<p><strong>ಪಟ್ನಾ:</strong> ‘ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಸರ್ಕಾರವು ಬಂದೂಕು ಮತ್ತು ಗುಂಡುಗಳ ಸಹಾಯದಿಂದ ರಾಜ್ಯವನ್ನು ಆಳುತ್ತಿದೆ’ ಎಂದು ಆರೋಪಿಸಿ ವಿರೋಧ ಪಕ್ಷದ ಸದಸ್ಯರು ವಿಧಾನಸಭೆಯಲ್ಲಿ ಮಂಗಳವಾರ ಗದ್ದಲ ಎಬ್ಬಿಸಿದರು.</p>.<p>ಬೆಳಿಗ್ಗೆ 11 ಗಂಟೆಗೆ ಸದನ ಆರಂಭವಾದ ಕೂಡಲೇ ಗದ್ದಲ ಆರಂಭವಾಯಿತು. ಗ್ರಾಮದ ಚೌಕಿದಾರರ (ಕಾವಲುಗಾರರು) ಮೇಲಿನ ಲಾಠಿ ಪ್ರಹಾರವನ್ನು ವಿರೋಧಿಸಿ ಆರ್ಜೆಡಿ ಶಾಸಕ ಕುಮಾರ್ ಸರ್ವಜೀತ್ ಅವರು ಪ್ರತಿಭಟಿಸಿದರು.</p>.<p>‘ವೇತನ ಹೆಚ್ಚಳಕ್ಕೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ ಚೌಕಿದಾರರು ಗೃಹ ಇಲಾಖೆಯ ನೌಕರರು ಎಂಬುದನ್ನೂ ನೋಡದೆ, ಲಾಠಿ ಪ್ರಹಾರ ನಡೆಸುವ ಮೂಲಕ ಶೋಚನೀಯ ರೀತಿಯಲ್ಲಿ ನಡೆಸಿಕೊಳ್ಳಲಾಗಿದೆ’ ಎಂದು ಅವರು ಆರೋಪಿಸಿದರು.</p>.<p>ವಿರೋಧ ಪಕ್ಷದ ಇತರ ಶಾಸಕರು ತಮ್ಮ ಆಸನಗಳಿಂದ ಎದ್ದು ನಿಂತು, ‘ಬಂದೂಕು ಮತ್ತು ಗುಂಡುಗಳ ಸಹಾಯದಿಂದ ಆಡಳಿತ ನಡೆಸಲು ಅವಕಾಶ ನೀಡುವುದಿಲ್ಲ’ ಎಂದು ಘೋಷಣೆ ಕೂಗಿದರು.</p>.<p>ಇದರಿಂದ ಕೆರಳಿದ ಮುಖ್ಯಮಂತ್ರಿ ನಿತೀಶ್ ಕುಮಾರ್, ‘ಅಸಭ್ಯವಾಗಿ ಮಾತನಾಡಬೇಡಿ. ಈ ಸರ್ಕಾರ ಯಾವುದೇ ಅಡೆತಡೆಯಿಲ್ಲದೆ ನಡೆಯುತ್ತಿದೆ. ನಿಮ್ಮಲ್ಲಿ ಎಷ್ಟು ಮಂದಿ ಈಗ ಉಳಿದಿದ್ದಾರೆಂದು ನೋಡಿ’ ಎಂದು ತಿರುಗೇಟು ನೀಡಿದರು.</p>.<p>‘ನೀವು ಅಧಿಕಾರದಲ್ಲಿದ್ದಾಗ ಯಾವುದೇ ಪ್ರಯೋಜನಕಾರಿ ಕೆಲಸ ಮಾಡಲಿಲ್ಲ’ ಎಂದೂ ಆರೋಪಿಸಿದರು.</p>.<p>ಈ ಗದ್ದಲದ ನಡುವೆಯೇ, ವಿರೋಧ ಪಕ್ಷದ ಕೆಲ ಶಾಸಕರು ಸಭಾಧ್ಯಕ್ಷರ ಪೀಠದ ಎದುರಿಗೆ ತೆರಳಿ ಘೋಷಣೆ ಕೂಗಿದರು. ಈ ವೇಳೆ, ಗದ್ದಲದ ವಾತಾವರಣ ಸೃಷ್ಟಿಯಾಯಿತು. </p>.<p>‘ಚೌಕೀದಾರರ ವಿವಿಧ ಸಂಘಗಳ ಪ್ರತಿನಿಧಿಗಳೊಂದಿಗೆ ಮಾತುಕತೆ ನಡೆಸಿ, ಅವರ ಬೇಡಿಕೆಗಳನ್ನು ಪರಿಶೀಲಿಸಲಾಗುವುದು’ ಎಂದು ಸಂಸದೀಯ ವ್ಯವಹಾರಗಳ ಸಚಿವ ವಿಜಯ್ ಕುಮಾರ್ ಚೌಧರಿ ಭರವಸೆ ನೀಡಿದ ಬಳಿಕ ವಿರೋಧ ಪಕ್ಷದ ಸದಸ್ಯರು ಶಾಂತರಾದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಟ್ನಾ:</strong> ‘ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಸರ್ಕಾರವು ಬಂದೂಕು ಮತ್ತು ಗುಂಡುಗಳ ಸಹಾಯದಿಂದ ರಾಜ್ಯವನ್ನು ಆಳುತ್ತಿದೆ’ ಎಂದು ಆರೋಪಿಸಿ ವಿರೋಧ ಪಕ್ಷದ ಸದಸ್ಯರು ವಿಧಾನಸಭೆಯಲ್ಲಿ ಮಂಗಳವಾರ ಗದ್ದಲ ಎಬ್ಬಿಸಿದರು.</p>.<p>ಬೆಳಿಗ್ಗೆ 11 ಗಂಟೆಗೆ ಸದನ ಆರಂಭವಾದ ಕೂಡಲೇ ಗದ್ದಲ ಆರಂಭವಾಯಿತು. ಗ್ರಾಮದ ಚೌಕಿದಾರರ (ಕಾವಲುಗಾರರು) ಮೇಲಿನ ಲಾಠಿ ಪ್ರಹಾರವನ್ನು ವಿರೋಧಿಸಿ ಆರ್ಜೆಡಿ ಶಾಸಕ ಕುಮಾರ್ ಸರ್ವಜೀತ್ ಅವರು ಪ್ರತಿಭಟಿಸಿದರು.</p>.<p>‘ವೇತನ ಹೆಚ್ಚಳಕ್ಕೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ ಚೌಕಿದಾರರು ಗೃಹ ಇಲಾಖೆಯ ನೌಕರರು ಎಂಬುದನ್ನೂ ನೋಡದೆ, ಲಾಠಿ ಪ್ರಹಾರ ನಡೆಸುವ ಮೂಲಕ ಶೋಚನೀಯ ರೀತಿಯಲ್ಲಿ ನಡೆಸಿಕೊಳ್ಳಲಾಗಿದೆ’ ಎಂದು ಅವರು ಆರೋಪಿಸಿದರು.</p>.<p>ವಿರೋಧ ಪಕ್ಷದ ಇತರ ಶಾಸಕರು ತಮ್ಮ ಆಸನಗಳಿಂದ ಎದ್ದು ನಿಂತು, ‘ಬಂದೂಕು ಮತ್ತು ಗುಂಡುಗಳ ಸಹಾಯದಿಂದ ಆಡಳಿತ ನಡೆಸಲು ಅವಕಾಶ ನೀಡುವುದಿಲ್ಲ’ ಎಂದು ಘೋಷಣೆ ಕೂಗಿದರು.</p>.<p>ಇದರಿಂದ ಕೆರಳಿದ ಮುಖ್ಯಮಂತ್ರಿ ನಿತೀಶ್ ಕುಮಾರ್, ‘ಅಸಭ್ಯವಾಗಿ ಮಾತನಾಡಬೇಡಿ. ಈ ಸರ್ಕಾರ ಯಾವುದೇ ಅಡೆತಡೆಯಿಲ್ಲದೆ ನಡೆಯುತ್ತಿದೆ. ನಿಮ್ಮಲ್ಲಿ ಎಷ್ಟು ಮಂದಿ ಈಗ ಉಳಿದಿದ್ದಾರೆಂದು ನೋಡಿ’ ಎಂದು ತಿರುಗೇಟು ನೀಡಿದರು.</p>.<p>‘ನೀವು ಅಧಿಕಾರದಲ್ಲಿದ್ದಾಗ ಯಾವುದೇ ಪ್ರಯೋಜನಕಾರಿ ಕೆಲಸ ಮಾಡಲಿಲ್ಲ’ ಎಂದೂ ಆರೋಪಿಸಿದರು.</p>.<p>ಈ ಗದ್ದಲದ ನಡುವೆಯೇ, ವಿರೋಧ ಪಕ್ಷದ ಕೆಲ ಶಾಸಕರು ಸಭಾಧ್ಯಕ್ಷರ ಪೀಠದ ಎದುರಿಗೆ ತೆರಳಿ ಘೋಷಣೆ ಕೂಗಿದರು. ಈ ವೇಳೆ, ಗದ್ದಲದ ವಾತಾವರಣ ಸೃಷ್ಟಿಯಾಯಿತು. </p>.<p>‘ಚೌಕೀದಾರರ ವಿವಿಧ ಸಂಘಗಳ ಪ್ರತಿನಿಧಿಗಳೊಂದಿಗೆ ಮಾತುಕತೆ ನಡೆಸಿ, ಅವರ ಬೇಡಿಕೆಗಳನ್ನು ಪರಿಶೀಲಿಸಲಾಗುವುದು’ ಎಂದು ಸಂಸದೀಯ ವ್ಯವಹಾರಗಳ ಸಚಿವ ವಿಜಯ್ ಕುಮಾರ್ ಚೌಧರಿ ಭರವಸೆ ನೀಡಿದ ಬಳಿಕ ವಿರೋಧ ಪಕ್ಷದ ಸದಸ್ಯರು ಶಾಂತರಾದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>