<p><strong>ನವದೆಹಲಿ</strong>: ಲೋಕಸಭೆಗೆ ಡೆಪ್ಯುಟಿ ಸ್ಪೀಕರ್ ನೇಮಕ ಮಾಡದಿರುವುದು ಸೇರಿ ಪ್ರಧಾನಿ ಮೋದಿ ನೇತೃತ್ವದ ಸರ್ಕಾರದ ಕಾರ್ಯವೈಖರಿ ಪ್ರತಿಭಟಿಸಿ ರಾಜ್ಯಸಭಾ ಉಪಸಭಾಪತಿ ಚುನಾವಣೆ ಬಹಿಷ್ಕರಿಸಲು ವಿರೋಧ ಪಕ್ಷಗಳು ನಿರ್ಧರಿಸಿವೆ.</p>.<p>ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಈ ಕುರಿತು ಸಾಮಾಜಿಕ ಮಾಧ್ಯಮ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ.</p>.<p>‘ಮೊದಲನೆಯದಾಗಿ ಏಳು ವರ್ಷಗಳು ಕಳೆದರೂ ಲೋಕಸಭೆಗೆ ಡೆಪ್ಯುಟಿ ಸ್ಪೀಕರ್ ನೇಮಕ ಮಾಡಿಲ್ಲ. ಈ ರೀತಿ ಹಿಂದೆಂದೂ ಆಗಿರಲಿಲ್ಲ’ ಎಂದಿದ್ದಾರೆ.</p>.<p>‘ಎರಡನೆಯದಾಗಿ ಉಪಸಭಾಪತಿ ಹರಿವಂಶ್ ಅವರ ಅವಧಿ ಏಪ್ರಿಲ್ 9ಕ್ಕೆ ಅಂತ್ಯಗೊಂಡಿತ್ತು. ಮಾರನೇ ದಿನವೇ ರಾಷ್ಟ್ರಪತಿಯವರು ಅವರನ್ನು ರಾಜ್ಯಸಭಾ ಸದಸ್ಯರನ್ನಾಗಿ ನಾಮನಿರ್ದೇಶನ ಮಾಡಿದರು. ಈಗ ಅವರು ಮೂರನೇ ಅವಧಿಗೆ ಉಪಸಭಾಪತಿ ಸ್ಥಾನದ ಎನ್ಡಿಎ ಅಭ್ಯರ್ಥಿಯಾಗಿದ್ದಾರೆ’ ಎಂದಿದ್ದಾರೆ.</p>.<p>‘ಕೊನೆಯದಾಗಿ, ವಿರೋಧ ಪಕ್ಷಗಳೊಂದಿಗೆ ಸಮಾಲೋಚನೆ ನಡೆಸದೆ ಈ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದೆ. ಈ ಮೂರು ಕಾರಣಗಳು ಹಾಗೂ ಕೇಂದ್ರದ ಕಾರ್ಯವೈಖರಿಗೆ ಪ್ರತಿಭಟನೆ ವ್ಯಕ್ತಪಡಿಸುವಉದ್ದೇಶದಿಂದ ಉಪಸಭಾಪತಿ ಚುನಾವಣೆಯನ್ನು ಬಹಿಷ್ಕರಿಸಲು ವಿಪಕ್ಷಗಳು ನಿರ್ಧರಿಸಿವೆ’ ಎಂದು ಜೈರಾಮ್ ರಮೇಶ್ ಹೇಳಿದ್ದಾರೆ.</p>.<p>ಏಪ್ರಿಲ್ 17ರಂದು ರಾಜ್ಯಸಭಾ ಉಪಸಭಾಪತಿ ಚುನಾವಣೆ ನಡೆಯಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಲೋಕಸಭೆಗೆ ಡೆಪ್ಯುಟಿ ಸ್ಪೀಕರ್ ನೇಮಕ ಮಾಡದಿರುವುದು ಸೇರಿ ಪ್ರಧಾನಿ ಮೋದಿ ನೇತೃತ್ವದ ಸರ್ಕಾರದ ಕಾರ್ಯವೈಖರಿ ಪ್ರತಿಭಟಿಸಿ ರಾಜ್ಯಸಭಾ ಉಪಸಭಾಪತಿ ಚುನಾವಣೆ ಬಹಿಷ್ಕರಿಸಲು ವಿರೋಧ ಪಕ್ಷಗಳು ನಿರ್ಧರಿಸಿವೆ.</p>.<p>ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಈ ಕುರಿತು ಸಾಮಾಜಿಕ ಮಾಧ್ಯಮ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ.</p>.<p>‘ಮೊದಲನೆಯದಾಗಿ ಏಳು ವರ್ಷಗಳು ಕಳೆದರೂ ಲೋಕಸಭೆಗೆ ಡೆಪ್ಯುಟಿ ಸ್ಪೀಕರ್ ನೇಮಕ ಮಾಡಿಲ್ಲ. ಈ ರೀತಿ ಹಿಂದೆಂದೂ ಆಗಿರಲಿಲ್ಲ’ ಎಂದಿದ್ದಾರೆ.</p>.<p>‘ಎರಡನೆಯದಾಗಿ ಉಪಸಭಾಪತಿ ಹರಿವಂಶ್ ಅವರ ಅವಧಿ ಏಪ್ರಿಲ್ 9ಕ್ಕೆ ಅಂತ್ಯಗೊಂಡಿತ್ತು. ಮಾರನೇ ದಿನವೇ ರಾಷ್ಟ್ರಪತಿಯವರು ಅವರನ್ನು ರಾಜ್ಯಸಭಾ ಸದಸ್ಯರನ್ನಾಗಿ ನಾಮನಿರ್ದೇಶನ ಮಾಡಿದರು. ಈಗ ಅವರು ಮೂರನೇ ಅವಧಿಗೆ ಉಪಸಭಾಪತಿ ಸ್ಥಾನದ ಎನ್ಡಿಎ ಅಭ್ಯರ್ಥಿಯಾಗಿದ್ದಾರೆ’ ಎಂದಿದ್ದಾರೆ.</p>.<p>‘ಕೊನೆಯದಾಗಿ, ವಿರೋಧ ಪಕ್ಷಗಳೊಂದಿಗೆ ಸಮಾಲೋಚನೆ ನಡೆಸದೆ ಈ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದೆ. ಈ ಮೂರು ಕಾರಣಗಳು ಹಾಗೂ ಕೇಂದ್ರದ ಕಾರ್ಯವೈಖರಿಗೆ ಪ್ರತಿಭಟನೆ ವ್ಯಕ್ತಪಡಿಸುವಉದ್ದೇಶದಿಂದ ಉಪಸಭಾಪತಿ ಚುನಾವಣೆಯನ್ನು ಬಹಿಷ್ಕರಿಸಲು ವಿಪಕ್ಷಗಳು ನಿರ್ಧರಿಸಿವೆ’ ಎಂದು ಜೈರಾಮ್ ರಮೇಶ್ ಹೇಳಿದ್ದಾರೆ.</p>.<p>ಏಪ್ರಿಲ್ 17ರಂದು ರಾಜ್ಯಸಭಾ ಉಪಸಭಾಪತಿ ಚುನಾವಣೆ ನಡೆಯಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>