<p><strong>ನವದೆಹಲಿ:</strong> ಕಾರ್ಯಕ್ರಮವೊಂದರಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ ಅಲಹಾಬಾದ್ ಹೈಕೋರ್ಟ್ ನ್ಯಾಯಮೂರ್ತಿ ಶೇಖರ್ ಕುಮಾರ್ ಯಾದವ್ ಅವರನ್ನು ವಾಗ್ದಂಡನೆಗೆ ಗುರಿಪಡಿಸುವಂತೆ ವಿರೋಧ ಪಕ್ಷಗಳ ಹಲವು ಸದಸ್ಯರು ಶುಕ್ರವಾರ ರಾಜ್ಯಸಭೆಯಲ್ಲಿ ನೋಟಿಸ್ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.</p>.<p>ಕಪಿಲ್ ಸಿಬಲ್, ವಿವೇಕ್ ಟಂಖಾ, ದಿಗ್ವಿಜಯ ಸಿಂಗ್, ಜಾನ್ ಬ್ರಿಟ್ಟಾಸ್, ಮನೋಜ್ ಕುಮಾರ್ ಝಾ ಮತ್ತು ಸಾಕೇತ್ ಗೋಖಲೆ ಸೇರಿದಂತೆ 55 ಸಂಸದರು ವಾಗ್ದಂಡನೆ ನೋಟಿಸ್ಗೆ ಸಹಿ ಹಾಕಿದ್ದಾರೆ.</p>.<p>ಸಂಸದರು ರಾಜ್ಯಸಭಾ ಪ್ರಧಾನ ಕಾರ್ಯದರ್ಶಿಯನ್ನು ಭೇಟಿಯಾಗಿ ನೋಟಿಸ್ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.</p>.<p>ವಿಶ್ವ ಹಿಂದೂ ಪರಿಷತ್ (ವಿಎಚ್ಪಿ) ಆಯೋಜಿಸಿದ್ದ ಕಾರ್ಯಕ್ರಮವೊಂದರಲ್ಲಿ ನ್ಯಾಯಮೂರ್ತಿ ಯಾದವ್ ಅವರು ಮಾಡಿದ ಭಾಷಣವು ಸಂವಿಧಾನದ ಆಶಯಕ್ಕೆ ವಿರುದ್ಧವಾಗಿದೆ. ಅವರ ದ್ವೇಷಪೂರಿತ ಭಾಷಣ ಕೋಮು ಸೌಹಾರ್ದತೆಗೆ ಪ್ರಚೋದನೆ ನೀಡುತ್ತಿದೆ. ಅವರು ಮಾಡಿದ ಭಾಷಣದಲ್ಲಿನ ಮಾತುಗಳು ಕಳವಳ ಮೂಡಿಸುವಂತಹವು. ಆ ಮಾತುಗಳಲ್ಲಿ ಆಳವಾದ ಪೂರ್ವಗ್ರಹಗಳು ಹಾಗೂ ಅಲ್ಪಸಂಖ್ಯಾತ ಸಮುದಾಯದ ಕುರಿತ ದ್ವೇಷ ಕಾಣಿಸುತ್ತಿವೆ ಎಂದು ಎಂದು ನೋಟಿಸ್ನಲ್ಲಿ ಉಲ್ಲೇಖಿಸಲಾಗಿದೆ.</p>.<h2>ನ್ಯಾಯಾಮೂರ್ತಿ ಯಾದವ್ ಹೇಳಿದ್ದೇನು?</h2><p>ಡಿಸೆಂಬರ್ 8 ರಂದು ವಿಶ್ವ ಹಿಂದೂ ಪರಿಷತ್ (ವಿಎಚ್ಪಿ) ಆಯೋಜಿಸಿದ್ದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಶೇಖರ್ ಕುಮಾರ್ ಯಾದವ್ ‘ಇದು ಹಿಂದೂಸ್ತಾನ ಎಂದು ಹೇಳುವಲ್ಲಿ ನನಗೆ ಯಾವ ಅಳುಕೂ ಇಲ್ಲ; ಹಿಂದೂಸ್ತಾನದಲ್ಲಿ ಇರುವ ಬಹುಸಂಖ್ಯಾತರ ಇಚ್ಛೆಗೆ ಅನುಗುಣವಾಗಿ ಈ ದೇಶ ವರ್ತಿಸುತ್ತದೆ. ಇದು ಕಾನೂನು’ ಎಂದು ಹೇಳಿದ್ದರು.</p> .ಸಂಪಾದಕೀಯ Podcast | ನ್ಯಾಯಮೂರ್ತಿಯ ಅನುಚಿತ ಮಾತು; ನ್ಯಾಯಾಂಗದ ಘನತೆಗೆ ಚ್ಯುತಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಕಾರ್ಯಕ್ರಮವೊಂದರಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ ಅಲಹಾಬಾದ್ ಹೈಕೋರ್ಟ್ ನ್ಯಾಯಮೂರ್ತಿ ಶೇಖರ್ ಕುಮಾರ್ ಯಾದವ್ ಅವರನ್ನು ವಾಗ್ದಂಡನೆಗೆ ಗುರಿಪಡಿಸುವಂತೆ ವಿರೋಧ ಪಕ್ಷಗಳ ಹಲವು ಸದಸ್ಯರು ಶುಕ್ರವಾರ ರಾಜ್ಯಸಭೆಯಲ್ಲಿ ನೋಟಿಸ್ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.</p>.<p>ಕಪಿಲ್ ಸಿಬಲ್, ವಿವೇಕ್ ಟಂಖಾ, ದಿಗ್ವಿಜಯ ಸಿಂಗ್, ಜಾನ್ ಬ್ರಿಟ್ಟಾಸ್, ಮನೋಜ್ ಕುಮಾರ್ ಝಾ ಮತ್ತು ಸಾಕೇತ್ ಗೋಖಲೆ ಸೇರಿದಂತೆ 55 ಸಂಸದರು ವಾಗ್ದಂಡನೆ ನೋಟಿಸ್ಗೆ ಸಹಿ ಹಾಕಿದ್ದಾರೆ.</p>.<p>ಸಂಸದರು ರಾಜ್ಯಸಭಾ ಪ್ರಧಾನ ಕಾರ್ಯದರ್ಶಿಯನ್ನು ಭೇಟಿಯಾಗಿ ನೋಟಿಸ್ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.</p>.<p>ವಿಶ್ವ ಹಿಂದೂ ಪರಿಷತ್ (ವಿಎಚ್ಪಿ) ಆಯೋಜಿಸಿದ್ದ ಕಾರ್ಯಕ್ರಮವೊಂದರಲ್ಲಿ ನ್ಯಾಯಮೂರ್ತಿ ಯಾದವ್ ಅವರು ಮಾಡಿದ ಭಾಷಣವು ಸಂವಿಧಾನದ ಆಶಯಕ್ಕೆ ವಿರುದ್ಧವಾಗಿದೆ. ಅವರ ದ್ವೇಷಪೂರಿತ ಭಾಷಣ ಕೋಮು ಸೌಹಾರ್ದತೆಗೆ ಪ್ರಚೋದನೆ ನೀಡುತ್ತಿದೆ. ಅವರು ಮಾಡಿದ ಭಾಷಣದಲ್ಲಿನ ಮಾತುಗಳು ಕಳವಳ ಮೂಡಿಸುವಂತಹವು. ಆ ಮಾತುಗಳಲ್ಲಿ ಆಳವಾದ ಪೂರ್ವಗ್ರಹಗಳು ಹಾಗೂ ಅಲ್ಪಸಂಖ್ಯಾತ ಸಮುದಾಯದ ಕುರಿತ ದ್ವೇಷ ಕಾಣಿಸುತ್ತಿವೆ ಎಂದು ಎಂದು ನೋಟಿಸ್ನಲ್ಲಿ ಉಲ್ಲೇಖಿಸಲಾಗಿದೆ.</p>.<h2>ನ್ಯಾಯಾಮೂರ್ತಿ ಯಾದವ್ ಹೇಳಿದ್ದೇನು?</h2><p>ಡಿಸೆಂಬರ್ 8 ರಂದು ವಿಶ್ವ ಹಿಂದೂ ಪರಿಷತ್ (ವಿಎಚ್ಪಿ) ಆಯೋಜಿಸಿದ್ದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಶೇಖರ್ ಕುಮಾರ್ ಯಾದವ್ ‘ಇದು ಹಿಂದೂಸ್ತಾನ ಎಂದು ಹೇಳುವಲ್ಲಿ ನನಗೆ ಯಾವ ಅಳುಕೂ ಇಲ್ಲ; ಹಿಂದೂಸ್ತಾನದಲ್ಲಿ ಇರುವ ಬಹುಸಂಖ್ಯಾತರ ಇಚ್ಛೆಗೆ ಅನುಗುಣವಾಗಿ ಈ ದೇಶ ವರ್ತಿಸುತ್ತದೆ. ಇದು ಕಾನೂನು’ ಎಂದು ಹೇಳಿದ್ದರು.</p> .ಸಂಪಾದಕೀಯ Podcast | ನ್ಯಾಯಮೂರ್ತಿಯ ಅನುಚಿತ ಮಾತು; ನ್ಯಾಯಾಂಗದ ಘನತೆಗೆ ಚ್ಯುತಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>