<p><strong>ನವದೆಹಲಿ:</strong> ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆಯು ಪಾಕಿಸ್ತಾನದ ಉಗ್ರ ಸಂಘಟನೆಗಳನ್ನು ಗುರಿಯಾಗಿಸಿಕೊಂಡು ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆಯನ್ನು ನಡೆಸಿದ್ದಕ್ಕಾಗಿ ಕೇಂದ್ರ ಸರ್ಕಾರ ಮತ್ತು ಸಶಸ್ತ್ರ ಪಡೆಗಳಿಗೆ ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ಅಭಿನಂದನೆ ಸಲ್ಲಿಸಿದ್ದಾರೆ. </p><p>ಪಹಲ್ಗಾಮ್ ಹತ್ಯಾಕಾಂಡದಲ್ಲಿ ತಮ್ಮವರನ್ನು ಕಳೆದುಕೊಂಡ ಕುಟುಂಬಸ್ಥರಿಗೆ ಮತ್ತು ಇಡೀ ದೇಶಕ್ಕೆ ನ್ಯಾಯ ಒದಗಿಸಲು ತೆಗೆದುಕೊಳ್ಳಲಾದ ಈ ಕ್ರಮವು ಇಡೀ ದೇಶದ ಸ್ವಾಭಿಮಾನ ಮತ್ತು ಧೈರ್ಯವನ್ನು ಹೆಚ್ಚಿಸಿದೆ ಎಂದು ಭಾಗವತ್ ತಿಳಿಸಿದ್ದಾರೆ </p><p>ಪಾಕಿಸ್ತಾನದ ಭಯೋತ್ಪಾದಕರ ವಿರುದ್ಧ ತೆಗೆದುಕೊಳ್ಳುತ್ತಿರುವ ಮಿಲಿಟರಿ ಕ್ರಮವು ದೇಶದ ಭದ್ರತೆಗೆ ಅಗತ್ಯ ಮತ್ತು ಅನಿವಾರ್ಯ ಹೆಜ್ಜೆಯಾಗಿದೆ. ರಾಷ್ಟ್ರೀಯ ಬಿಕ್ಕಟ್ಟಿನ ಈ ಸಮಯದಲ್ಲಿ ಇಡೀ ದೇಶವು ಸರ್ಕಾರ ಮತ್ತು ಸಶಸ್ತ್ರ ಪಡೆಗಳೊಂದಿಗೆ ಮುಕ್ತ ಮನಸ್ಸಿನಿಂದ ನಿಂತಿದೆ ಎಂದು ಭಾಗವತ್ ಹೇಳಿದ್ದಾರೆ.</p><p>ಭಾರತದ ಗಡಿಯಲ್ಲಿ ಧಾರ್ಮಿಕ ಸ್ಥಳಗಳು ಮತ್ತು ನಾಗರಿಕ ಮನೆಗಳ ಮೇಲೆ ಪಾಕ್ ಸೇನೆ ನಡೆಸಿದ ದಾಳಿಯನ್ನು ನಾವು ಖಂಡಿಸುತ್ತೇವೆ. ಈ ದಾಳಿಗೆ ಬಲಿಯಾದವರ ಕುಟುಂಬಗಳಿಗೆ ಸಂತಾಪವನ್ನು ವ್ಯಕ್ತಪಡಿಸುತ್ತೇವೆ ಎಂದು ಅವರು ಹೇಳಿದ್ದಾರೆ. </p><p>ಈ ಬಿಕ್ಕಟ್ಟಿನ ಸಮಯದಲ್ಲಿ ಸರ್ಕಾರ ಹೊರಡಿಸುವ ಆದೇಶಗಳನ್ನು ಸಂಪೂರ್ಣವಾಗಿ ಪಾಲಿಸಬೇಕು. ಎಲ್ಲಾ ನಾಗರಿಕರು ತಮ್ಮ ದೇಶಭಕ್ತಿಯನ್ನು ಪ್ರದರ್ಶಿಸಲು ಮತ್ತು ಅಗತ್ಯವಿರುವಲ್ಲಿ ಸೈನ್ಯ ಮತ್ತು ಆಡಳಿತದೊಂದಿಗೆ ಸಹಕರಿಸಲು ಸಿದ್ಧರಾಗಿರಬೇಕು ಎಂದು ಭಾಗವತ್ ಮನವಿ ಮಾಡಿದ್ದಾರೆ.</p>.<p><strong>ಸರ್ಕಾರ, ಸೇನೆಗೆ ಬೆಂಬಲ ನೀಡಲು ಬಿಎಂಎಸ್ ಕರೆ</strong></p><p>ರಾಷ್ಟ್ರೀಯ ಸ್ವಯಂ ಸೇವಕ ಸಂಸ್ಥೆಯ (ಆರ್ಎಸ್ಎಸ್) ಅಂಗಸಂಸ್ಥೆಯಾಗಿರುವ ಭಾರತೀಯ ಮಜ್ದೂರ್ ಸಂಘ (ಬಿಎಂಎಸ್) ಎಲ್ಲ ರೀತಿಯ ಮುಷ್ಕರಗಳು, ಆಂದೋಲನಗಳನ್ನು ಮುಂದೂಡಲು ಹಾಗೂ ಸರ್ಕಾರ ಮತ್ತು ಸಶಸ್ತ್ರ ಪಡೆಗೆ ನೆರವು ನೀಡಲು ಕರೆ ನೀಡಿದೆ. </p><p>‘ಕೇಂದ್ರ ಮತ್ತು ರಾಜ್ಯ ಸರ್ಕಾರಿ ನೌಕರರು ಅತಿ ಅಗತ್ಯವಿದ್ದರೆ ಮಾತ್ರ ರಜಾ ತೆಗೆದುಕೊಳ್ಳಿ, ಈಗಾಗಲೇ ರಜೆಯಲ್ಲಿ ಇರುವವರು ರಜೆಯನ್ನು ರದ್ದುಗೊಳಿಸಿ ಕರ್ತವ್ಯಕ್ಕೆ ಹಾಜರಾಗಿ’ ಎಂದು ಬಿಎಂಎಸ್ ಮನವಿ ಮಾಡಿದೆ.</p><p>‘ಅಗತ್ಯವಿದ್ದರೆ ಅಧಿಕ ಸಮಯ, ಹೆಚ್ಚುವರಿ ಸಂಬಳವಿಲ್ಲದೆ ಕರ್ತವ್ಯಕ್ಕೆ ಹಾಜರಾಗಿ, ಯುದ್ಧದ ಸಮಯದಲ್ಲಿ ತೆಗೆದುಕೊಳ್ಳಬೇಕಾದ ಅಗತ್ಯ ಮುನ್ನೆಚ್ಚರಿಕೆ ಬಗ್ಗೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸಿ ಎಂದು ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.</p>.India-Pakistan Tensions: ಹಡಗು, ಬಂದರುಗಳಲ್ಲಿ ಭದ್ರತೆ ಹೆಚ್ಚಳ.India-Pakistan Tensions: ಗಡಿ ಭದ್ರತಾ ಪಡೆಗಳ ಮುಖ್ಯಸ್ಥರ ಜತೆ ಶಾ ಮಾತುಕತೆ.India-Pakistan Tensions: ಪಾಕ್ ದಾಳಿ ಯತ್ನ: ಜಮ್ಮುವಿಗೆ ದೌಡಾಯಿಸಿದ CM ಒಮರ್.India-Pakistan Tensions: ಅಮೆರಿಕ ಡಾಲರ್ ಎದುರು ರೂಪಾಯಿ ಮೌಲ್ಯ 30 ಪೈಸೆ ಇಳಿಕೆ.India–Pak Tension |ದೆಹಲಿಯಲ್ಲಿ ಹೈ ಅಲರ್ಟ್ ಘೋಷಣೆ: ಸರ್ಕಾರಿ ನೌಕರರ ರಜೆ ರದ್ದು.India-Pak Tensions | ಕಾಶ್ಮೀರದಲ್ಲಿ 7 ಉಗ್ರರನ್ನು ಹೊಡೆದುರುಳಿಸಿದ ಬಿಎಸ್ಎಫ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆಯು ಪಾಕಿಸ್ತಾನದ ಉಗ್ರ ಸಂಘಟನೆಗಳನ್ನು ಗುರಿಯಾಗಿಸಿಕೊಂಡು ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆಯನ್ನು ನಡೆಸಿದ್ದಕ್ಕಾಗಿ ಕೇಂದ್ರ ಸರ್ಕಾರ ಮತ್ತು ಸಶಸ್ತ್ರ ಪಡೆಗಳಿಗೆ ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ಅಭಿನಂದನೆ ಸಲ್ಲಿಸಿದ್ದಾರೆ. </p><p>ಪಹಲ್ಗಾಮ್ ಹತ್ಯಾಕಾಂಡದಲ್ಲಿ ತಮ್ಮವರನ್ನು ಕಳೆದುಕೊಂಡ ಕುಟುಂಬಸ್ಥರಿಗೆ ಮತ್ತು ಇಡೀ ದೇಶಕ್ಕೆ ನ್ಯಾಯ ಒದಗಿಸಲು ತೆಗೆದುಕೊಳ್ಳಲಾದ ಈ ಕ್ರಮವು ಇಡೀ ದೇಶದ ಸ್ವಾಭಿಮಾನ ಮತ್ತು ಧೈರ್ಯವನ್ನು ಹೆಚ್ಚಿಸಿದೆ ಎಂದು ಭಾಗವತ್ ತಿಳಿಸಿದ್ದಾರೆ </p><p>ಪಾಕಿಸ್ತಾನದ ಭಯೋತ್ಪಾದಕರ ವಿರುದ್ಧ ತೆಗೆದುಕೊಳ್ಳುತ್ತಿರುವ ಮಿಲಿಟರಿ ಕ್ರಮವು ದೇಶದ ಭದ್ರತೆಗೆ ಅಗತ್ಯ ಮತ್ತು ಅನಿವಾರ್ಯ ಹೆಜ್ಜೆಯಾಗಿದೆ. ರಾಷ್ಟ್ರೀಯ ಬಿಕ್ಕಟ್ಟಿನ ಈ ಸಮಯದಲ್ಲಿ ಇಡೀ ದೇಶವು ಸರ್ಕಾರ ಮತ್ತು ಸಶಸ್ತ್ರ ಪಡೆಗಳೊಂದಿಗೆ ಮುಕ್ತ ಮನಸ್ಸಿನಿಂದ ನಿಂತಿದೆ ಎಂದು ಭಾಗವತ್ ಹೇಳಿದ್ದಾರೆ.</p><p>ಭಾರತದ ಗಡಿಯಲ್ಲಿ ಧಾರ್ಮಿಕ ಸ್ಥಳಗಳು ಮತ್ತು ನಾಗರಿಕ ಮನೆಗಳ ಮೇಲೆ ಪಾಕ್ ಸೇನೆ ನಡೆಸಿದ ದಾಳಿಯನ್ನು ನಾವು ಖಂಡಿಸುತ್ತೇವೆ. ಈ ದಾಳಿಗೆ ಬಲಿಯಾದವರ ಕುಟುಂಬಗಳಿಗೆ ಸಂತಾಪವನ್ನು ವ್ಯಕ್ತಪಡಿಸುತ್ತೇವೆ ಎಂದು ಅವರು ಹೇಳಿದ್ದಾರೆ. </p><p>ಈ ಬಿಕ್ಕಟ್ಟಿನ ಸಮಯದಲ್ಲಿ ಸರ್ಕಾರ ಹೊರಡಿಸುವ ಆದೇಶಗಳನ್ನು ಸಂಪೂರ್ಣವಾಗಿ ಪಾಲಿಸಬೇಕು. ಎಲ್ಲಾ ನಾಗರಿಕರು ತಮ್ಮ ದೇಶಭಕ್ತಿಯನ್ನು ಪ್ರದರ್ಶಿಸಲು ಮತ್ತು ಅಗತ್ಯವಿರುವಲ್ಲಿ ಸೈನ್ಯ ಮತ್ತು ಆಡಳಿತದೊಂದಿಗೆ ಸಹಕರಿಸಲು ಸಿದ್ಧರಾಗಿರಬೇಕು ಎಂದು ಭಾಗವತ್ ಮನವಿ ಮಾಡಿದ್ದಾರೆ.</p>.<p><strong>ಸರ್ಕಾರ, ಸೇನೆಗೆ ಬೆಂಬಲ ನೀಡಲು ಬಿಎಂಎಸ್ ಕರೆ</strong></p><p>ರಾಷ್ಟ್ರೀಯ ಸ್ವಯಂ ಸೇವಕ ಸಂಸ್ಥೆಯ (ಆರ್ಎಸ್ಎಸ್) ಅಂಗಸಂಸ್ಥೆಯಾಗಿರುವ ಭಾರತೀಯ ಮಜ್ದೂರ್ ಸಂಘ (ಬಿಎಂಎಸ್) ಎಲ್ಲ ರೀತಿಯ ಮುಷ್ಕರಗಳು, ಆಂದೋಲನಗಳನ್ನು ಮುಂದೂಡಲು ಹಾಗೂ ಸರ್ಕಾರ ಮತ್ತು ಸಶಸ್ತ್ರ ಪಡೆಗೆ ನೆರವು ನೀಡಲು ಕರೆ ನೀಡಿದೆ. </p><p>‘ಕೇಂದ್ರ ಮತ್ತು ರಾಜ್ಯ ಸರ್ಕಾರಿ ನೌಕರರು ಅತಿ ಅಗತ್ಯವಿದ್ದರೆ ಮಾತ್ರ ರಜಾ ತೆಗೆದುಕೊಳ್ಳಿ, ಈಗಾಗಲೇ ರಜೆಯಲ್ಲಿ ಇರುವವರು ರಜೆಯನ್ನು ರದ್ದುಗೊಳಿಸಿ ಕರ್ತವ್ಯಕ್ಕೆ ಹಾಜರಾಗಿ’ ಎಂದು ಬಿಎಂಎಸ್ ಮನವಿ ಮಾಡಿದೆ.</p><p>‘ಅಗತ್ಯವಿದ್ದರೆ ಅಧಿಕ ಸಮಯ, ಹೆಚ್ಚುವರಿ ಸಂಬಳವಿಲ್ಲದೆ ಕರ್ತವ್ಯಕ್ಕೆ ಹಾಜರಾಗಿ, ಯುದ್ಧದ ಸಮಯದಲ್ಲಿ ತೆಗೆದುಕೊಳ್ಳಬೇಕಾದ ಅಗತ್ಯ ಮುನ್ನೆಚ್ಚರಿಕೆ ಬಗ್ಗೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸಿ ಎಂದು ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.</p>.India-Pakistan Tensions: ಹಡಗು, ಬಂದರುಗಳಲ್ಲಿ ಭದ್ರತೆ ಹೆಚ್ಚಳ.India-Pakistan Tensions: ಗಡಿ ಭದ್ರತಾ ಪಡೆಗಳ ಮುಖ್ಯಸ್ಥರ ಜತೆ ಶಾ ಮಾತುಕತೆ.India-Pakistan Tensions: ಪಾಕ್ ದಾಳಿ ಯತ್ನ: ಜಮ್ಮುವಿಗೆ ದೌಡಾಯಿಸಿದ CM ಒಮರ್.India-Pakistan Tensions: ಅಮೆರಿಕ ಡಾಲರ್ ಎದುರು ರೂಪಾಯಿ ಮೌಲ್ಯ 30 ಪೈಸೆ ಇಳಿಕೆ.India–Pak Tension |ದೆಹಲಿಯಲ್ಲಿ ಹೈ ಅಲರ್ಟ್ ಘೋಷಣೆ: ಸರ್ಕಾರಿ ನೌಕರರ ರಜೆ ರದ್ದು.India-Pak Tensions | ಕಾಶ್ಮೀರದಲ್ಲಿ 7 ಉಗ್ರರನ್ನು ಹೊಡೆದುರುಳಿಸಿದ ಬಿಎಸ್ಎಫ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>