<p><strong>ಪುದಚೇರಿ</strong>: ನಾಲ್ವರು ಶಾಸಕರ ರಾಜೀನಾಮೆಯಿಂದಾಗಿ ಅಲ್ಪಮತಕ್ಕೆ ಕುಸಿದಿರುವ ಮುಖ್ಯಮಂತ್ರಿ ವಿ.ನಾರಾಯಣ ಸ್ವಾಮಿ ನೇತೃತ್ವದ ಸರ್ಕಾರಕ್ಕೆ ಸದನದಲ್ಲಿ ಬಹುಮತ ಸಾಬೀತುಪಡಿಸಲು ನಿರ್ದೇಶನ ನೀಡುವಂತೆ ಕೋರಿ ಎಐಎನ್ಆರ್ಸಿ ನೇತೃತ್ವದ ವಿರೋಧಪಕ್ಷಗಳ ನಿಯೋಗ ಬುಧವಾರ ಲೆಫ್ಟಿನೆಂಟ್ ಗವರ್ನರ್ಗೆ ಮನವಿ ಸಲ್ಲಿಸಿದೆ.</p>.<p>ಶಾಸಕ ಜಾನ್ಕುಮಾರ್ ಅವರ ರಾಜೀನಾಮೆ ಮೂಲಕ ನಾರಾಯಣಸ್ವಾಮಿ ನೇತೃತ್ವದ ಸರ್ಕಾರ ಅಲ್ಪಮತಕ್ಕೆ ಕುಸಿದಿದೆ.</p>.<p>ಹೀಗಾಗಿ, ವಿಧಾನಸಭೆಯ ವಿರೋಧ ಪಕ್ಷ ಎಐಎನ್ಆರ್ ಕಾಂಗ್ರೆಸ್ನ ಎನ್.ರಂಗಸ್ವಾಮಿ ನೇತೃತ್ವದಲ್ಲಿ 14 ಶಾಸಕರ ನಿಯೋಗ, ವಿ.ನಾರಾಯಣ ಸ್ವಾಮಿಯವರು ಬಹುಮತ ಸಾಬೀತುಪಡಿಸಲು ನಿರ್ದೇಶನ ನೀಡುವಂತೆ ಒತ್ತಾಯಿಸಿ, ಇಲ್ಲಿನ ಜಿ.ರಾಜ್ ನಿವಾಸ್ದಲ್ಲಿನ ವಿಶೇಷ ಕರ್ತವ್ಯ ಅಧಿಕಾರಿ ಜಿ. ತೇವಾನಿಧಿ ದಾಸ್ ಅವರಿಗೆ ಮನವಿ ಪತ್ರ ಸಲ್ಲಿಸಿತು.</p>.<p>ವಿಧಾನಸಭೆಯ ವಿರೋಧ ಪಕ್ಷದ ನಾಯಕ ಎನ್.ರಂಗಸಾಮಿ ಸುದ್ದಿಗಾರರೊಂದಿಗೆ ಮಾತನಾಡಿ, ‘ಸದನದಲ್ಲಿ ಬಹುಮತ ಸಾಬೀತುಪಡಿಸಲು ಮುಖ್ಯಂಮತ್ರಿಯವರಿಗೆ ನಿರ್ದೇಶನ ನೀಡುವಂತೆ ಒತ್ತಾಯಿಸಿ ವಿಶೇಷ ಕರ್ತವ್ಯ ಅಧಿಕಾರಿಗೆ ಮನವಿ ಪತ್ರ ಸಲ್ಲಿಸಿದ್ದೇವೆ‘ ಎಂದು ಹೇಳಿದರು.</p>.<p>ಮಂಗಳವಾರದ ಅಚ್ಚರಿಯ ಬೆಳವಣಿಗೆಯಲ್ಲಿ ರಾಷ್ಟ್ರಪತಿ ಭವನದ ಸೂಚನೆ ಮೇರೆಗೆ ಲೆಫ್ಟಿನೆಂಟ್ ಗವರ್ನರ್ ಕಿರಣ್ ಬೇಡಿ ಅವರನ್ನು ವಜಾಗೊಳಿಸಲಾಯಿತು. ಹೊಸ ರಾಜ್ಯಪಾಲರ ನೇಮಕವಾಗುವವರೆಗೆ ತೆಲಂಗಾಣದ ರಾಜ್ಯಪಾಲೆ ತಮಿಳ್ ಸಾಯಿ ಸೌಂದರ್ರಾಜನ್ ಅವರಿಗೆ ಉಸ್ತುವಾರಿವಹಿಸಲಾಯಿತು.</p>.<p>ಮೂಲಗಳ ಪ್ರಕಾರ ಗುರುವಾರ ತಮಿಳ್ ಸಾಯಿ ಅವರು ಪುದುಚೇರಿಯ ಲೆಫ್ಟಿನೆಂಟ್ ಗವರ್ನರ್ ಆಗಿ ಅಧಿಕಾರ ಸ್ವೀಕರಿಸಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪುದಚೇರಿ</strong>: ನಾಲ್ವರು ಶಾಸಕರ ರಾಜೀನಾಮೆಯಿಂದಾಗಿ ಅಲ್ಪಮತಕ್ಕೆ ಕುಸಿದಿರುವ ಮುಖ್ಯಮಂತ್ರಿ ವಿ.ನಾರಾಯಣ ಸ್ವಾಮಿ ನೇತೃತ್ವದ ಸರ್ಕಾರಕ್ಕೆ ಸದನದಲ್ಲಿ ಬಹುಮತ ಸಾಬೀತುಪಡಿಸಲು ನಿರ್ದೇಶನ ನೀಡುವಂತೆ ಕೋರಿ ಎಐಎನ್ಆರ್ಸಿ ನೇತೃತ್ವದ ವಿರೋಧಪಕ್ಷಗಳ ನಿಯೋಗ ಬುಧವಾರ ಲೆಫ್ಟಿನೆಂಟ್ ಗವರ್ನರ್ಗೆ ಮನವಿ ಸಲ್ಲಿಸಿದೆ.</p>.<p>ಶಾಸಕ ಜಾನ್ಕುಮಾರ್ ಅವರ ರಾಜೀನಾಮೆ ಮೂಲಕ ನಾರಾಯಣಸ್ವಾಮಿ ನೇತೃತ್ವದ ಸರ್ಕಾರ ಅಲ್ಪಮತಕ್ಕೆ ಕುಸಿದಿದೆ.</p>.<p>ಹೀಗಾಗಿ, ವಿಧಾನಸಭೆಯ ವಿರೋಧ ಪಕ್ಷ ಎಐಎನ್ಆರ್ ಕಾಂಗ್ರೆಸ್ನ ಎನ್.ರಂಗಸ್ವಾಮಿ ನೇತೃತ್ವದಲ್ಲಿ 14 ಶಾಸಕರ ನಿಯೋಗ, ವಿ.ನಾರಾಯಣ ಸ್ವಾಮಿಯವರು ಬಹುಮತ ಸಾಬೀತುಪಡಿಸಲು ನಿರ್ದೇಶನ ನೀಡುವಂತೆ ಒತ್ತಾಯಿಸಿ, ಇಲ್ಲಿನ ಜಿ.ರಾಜ್ ನಿವಾಸ್ದಲ್ಲಿನ ವಿಶೇಷ ಕರ್ತವ್ಯ ಅಧಿಕಾರಿ ಜಿ. ತೇವಾನಿಧಿ ದಾಸ್ ಅವರಿಗೆ ಮನವಿ ಪತ್ರ ಸಲ್ಲಿಸಿತು.</p>.<p>ವಿಧಾನಸಭೆಯ ವಿರೋಧ ಪಕ್ಷದ ನಾಯಕ ಎನ್.ರಂಗಸಾಮಿ ಸುದ್ದಿಗಾರರೊಂದಿಗೆ ಮಾತನಾಡಿ, ‘ಸದನದಲ್ಲಿ ಬಹುಮತ ಸಾಬೀತುಪಡಿಸಲು ಮುಖ್ಯಂಮತ್ರಿಯವರಿಗೆ ನಿರ್ದೇಶನ ನೀಡುವಂತೆ ಒತ್ತಾಯಿಸಿ ವಿಶೇಷ ಕರ್ತವ್ಯ ಅಧಿಕಾರಿಗೆ ಮನವಿ ಪತ್ರ ಸಲ್ಲಿಸಿದ್ದೇವೆ‘ ಎಂದು ಹೇಳಿದರು.</p>.<p>ಮಂಗಳವಾರದ ಅಚ್ಚರಿಯ ಬೆಳವಣಿಗೆಯಲ್ಲಿ ರಾಷ್ಟ್ರಪತಿ ಭವನದ ಸೂಚನೆ ಮೇರೆಗೆ ಲೆಫ್ಟಿನೆಂಟ್ ಗವರ್ನರ್ ಕಿರಣ್ ಬೇಡಿ ಅವರನ್ನು ವಜಾಗೊಳಿಸಲಾಯಿತು. ಹೊಸ ರಾಜ್ಯಪಾಲರ ನೇಮಕವಾಗುವವರೆಗೆ ತೆಲಂಗಾಣದ ರಾಜ್ಯಪಾಲೆ ತಮಿಳ್ ಸಾಯಿ ಸೌಂದರ್ರಾಜನ್ ಅವರಿಗೆ ಉಸ್ತುವಾರಿವಹಿಸಲಾಯಿತು.</p>.<p>ಮೂಲಗಳ ಪ್ರಕಾರ ಗುರುವಾರ ತಮಿಳ್ ಸಾಯಿ ಅವರು ಪುದುಚೇರಿಯ ಲೆಫ್ಟಿನೆಂಟ್ ಗವರ್ನರ್ ಆಗಿ ಅಧಿಕಾರ ಸ್ವೀಕರಿಸಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>