<p><strong>ನವದೆಹಲಿ:</strong> ವಿಶ್ವ ಹಿಂದೂ ಪರಿಷತ್ತಿನ (ವಿಎಚ್ಪಿ) ಕಾರ್ಯಕ್ರಮದಲ್ಲಿ ‘ವಿವಾದಿತ ಹೇಳಿಕೆ’ ನೀಡಿದ್ದ ಹೈಕೋರ್ಟ್ ನ್ಯಾಯಮೂರ್ತಿ ಶೇಖರ್ ಕುಮಾರ್ ಯಾದವ್ ಅವರನ್ನು ವಾಗ್ದಂಡನೆಗೆ ಗುರಿಪಡಿಸಲು ಕೋರಿ ಪ್ರತಿಪಕ್ಷಗಳು ರಾಜ್ಯಸಭೆಯಲ್ಲಿ ನೋಟಿಸ್ ನೀಡಿವೆ.</p>.<p>ಈ ನೋಟಿಸ್ಗೆ ವಿರೋಧಪಕ್ಷಗಳ 55 ಸದಸ್ಯರು ಸಹಿ ಹಾಕಿದ್ದಾರೆ. ಪ್ರಮುಖವಾಗಿ ಇವರಲ್ಲಿ ಕಪಿಲ್ ಸಿಬಲ್, ವಿವೇಕ್ ತಂಕಾ, ದಿಗ್ವಿಜಯ ಸಿಂಗ್, ಜಾನ್ ಬ್ರಿಟ್ಟಾಸ್, ಮನೋಜ್ ಕುಮಾರ್ ಝಾ ಮತ್ತು ಸಾಕೇತ್ ಗೋಖಲೆ ಅವರು ಸೇರಿದ್ದಾರೆ.</p>.<p>ರಾಜ್ಯಸಭೆ ಪ್ರಧಾನ ಕಾರ್ಯದರ್ಶಿ ಅವರನ್ನು ಶುಕ್ರವಾರ ಭೇಟಿಯಾಗಿದ್ದ ಸದಸ್ಯರು ನೋಟಿಸ್ ಸಲ್ಲಿಸಿದರು ಎಂದು ಮೂಲಗಳು ತಿಳಿಸಿವೆ. ನ್ಯಾಯಮೂರ್ತಿಗಳ (ವಿಚಾರಣೆ) ಕಾಯ್ದೆ 1968 ಮತ್ತು ಸಂವಿಧಾನದ ವಿಧಿ 218ರ ಅನ್ವಯ ನೋಟಿಸ್ ನೀಡಲಾಗಿದೆ. </p>.<p>ಅಲಹಾಬಾದ್ ಹೈಕೋರ್ಟ್ನ ನ್ಯಾಯಮೂರ್ತಿಯಾಗಿರುವ ಯಾದವ್ ಅವರು ಇತ್ತೀಚೆಗೆ ವಿಎಚ್ಪಿ ಕಾರ್ಯಕ್ರಮದಲ್ಲಿ ನೀಡಿರುವ ಹೇಳಿಕೆಯು ‘ಕೋಮುಸೌಹಾರ್ದಕ್ಕೆ ಧಕ್ಕೆ ಉಂಟು ಮಾಡಲಿದೆ ಮತ್ತು ಸಂವಿಧಾನದ ಉಲ್ಲಂಘನೆಯೂ ಆಗಿದೆ’ ಎಂದು ಆರೋಪಿಸಲಾಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ವಿಶ್ವ ಹಿಂದೂ ಪರಿಷತ್ತಿನ (ವಿಎಚ್ಪಿ) ಕಾರ್ಯಕ್ರಮದಲ್ಲಿ ‘ವಿವಾದಿತ ಹೇಳಿಕೆ’ ನೀಡಿದ್ದ ಹೈಕೋರ್ಟ್ ನ್ಯಾಯಮೂರ್ತಿ ಶೇಖರ್ ಕುಮಾರ್ ಯಾದವ್ ಅವರನ್ನು ವಾಗ್ದಂಡನೆಗೆ ಗುರಿಪಡಿಸಲು ಕೋರಿ ಪ್ರತಿಪಕ್ಷಗಳು ರಾಜ್ಯಸಭೆಯಲ್ಲಿ ನೋಟಿಸ್ ನೀಡಿವೆ.</p>.<p>ಈ ನೋಟಿಸ್ಗೆ ವಿರೋಧಪಕ್ಷಗಳ 55 ಸದಸ್ಯರು ಸಹಿ ಹಾಕಿದ್ದಾರೆ. ಪ್ರಮುಖವಾಗಿ ಇವರಲ್ಲಿ ಕಪಿಲ್ ಸಿಬಲ್, ವಿವೇಕ್ ತಂಕಾ, ದಿಗ್ವಿಜಯ ಸಿಂಗ್, ಜಾನ್ ಬ್ರಿಟ್ಟಾಸ್, ಮನೋಜ್ ಕುಮಾರ್ ಝಾ ಮತ್ತು ಸಾಕೇತ್ ಗೋಖಲೆ ಅವರು ಸೇರಿದ್ದಾರೆ.</p>.<p>ರಾಜ್ಯಸಭೆ ಪ್ರಧಾನ ಕಾರ್ಯದರ್ಶಿ ಅವರನ್ನು ಶುಕ್ರವಾರ ಭೇಟಿಯಾಗಿದ್ದ ಸದಸ್ಯರು ನೋಟಿಸ್ ಸಲ್ಲಿಸಿದರು ಎಂದು ಮೂಲಗಳು ತಿಳಿಸಿವೆ. ನ್ಯಾಯಮೂರ್ತಿಗಳ (ವಿಚಾರಣೆ) ಕಾಯ್ದೆ 1968 ಮತ್ತು ಸಂವಿಧಾನದ ವಿಧಿ 218ರ ಅನ್ವಯ ನೋಟಿಸ್ ನೀಡಲಾಗಿದೆ. </p>.<p>ಅಲಹಾಬಾದ್ ಹೈಕೋರ್ಟ್ನ ನ್ಯಾಯಮೂರ್ತಿಯಾಗಿರುವ ಯಾದವ್ ಅವರು ಇತ್ತೀಚೆಗೆ ವಿಎಚ್ಪಿ ಕಾರ್ಯಕ್ರಮದಲ್ಲಿ ನೀಡಿರುವ ಹೇಳಿಕೆಯು ‘ಕೋಮುಸೌಹಾರ್ದಕ್ಕೆ ಧಕ್ಕೆ ಉಂಟು ಮಾಡಲಿದೆ ಮತ್ತು ಸಂವಿಧಾನದ ಉಲ್ಲಂಘನೆಯೂ ಆಗಿದೆ’ ಎಂದು ಆರೋಪಿಸಲಾಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>