<p><strong>ನವದೆಹಲಿ</strong>: ಕೇಂದ್ರ ಸರ್ಕಾರ ಜಾರಿಗೊಳಿಸಲು ಮುಂದಾಗಿರುವ ಏಕರೂಪ ನಾಗರಿಕ ಸಂಹಿತೆಯು (ಯುಸಿಸಿ) ಸಂವಿಧಾನ ಖಾತರಿಪಡಿಸಿರುವ ‘ಧಾರ್ಮಿಕ ಸ್ವಾತಂತ್ರ’ಕ್ಕೆ ವಿರುದ್ಧವಾಗಿರುವ ಕಾರಣ ಅದನ್ನು ವಿರೋಧಿಸುವುದಾಗಿ ಪ್ರಮುಖ ಮುಸ್ಲಿಂ ಧಾರ್ಮಿಕ ಸಂಘಟನೆ ‘ಜಾಮಿಯತ್ ಉಲೆಮಾ–ಇ–ಹಿಂದ್’ ತಿಳಿಸಿದೆ.</p>.<p>ಈ ವಿಚಾರವಾಗಿ ಎಲ್ಲಾ ಧರ್ಮಗಳ ಮತ್ತು ಬುಡಕಟ್ಟು ಜನಾಂಗಗಳ ಮುಖಂಡರನ್ನು ಸರ್ಕಾರ ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು ಎಂದು ಕಾನೂನು ಆಯೋಗಕ್ಕೆ ಬುಧವಾರ ಬರೆದ ಪತ್ರದಲ್ಲಿ ತಿಳಿಸಿದೆ.</p>.<p>ಜಮೈತ್ ಅಧ್ಯಕ್ಷ ಮೌಲಾನ ಅರ್ಶದ್ ಮದನಿ ಅವರು ಈ ಕುರಿತು ಬರೆದಿರುವ ಪತ್ರದಲ್ಲಿ, ‘ಯುಸಿಸಿ ಜಾರಿಯು ಕೇವಲ ಮುಸ್ಲಿಮರಿಗೆ ಸಂಬಂಧಿಸಿದ ಸಮಸ್ಯೆ ಅಲ್ಲ, ಬದಲಾಗಿ ಎಲ್ಲಾ ಭಾರತೀಯರ ಸಮಸ್ಯೆಯಾಗಿದೆ’ ಎಂದು ಹೇಳಿದ್ದಾರೆ. </p>.<p>‘ಈ ದೇಶದಲ್ಲಿ ನಾವು ಮೊದಲಿನಿಂದಲೂ ನಮ್ಮ ಧಾರ್ಮಿಕ ಆಚರಣೆಗಳನ್ನು ಸ್ವತಂತ್ರವಾಗಿ ಆಚರಿಸುತ್ತಿದ್ದೇವೆ. ನಮ್ಮ ಧಾರ್ಮಿಕ ವ್ಯವಹಾರಗಳಲ್ಲಿ ಮತ್ತು ಆರಾಧನೆಯ ವಿಧಾನಗಳಲ್ಲಿ ಯಾವುದೇ ಬದಲಾವಣೆಯನ್ನು ನಾವು ಮಾಡಿಕೊಳ್ಳುವುದಿಲ್ಲ. ಕಾನೂನು ಪರಿಮಿತಿಯೊಳಗೆ ನಮ್ಮ ಧಾರ್ಮಿಕ ಹಕ್ಕುಗಳನ್ನು ಕಾಪಾಡಿಕೊಳ್ಳಲು ಸಾಧ್ಯವಿರುವ ಎಲ್ಲಾ ಮಾರ್ಗಗಳನ್ನು ಅನುಸರಿಸುತ್ತೇವೆ’ ಎಂದು ಹೇಳಿದ್ದಾರೆ. </p>.<p>‘ಆಡಳಿತವು ಜನರ ಮೇಲೆ ಯಾವುದೇ ನಿರ್ಧಾರವನ್ನು ಹೇರಬಾರದು. ನಿರ್ಧಾರ ತೆಗೆದುಕೊಳ್ಳುವ ಮೊದಲು ಒಮ್ಮತದ ಅಭಿಪ್ರಾಯ ಮೂಡಿಸಲು ಯತ್ನಿಸಬೇಕು ಎಂಬುದನ್ನು ಜಮೈತ್ ಇಚ್ಛಿಸುತ್ತದೆ’ ಎಂದು ಹೇಳಿದ್ದಾರೆ.</p>.<p>ಕೇಂದ್ರವು ಯುಸಿಸಿ ಪ್ರಸ್ತಾವನೆ ಮಾಡಿದಾಗಿನಿಂದಲೂ ಅದು ವಿವಾದಾತ್ಮಕ ವಿಷಯವಾಗಿದೆ ಎಂದು ಹೇಳಿದ ಜಮೈತ್, ಇದು ದೇಶದ ಏಕತೆ ಮತ್ತು ಸಮಗ್ರತೆಗೆ ಧಕ್ಕೆ ತರುತ್ತದೆ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಕೇಂದ್ರ ಸರ್ಕಾರ ಜಾರಿಗೊಳಿಸಲು ಮುಂದಾಗಿರುವ ಏಕರೂಪ ನಾಗರಿಕ ಸಂಹಿತೆಯು (ಯುಸಿಸಿ) ಸಂವಿಧಾನ ಖಾತರಿಪಡಿಸಿರುವ ‘ಧಾರ್ಮಿಕ ಸ್ವಾತಂತ್ರ’ಕ್ಕೆ ವಿರುದ್ಧವಾಗಿರುವ ಕಾರಣ ಅದನ್ನು ವಿರೋಧಿಸುವುದಾಗಿ ಪ್ರಮುಖ ಮುಸ್ಲಿಂ ಧಾರ್ಮಿಕ ಸಂಘಟನೆ ‘ಜಾಮಿಯತ್ ಉಲೆಮಾ–ಇ–ಹಿಂದ್’ ತಿಳಿಸಿದೆ.</p>.<p>ಈ ವಿಚಾರವಾಗಿ ಎಲ್ಲಾ ಧರ್ಮಗಳ ಮತ್ತು ಬುಡಕಟ್ಟು ಜನಾಂಗಗಳ ಮುಖಂಡರನ್ನು ಸರ್ಕಾರ ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು ಎಂದು ಕಾನೂನು ಆಯೋಗಕ್ಕೆ ಬುಧವಾರ ಬರೆದ ಪತ್ರದಲ್ಲಿ ತಿಳಿಸಿದೆ.</p>.<p>ಜಮೈತ್ ಅಧ್ಯಕ್ಷ ಮೌಲಾನ ಅರ್ಶದ್ ಮದನಿ ಅವರು ಈ ಕುರಿತು ಬರೆದಿರುವ ಪತ್ರದಲ್ಲಿ, ‘ಯುಸಿಸಿ ಜಾರಿಯು ಕೇವಲ ಮುಸ್ಲಿಮರಿಗೆ ಸಂಬಂಧಿಸಿದ ಸಮಸ್ಯೆ ಅಲ್ಲ, ಬದಲಾಗಿ ಎಲ್ಲಾ ಭಾರತೀಯರ ಸಮಸ್ಯೆಯಾಗಿದೆ’ ಎಂದು ಹೇಳಿದ್ದಾರೆ. </p>.<p>‘ಈ ದೇಶದಲ್ಲಿ ನಾವು ಮೊದಲಿನಿಂದಲೂ ನಮ್ಮ ಧಾರ್ಮಿಕ ಆಚರಣೆಗಳನ್ನು ಸ್ವತಂತ್ರವಾಗಿ ಆಚರಿಸುತ್ತಿದ್ದೇವೆ. ನಮ್ಮ ಧಾರ್ಮಿಕ ವ್ಯವಹಾರಗಳಲ್ಲಿ ಮತ್ತು ಆರಾಧನೆಯ ವಿಧಾನಗಳಲ್ಲಿ ಯಾವುದೇ ಬದಲಾವಣೆಯನ್ನು ನಾವು ಮಾಡಿಕೊಳ್ಳುವುದಿಲ್ಲ. ಕಾನೂನು ಪರಿಮಿತಿಯೊಳಗೆ ನಮ್ಮ ಧಾರ್ಮಿಕ ಹಕ್ಕುಗಳನ್ನು ಕಾಪಾಡಿಕೊಳ್ಳಲು ಸಾಧ್ಯವಿರುವ ಎಲ್ಲಾ ಮಾರ್ಗಗಳನ್ನು ಅನುಸರಿಸುತ್ತೇವೆ’ ಎಂದು ಹೇಳಿದ್ದಾರೆ. </p>.<p>‘ಆಡಳಿತವು ಜನರ ಮೇಲೆ ಯಾವುದೇ ನಿರ್ಧಾರವನ್ನು ಹೇರಬಾರದು. ನಿರ್ಧಾರ ತೆಗೆದುಕೊಳ್ಳುವ ಮೊದಲು ಒಮ್ಮತದ ಅಭಿಪ್ರಾಯ ಮೂಡಿಸಲು ಯತ್ನಿಸಬೇಕು ಎಂಬುದನ್ನು ಜಮೈತ್ ಇಚ್ಛಿಸುತ್ತದೆ’ ಎಂದು ಹೇಳಿದ್ದಾರೆ.</p>.<p>ಕೇಂದ್ರವು ಯುಸಿಸಿ ಪ್ರಸ್ತಾವನೆ ಮಾಡಿದಾಗಿನಿಂದಲೂ ಅದು ವಿವಾದಾತ್ಮಕ ವಿಷಯವಾಗಿದೆ ಎಂದು ಹೇಳಿದ ಜಮೈತ್, ಇದು ದೇಶದ ಏಕತೆ ಮತ್ತು ಸಮಗ್ರತೆಗೆ ಧಕ್ಕೆ ತರುತ್ತದೆ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>