<p><strong>ನವದೆಹಲಿ:</strong> ‘ಭಾರತದಲ್ಲಿ ನಡೆದಿರುವ ಭಯೋತ್ಪಾದನೆ ಚಟುವಟಿಕೆ ಸಂಪೂರ್ಣವಾಗಿ ಪಾಕಿಸ್ತಾನ ಪ್ರಾಯೋಜಿತ’ ಎಂಬುದನ್ನು ಆಪರೇಷನ್ ಸಿಂಧೂರ ಬಯಲು ಮಾಡಿದೆ’ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಇಲ್ಲಿ ಪ್ರತಿಪಾದಿಸಿದರು.</p>.<p>ಬಿಎಸ್ಎಫ್ನ 22ನೇ ಸ್ಥಾಪನಾ ದಿನದ ನಿಮಿತ್ತ ಇಲ್ಲಿ ರುಸ್ತಮ್ಜೀ ಸ್ಮಾರಕ ಉಪನ್ಯಾಸ ನೀಡಿದ ಅವರು, ‘ಸಿಂಧೂರ ಕಾರ್ಯಾಚರಣೆಯಲ್ಲಿ ಬಿಎಸ್ಎಫ್ ತನ್ನ ಸಾಮರ್ಥ್ಯ ಸಾಬೀತುಪಡಿಸಿದೆ’ ಎಂದರು.</p>.<p>ಭಾರತೀಯ ಸೇನೆ ಮೊದಲಿಗೆ ಪಾಕಿಸ್ತಾನದಲ್ಲಿನ ಉಗ್ರರ ತಾಣಗಳನ್ನು ಗುರಿಯಾಗಿಸಿ ದಾಳಿ ನಡೆಸಿತು. ಆದರೆ, ಪಾಕ್ ಸೇನೆ ಇದಕ್ಕೆ ಪ್ರತಿಕ್ರಿಯೆ ನೀಡಿತು. ಈ ಬೆಳವಣಿಗೆಯು ಉಗ್ರರ ಚಟುವಟಿಕೆಗಳು ಪೂರ್ಣ ಪಾಕಿಸ್ತಾನ ಪ್ರಾಯೋಜಿತ ಎಂಬ ವಸ್ತುಸ್ಥಿತಿಯನ್ನು ಬಯಲು ಮಾಡಿತು ಎಂದು ಶಾ ವಿಶ್ಲೇಷಿಸಿದರು. </p>.<p>ಭಾರತೀಯ ಸೇನೆ ಎಂದಿಗೂ ಪಾಕ್ ಸೇನಾ ಸೌಲಭ್ಯ, ನಾಗರಿಕರ ಆಸ್ತಿಯನ್ನು ಗುರಿಯಾಗಿಸಿ ದಾಳಿ ನಡೆಸಿರಲಿಲ್ಲ. ಆದರೆ, ಪಾಕ್ ಸೇನೆ ದೇಶದ ಜನವಸತಿ ಗುರಿಯಾಗಿಸಿ ದಾಳಿ ನಡೆಸಿತು. ಹಾಗಿದ್ದೂ ದೇಶದ ರಕ್ಷಣಾ ವ್ಯವಸ್ಥೆ ಅದನ್ನು ವಿಫಲಗೊಳಿಸಿತು’ ಎಂದು ಶಾ ಶ್ಲಾಘಿಸಿದರು.</p>.<p>ಭಾರತ ಮತ್ತು ಪಾಕಿಸ್ತಾನ ಮೇ 10ರಂದು ಒಪ್ಪಂದಕ್ಕೆ ಬರುವ ಮೂಲಕ ಸೇನಾ ಸಂಘರ್ಷವನ್ನು ಕೊನೆಗಾಣಿಸಲು ತೀರ್ಮಾನಿಸಿದವು ಎಂದು ಅಮಿತ್ ಶಾ ಹೇಳಿದರು.</p>.<p>ಬಿಎಸ್ಎಫ್ ಅನ್ನು 1965ರಲ್ಲಿ ಸ್ಥಾಪಿಸಲಾಗಿದ್ದು, ಕೆ.ಎಫ್.ರುಸ್ತಮ್ಜೀ ಅವರು ಇದರ ಮೊದಲ ಪ್ರಧಾನ ನಿರ್ದೇಶಕರಾಗಿದ್ದರು. ಅವರ ನೆನಪಿಗಾಗಿ ಉಪನ್ಯಾಸ ಕಾರ್ಯಕ್ರಮ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ‘ಭಾರತದಲ್ಲಿ ನಡೆದಿರುವ ಭಯೋತ್ಪಾದನೆ ಚಟುವಟಿಕೆ ಸಂಪೂರ್ಣವಾಗಿ ಪಾಕಿಸ್ತಾನ ಪ್ರಾಯೋಜಿತ’ ಎಂಬುದನ್ನು ಆಪರೇಷನ್ ಸಿಂಧೂರ ಬಯಲು ಮಾಡಿದೆ’ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಇಲ್ಲಿ ಪ್ರತಿಪಾದಿಸಿದರು.</p>.<p>ಬಿಎಸ್ಎಫ್ನ 22ನೇ ಸ್ಥಾಪನಾ ದಿನದ ನಿಮಿತ್ತ ಇಲ್ಲಿ ರುಸ್ತಮ್ಜೀ ಸ್ಮಾರಕ ಉಪನ್ಯಾಸ ನೀಡಿದ ಅವರು, ‘ಸಿಂಧೂರ ಕಾರ್ಯಾಚರಣೆಯಲ್ಲಿ ಬಿಎಸ್ಎಫ್ ತನ್ನ ಸಾಮರ್ಥ್ಯ ಸಾಬೀತುಪಡಿಸಿದೆ’ ಎಂದರು.</p>.<p>ಭಾರತೀಯ ಸೇನೆ ಮೊದಲಿಗೆ ಪಾಕಿಸ್ತಾನದಲ್ಲಿನ ಉಗ್ರರ ತಾಣಗಳನ್ನು ಗುರಿಯಾಗಿಸಿ ದಾಳಿ ನಡೆಸಿತು. ಆದರೆ, ಪಾಕ್ ಸೇನೆ ಇದಕ್ಕೆ ಪ್ರತಿಕ್ರಿಯೆ ನೀಡಿತು. ಈ ಬೆಳವಣಿಗೆಯು ಉಗ್ರರ ಚಟುವಟಿಕೆಗಳು ಪೂರ್ಣ ಪಾಕಿಸ್ತಾನ ಪ್ರಾಯೋಜಿತ ಎಂಬ ವಸ್ತುಸ್ಥಿತಿಯನ್ನು ಬಯಲು ಮಾಡಿತು ಎಂದು ಶಾ ವಿಶ್ಲೇಷಿಸಿದರು. </p>.<p>ಭಾರತೀಯ ಸೇನೆ ಎಂದಿಗೂ ಪಾಕ್ ಸೇನಾ ಸೌಲಭ್ಯ, ನಾಗರಿಕರ ಆಸ್ತಿಯನ್ನು ಗುರಿಯಾಗಿಸಿ ದಾಳಿ ನಡೆಸಿರಲಿಲ್ಲ. ಆದರೆ, ಪಾಕ್ ಸೇನೆ ದೇಶದ ಜನವಸತಿ ಗುರಿಯಾಗಿಸಿ ದಾಳಿ ನಡೆಸಿತು. ಹಾಗಿದ್ದೂ ದೇಶದ ರಕ್ಷಣಾ ವ್ಯವಸ್ಥೆ ಅದನ್ನು ವಿಫಲಗೊಳಿಸಿತು’ ಎಂದು ಶಾ ಶ್ಲಾಘಿಸಿದರು.</p>.<p>ಭಾರತ ಮತ್ತು ಪಾಕಿಸ್ತಾನ ಮೇ 10ರಂದು ಒಪ್ಪಂದಕ್ಕೆ ಬರುವ ಮೂಲಕ ಸೇನಾ ಸಂಘರ್ಷವನ್ನು ಕೊನೆಗಾಣಿಸಲು ತೀರ್ಮಾನಿಸಿದವು ಎಂದು ಅಮಿತ್ ಶಾ ಹೇಳಿದರು.</p>.<p>ಬಿಎಸ್ಎಫ್ ಅನ್ನು 1965ರಲ್ಲಿ ಸ್ಥಾಪಿಸಲಾಗಿದ್ದು, ಕೆ.ಎಫ್.ರುಸ್ತಮ್ಜೀ ಅವರು ಇದರ ಮೊದಲ ಪ್ರಧಾನ ನಿರ್ದೇಶಕರಾಗಿದ್ದರು. ಅವರ ನೆನಪಿಗಾಗಿ ಉಪನ್ಯಾಸ ಕಾರ್ಯಕ್ರಮ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>