ಏರ್ ವಾರ್ಫೇರ್ನಲ್ಲಿ ಆಯೋಜಿಸಿದ್ದ ಸಂವಾದದಲ್ಲಿ ಅವರು ಮಾತನಾಡಿದರು. ವಾಯುಪಡೆಯಲ್ಲಿ ಮಾನವ ರಹಿತ ವ್ಯವಸ್ಥೆಗಿಂತಲೂ ಮಾನವ ಸಹಿತ ವ್ಯವಸ್ಥೆಯಿಂದ ದೊಡ್ಡ ಮಟ್ಟದ ಲಾಭವಿದೆ. ಇದಕ್ಕೆ ಆಪರೇಷನ್ ಸಿಂಧೂರ ಕಾರ್ಯಾಚರಣೆ ಉತ್ತಮ ಮಾದರಿಯಾಗಿದೆ. ಅದರ ಅಧ್ಯಯನ ಅಗತ್ಯ ಎಂದರು. </p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ‘ಆಪರೇಷನ್ ಸಿಂಧೂರ ಇನ್ನೂ ಮುಂದುವರೆದಿದ್ದು, ಸೇನೆಯು ದಿನದ 24 ಗಂಟೆಯನ್ನೂ ಒಳಗೊಂಡು ವರ್ಷವಿಡೀ ಸನ್ನದ್ಧವಾಗಿರಬೇಕು’ ಎಂದು ರಕ್ಷಣಾ ಪಡೆಗಳ ಮುಖ್ಯಸ್ಥ(ಸಿಡಿಎಸ್) ಜನರಲ್ ಅನಿಲ್ ಚೌಹಾಣ್ ಹೇಳಿದ್ದಾರೆ.</p><p>ಇಲ್ಲಿನ ಸುಬ್ರತೋ ಪಾರ್ಕ್ನಲ್ಲಿ ಆಯೋಜಿಸಲಾಗಿದ್ದ ರಕ್ಷಣಾ ವಿಚಾರ ಸಂಕಿರಣದಲ್ಲಿ ಮಾತನಾಡಿದ ಅವರು, ಭವಿಷ್ಯದಲ್ಲಿ ಮಿಲಿಟರಿಗೆ ಮಾಹಿತಿ ಯೋಧರು, ತಂತ್ರಜ್ಞಾನ ಯೋಧರು ಮತ್ತು ವಿದ್ವಾಂಸ ಯೋಧರು ಬೇಕಾಗುತ್ತಾರೆ ಎಂದು ಹೇಳಿದರು.</p><p>ಯಾವುದೇ ಸಂದರ್ಭದಲ್ಲಿ ಯುದ್ಧ ಆಗಬಹುದಾದ ಈ ಸನ್ನಿವೇಶದಲ್ಲಿ ಭವಿಷ್ಯದ ಸೈನಿಕನು ಮಾಹಿತಿ, ತಂತ್ರಜ್ಞಾನ ಮತ್ತು ವಿದ್ವಾಂಸನಾಗಿರಬೇಕು ಎಂದು ಸಿಡಿಎಸ್ ಹೇಳಿದರು.</p><p>ಯುದ್ಧದಲ್ಲಿ ರನ್ನರ್ ಅಪ್ ಇರುವುದಿಲ್ಲ. ಯಾವುದೇ ಮಿಲಿಟರಿ ನಿರಂತರ ಎಚ್ಚರಿಕೆಯಿಂದ ಇರಬೇಕು ಮತ್ತು ಉನ್ನತಮಟ್ಟದ ಕಾರ್ಯಾಚರಣೆಗೆ ಸದಾ ಸನ್ನದ್ಧರಾಗಿರಬೇಕು. ಉದಾಹರಣೆಗೆ ನಮ್ಮ ಆಪರೇಷನ್ ಸಿಂಧೂರ ಈಗಲೂ ಮುಂದುವರಿದಿದೆ. ವರ್ಷದ 365 ದಿನ, ದಿನದ 24 ಗಂಟೆಯೂ ನಾವು ಸಜ್ಜಾಗಿರಬೇಲು ಎಂದಿದ್ದಾರೆ.</p><p>ಪಹಲ್ಗಾಮ್ನಲ್ಲಿ ಏಪ್ರಿಲ್ 22ರಂದು ಭಯೋತ್ಪಾದಕ ದಾಳಿಗೆ ಪ್ರತಿಯಾಗಿ ಮೇ 7ರಂದು ಆಪರೇಷನ್ ಸಿಂಧೂರ ಆರಂಭಿಸಿದ್ದ ಭಾರತೀಯ ಸೇನೆ, ಪಾಕಿಸ್ತಾನದಲ್ಲಿ ಉಗ್ರರ ಪ್ರಮುಖ ನೆಲೆಗಳನ್ನು ಧ್ವಂಸ ಮಾಡಿತ್ತು.</p><p><strong>‘ಆಪರೇಷನ್ ಸಿಂಧೂರ–ಅಧ್ಯಯನ ಅಗತ್ಯ’</strong> </p><p> ‘50ಕ್ಕಿಂತಲೂ ಕಡಿಮೆ ಆಯುಧಗಳನ್ನು ಬಳಸಿಯೂ ಎದುರಾಳಿಯನ್ನು ಹೇಗೆ ಮಾತುಕತೆಗೆ ಬರುವಂತೆ ಮಾಡಬಹುದು’ ಎನ್ನುವುದನ್ನು ‘ಆಪರೇಷನ್ ಸಿಂಧೂರ’ ಸಾಬೀತುಪಡಿಸಿದೆ’ ಎಂದು ಭಾರತೀಯ ವಾಯುಪಡೆಯ ಉಪ ಮುಖ್ಯಸ್ಥ ಏರ್ ಮಾರ್ಷಲ್ ನರ್ಮದೇಶ್ವರ್ ತಿವಾರಿ ಹೇಳಿದರು. ಸೆಂಟರ್ ಫಾರ್ ಏರ್ ಸ್ಟಡೀಸ್ (ಸಿಎಪಿಎಸ್) ಮತ್ತು ಕಾಲೇಜ್ ಆಫ್ ಏರ್ ವಾರ್ಫೇರ್ನಲ್ಲಿ ಆಯೋಜಿಸಿದ್ದ ಸಂವಾದದಲ್ಲಿ ಅವರು ಮಾತನಾಡಿದರು. ವಾಯುಪಡೆಯಲ್ಲಿ ಮಾನವ ರಹಿತ ವ್ಯವಸ್ಥೆಗಿಂತಲೂ ಮಾನವ ಸಹಿತ ವ್ಯವಸ್ಥೆಯಿಂದ ದೊಡ್ಡ ಮಟ್ಟದ ಲಾಭವಿದೆ. ಇದಕ್ಕೆ ಆಪರೇಷನ್ ಸಿಂಧೂರ ಕಾರ್ಯಾಚರಣೆ ಉತ್ತಮ ಮಾದರಿಯಾಗಿದೆ. ಅದರ ಅಧ್ಯಯನ ಅಗತ್ಯ ಎಂದರು. </p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>