<p><strong>ಪುಣೆ:</strong> 'ಅಗತ್ಯವಿದ್ದಲ್ಲಿ ಸಿಂಧೂರ ಕಾರ್ಯಾಚರಣೆ 2.0ಗೆ ನಮ್ಮ ಸಶಸ್ತ್ರ ಪಡೆಗಳು ಸಂಪೂರ್ಣ ಸನ್ನದ್ಧಗೊಂಡಿವೆ' ಎಂದು ಸೇನಾ ಮುಖ್ಯಸ್ಥ ಜನಲರ್ ಉಪೇಂದ್ರ ದ್ವಿವೇದಿ ಅವರು ಶನಿವಾರ ಹೇಳಿದರು. </p>.<p>ಪುಣೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಯುದ್ಧಕ್ಕಾಗಿ ಮೂರೂ ಪಡೆಗಳು ಸಮನ್ವಯತೆ ಸಾಧಿಸಿವೆ. ಸದ್ಯ ಯುದ್ಧವು ತಾತ್ಕಾಲಿಕವಾಗಿ ನಿಂತಿರಬಹುದು. ಮೂರು ಪಡೆಗಳು ತೀವ್ರ ತಯಾರಿ ನಡೆಸಿದ್ದು, ಯುದ್ಧ ನಡೆದರೆ ಅದಕ್ಕೆ ಸಿದ್ಧವಾಗಿವೆ’ ಎಂದರು. </p>.<p>ಪಹಲ್ಗಾಮ್ನಲ್ಲಿ 26 ಜೀವಗಳನ್ನು ಬಲಿಪಡೆದ ಭಯೋತ್ಪಾದಕರ ದಾಳಿಗೆ ಪ್ರತೀಕಾರವಾಗಿ ಭಾರತವು ‘ಸಿಂಧೂರ’ ಕಾರ್ಯಾಚರಣೆ ನಡೆಸಿತು. ಈ ಕಾರ್ಯಾಚರಣೆ ಇನ್ನೂ ಮುಂದುವರಿದಿದೆ. ಆದರೆ ಈಗ ಯುದ್ಧವನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ’ ಎಂದು ಹೇಳಿದರು.</p>.<p>‘ಭವಿಷ್ಯದ ಯುದ್ಧಗಳು ಭೂಮಿ, ನೆಲ ಹಾಗೂ ವಾಯುದಾಳಿಗಳಿಗೆ ಮಾತ್ರ ಸೀಮಿತವಾಗಿರುವುದಿಲ್ಲ. ಬದಲಾಗಿ ಬಾಹ್ಯಾಕಾಶ, ಸೈಬರ್ ಸೇರಿದಂತೆ ಹಲವು ಕ್ಷೇತ್ರಗಳಿಂದ ಪ್ರಭಾವಿತವಾಗಿರುತ್ತದೆ. ಭವಿಷ್ಯದ ಸಂಘರ್ಷಗಳಲ್ಲಿ ಸಾರ್ವಜನಿಕ ನಂಬಿಕೆ ಮತ್ತು ರಾಷ್ಟ್ರೀಯ ಒಗ್ಗಟ್ಟು ನಿರ್ಣಾಯಕ ಅಂಶಗಳಾಗಿರುತ್ತವೆ’ ಎಂದೂ ಅವರು ಹೇಳಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪುಣೆ:</strong> 'ಅಗತ್ಯವಿದ್ದಲ್ಲಿ ಸಿಂಧೂರ ಕಾರ್ಯಾಚರಣೆ 2.0ಗೆ ನಮ್ಮ ಸಶಸ್ತ್ರ ಪಡೆಗಳು ಸಂಪೂರ್ಣ ಸನ್ನದ್ಧಗೊಂಡಿವೆ' ಎಂದು ಸೇನಾ ಮುಖ್ಯಸ್ಥ ಜನಲರ್ ಉಪೇಂದ್ರ ದ್ವಿವೇದಿ ಅವರು ಶನಿವಾರ ಹೇಳಿದರು. </p>.<p>ಪುಣೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಯುದ್ಧಕ್ಕಾಗಿ ಮೂರೂ ಪಡೆಗಳು ಸಮನ್ವಯತೆ ಸಾಧಿಸಿವೆ. ಸದ್ಯ ಯುದ್ಧವು ತಾತ್ಕಾಲಿಕವಾಗಿ ನಿಂತಿರಬಹುದು. ಮೂರು ಪಡೆಗಳು ತೀವ್ರ ತಯಾರಿ ನಡೆಸಿದ್ದು, ಯುದ್ಧ ನಡೆದರೆ ಅದಕ್ಕೆ ಸಿದ್ಧವಾಗಿವೆ’ ಎಂದರು. </p>.<p>ಪಹಲ್ಗಾಮ್ನಲ್ಲಿ 26 ಜೀವಗಳನ್ನು ಬಲಿಪಡೆದ ಭಯೋತ್ಪಾದಕರ ದಾಳಿಗೆ ಪ್ರತೀಕಾರವಾಗಿ ಭಾರತವು ‘ಸಿಂಧೂರ’ ಕಾರ್ಯಾಚರಣೆ ನಡೆಸಿತು. ಈ ಕಾರ್ಯಾಚರಣೆ ಇನ್ನೂ ಮುಂದುವರಿದಿದೆ. ಆದರೆ ಈಗ ಯುದ್ಧವನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ’ ಎಂದು ಹೇಳಿದರು.</p>.<p>‘ಭವಿಷ್ಯದ ಯುದ್ಧಗಳು ಭೂಮಿ, ನೆಲ ಹಾಗೂ ವಾಯುದಾಳಿಗಳಿಗೆ ಮಾತ್ರ ಸೀಮಿತವಾಗಿರುವುದಿಲ್ಲ. ಬದಲಾಗಿ ಬಾಹ್ಯಾಕಾಶ, ಸೈಬರ್ ಸೇರಿದಂತೆ ಹಲವು ಕ್ಷೇತ್ರಗಳಿಂದ ಪ್ರಭಾವಿತವಾಗಿರುತ್ತದೆ. ಭವಿಷ್ಯದ ಸಂಘರ್ಷಗಳಲ್ಲಿ ಸಾರ್ವಜನಿಕ ನಂಬಿಕೆ ಮತ್ತು ರಾಷ್ಟ್ರೀಯ ಒಗ್ಗಟ್ಟು ನಿರ್ಣಾಯಕ ಅಂಶಗಳಾಗಿರುತ್ತವೆ’ ಎಂದೂ ಅವರು ಹೇಳಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>