<p><strong>ಪುಣೆ:</strong> ಭಾರತದ ಸಶಸ್ತ್ರ ಪಡೆಗಳು ಹಾಗೂ ನಾಯಕತ್ವವು ‘ಸ್ವರಾಜ್ಯ’ ಅಥವಾ ದೇಶದ ಸಾರ್ವಭೌಮತ್ವವನ್ನು ರಕ್ಷಿಸಲು ಬದ್ಧವಾಗಿದೆ. ‘ಸಿಂಧೂರ’ ಕಾರ್ಯಾಚರಣೆ ಇದಕ್ಕೆ ಉತ್ತಮ ಉದಾಹರಣೆಯಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಹೇಳಿದರು. </p>.<p>ಇಲ್ಲಿನ ರಾಷ್ಟ್ರೀಯ ರಕ್ಷಣಾ ಅಕಾಡೆಮಿಯ ಆವರಣದಲ್ಲಿ (ಎನ್ಡಿಎ) ಮರಾಠ ಮುತ್ಸದ್ಧಿ, ಪೇಶ್ವೆ ಬಾಜಿರಾವ್–1 ಅವರ ಪ್ರತಿಮೆಯನ್ನು ಅನಾವರಣಗೊಳಿಸಿದ ಬಳಿಕ ಅವರು ಮಾತನಾಡಿದರು. </p>.<p>‘ನನಗೆ ನಕಾರಾತ್ಮಕ ಯೋಚನೆಗಳು ಬಂದಾಗೆಲ್ಲ ಛತ್ರಪತಿ ಶಿವಾಜಿ ಮಹಾರಾಜರು ಹಾಗೂ ಬಾಜಿರಾವ್ ಅವರನ್ನು ನೆನೆಯುತ್ತೇನೆ. ಎಷ್ಟೆಲ್ಲ ಪ್ರತಿಕೂಲ ಪರಿಸ್ಥಿತಿಗಳ ನಡುವೆಯೂ ಅವರು ಸ್ವರಾಜ್ಯ ಸ್ಥಾಪಿಸುವಲ್ಲಿ ಯಶಸ್ವಿಯಾಗಿದ್ದರು. ಇದೀಗ ಸ್ವರಾಜ್ಯವನ್ನು ರಕ್ಷಿಸಿಕೊಳ್ಳುವ ಜವಾಬ್ದಾರಿ ದೇಶದ 140 ಕೋಟಿ ಜನರ ಮೇಲಿದೆ’ ಎಂದರು. </p>.<p>ಎನ್ಡಿಎಯು ಸೇನಾ ನಾಯಕತ್ವದ ತರಬೇತಿ ಪಡೆಯುವ ಸ್ಥಳವಾಗಿದೆ. ಹೀಗಾಗಿ ಬಾಜಿರಾವ್ ಅವರ ಪ್ರತಿಮೆಗೆ ಇದು ಸೂಕ್ತ ಸ್ಥಳವಾಗಿದೆ. ಸ್ವರಾಜ್ಯ ಸ್ಥಾಪನೆಗಾಗಿ ನಾವು ಹೋರಾಟ ಮಾಡಿದ್ದೇವೆ. ಇದೀಗ ಅದನ್ನು ರಕ್ಷಿಸಿಕೊಳ್ಳಲು ಹೋರಾಡುವ ಸಮಯ ಬಂದಾಗ ನಮ್ಮ ಪಡೆಗಳು ಅದರಲ್ಲಿ ಯಶಸ್ವಿಯಾಗುತ್ತವೆ’ ಎಂದು ಹೇಳಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪುಣೆ:</strong> ಭಾರತದ ಸಶಸ್ತ್ರ ಪಡೆಗಳು ಹಾಗೂ ನಾಯಕತ್ವವು ‘ಸ್ವರಾಜ್ಯ’ ಅಥವಾ ದೇಶದ ಸಾರ್ವಭೌಮತ್ವವನ್ನು ರಕ್ಷಿಸಲು ಬದ್ಧವಾಗಿದೆ. ‘ಸಿಂಧೂರ’ ಕಾರ್ಯಾಚರಣೆ ಇದಕ್ಕೆ ಉತ್ತಮ ಉದಾಹರಣೆಯಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಹೇಳಿದರು. </p>.<p>ಇಲ್ಲಿನ ರಾಷ್ಟ್ರೀಯ ರಕ್ಷಣಾ ಅಕಾಡೆಮಿಯ ಆವರಣದಲ್ಲಿ (ಎನ್ಡಿಎ) ಮರಾಠ ಮುತ್ಸದ್ಧಿ, ಪೇಶ್ವೆ ಬಾಜಿರಾವ್–1 ಅವರ ಪ್ರತಿಮೆಯನ್ನು ಅನಾವರಣಗೊಳಿಸಿದ ಬಳಿಕ ಅವರು ಮಾತನಾಡಿದರು. </p>.<p>‘ನನಗೆ ನಕಾರಾತ್ಮಕ ಯೋಚನೆಗಳು ಬಂದಾಗೆಲ್ಲ ಛತ್ರಪತಿ ಶಿವಾಜಿ ಮಹಾರಾಜರು ಹಾಗೂ ಬಾಜಿರಾವ್ ಅವರನ್ನು ನೆನೆಯುತ್ತೇನೆ. ಎಷ್ಟೆಲ್ಲ ಪ್ರತಿಕೂಲ ಪರಿಸ್ಥಿತಿಗಳ ನಡುವೆಯೂ ಅವರು ಸ್ವರಾಜ್ಯ ಸ್ಥಾಪಿಸುವಲ್ಲಿ ಯಶಸ್ವಿಯಾಗಿದ್ದರು. ಇದೀಗ ಸ್ವರಾಜ್ಯವನ್ನು ರಕ್ಷಿಸಿಕೊಳ್ಳುವ ಜವಾಬ್ದಾರಿ ದೇಶದ 140 ಕೋಟಿ ಜನರ ಮೇಲಿದೆ’ ಎಂದರು. </p>.<p>ಎನ್ಡಿಎಯು ಸೇನಾ ನಾಯಕತ್ವದ ತರಬೇತಿ ಪಡೆಯುವ ಸ್ಥಳವಾಗಿದೆ. ಹೀಗಾಗಿ ಬಾಜಿರಾವ್ ಅವರ ಪ್ರತಿಮೆಗೆ ಇದು ಸೂಕ್ತ ಸ್ಥಳವಾಗಿದೆ. ಸ್ವರಾಜ್ಯ ಸ್ಥಾಪನೆಗಾಗಿ ನಾವು ಹೋರಾಟ ಮಾಡಿದ್ದೇವೆ. ಇದೀಗ ಅದನ್ನು ರಕ್ಷಿಸಿಕೊಳ್ಳಲು ಹೋರಾಡುವ ಸಮಯ ಬಂದಾಗ ನಮ್ಮ ಪಡೆಗಳು ಅದರಲ್ಲಿ ಯಶಸ್ವಿಯಾಗುತ್ತವೆ’ ಎಂದು ಹೇಳಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>