<p><strong>ಚಂಡೀಗಡ:</strong> ಪಂಜಾಬ್ ಮುಖ್ಯಮಂತ್ರಿ ಚರಣ್ಜಿತ್ ಸಿಂಗ್ ಚನ್ನಿ ಅವರ ಸಂಬಂಧಿಗೆ ಸೇರಿದ ಆಸ್ತಿ ಮೇಲೆ ಜಾರಿ ನಿರ್ದೇಶನಾಲಯ(ಇ.ಡಿ.) ನಡೆಸಿದ ದಾಳಿಯ ಕಾರಣ, ಪಂಜಾಬ್ನ ಕಾಂಗ್ರೆಸ್ ಸರ್ಕಾರವನ್ನು ಗುರಿಯಾಗಿಸಿಕೊಂಡು ವಿಪಕ್ಷಗಳು ದಾಳಿ ನಡೆಸಿವೆ. ಚನ್ನಿ ಅವರ ರಾಜೀನಾಮೆಯನ್ನು ವಿಪಕ್ಷಗಳು ಆಗ್ರಹಿಸಿವೆ.</p>.<p>ಮರಳು ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ. ಇತ್ತೀಚೆಗೆ ಚನ್ನಿ ಸಂಬಂಧಿ ನಿವಾಸದ ಮೇಲೆ ದಾಳಿ ನಡೆಸಿತ್ತು.</p>.<p>‘ಮುಖ್ಯಮಂತ್ರಿಯ ನೇತೃತ್ವದಲ್ಲೇ ರಾಜ್ಯದಲ್ಲಿ ಮರಳು ಮಾಫಿಯಾ ನಡೆಯುತ್ತಿದೆ ಎಂಬುದು ಎಡಿ ದಾಳಿಯಿಂದ ಸಾಬೀತಾಗಿದೆ. ಮರಳು ದಂದೆಯಲ್ಲಿ ತನ್ನ ಕುಟುಂಬದವರನ್ನು ಸಲಹುತ್ತಿರುವ ಕಾರಣ ಚನ್ನಿ ಅವರು ರಾಜೀನಾಮೆ ನೀಡಬೇಕು’ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ತರುಣ್ ಚುಘ್ ಆಗ್ರಹಿಸಿದ್ದಾರೆ.</p>.<p>ಮುಖ್ಯಮಂತ್ರಿ ಸಂಬಂಧಿಗೆ ಸೇರಿದ ಸ್ಥಳದಿಂದ ದೊಡ್ಡ ಮೊತ್ತವನ್ನು ಇ.ಡಿ. ವಶಪಡಿಸಿಕೊಂಡಿರುವುದು ಚನ್ನಿ ಅವರು ಮರಳು ಮಾಫಿಯಾದಲ್ಲಿ ಭಾಗಿಯಾಗಿದ್ದಾರೆ ಎಂಬುದಕ್ಕೆ ಸಾಕ್ಷಿ ಎಂದು ಅವರು ಆರೋಪಿಸಿದ್ದಾರೆ.</p>.<p>ಪ್ರಧಾನಿ ನರೇಂದ್ರ ಮೋದಿ ಅವರು ಪಂಜಾಬ್ಗೆ ಆಗಮಿಸಿದ್ದ ವೇಳೆ ಭದ್ರತಾ ಲೋಪವಾಗಿತ್ತು. ಆ ಘಟನೆಯ ಹಗೆ ತೀರಿಸಿಕೊಳ್ಳಲು ಕೇಂದ್ರ ಸರ್ಕಾರ ಇ.ಡಿ. ದಾಳಿ ನಡೆಸಿದೆ ಎಂದು ಚನ್ನಿ ಅವರು ಆರೋಪಿಸಿದ್ದಾರೆ. ಆದರೆ ಈ ಮೊಕದ್ದಮೆ 2018ರಲ್ಲೇ ದಾಖಲಾಗಿದೆ. ಈ ಮೊಕದ್ದಮೆಯ ತನಿಖೆಯನ್ನು ಇ.ಡಿ. ಸಂಪೂರ್ಣಗೊಳಿಸಿದೆ. ಮುಖ್ಯಮಂತ್ರಿ ನೈತಿಕ ಹೊಣೆಹೊತ್ತು ರಾಜೀನಾಮೆ ನೀಡಬೇಕು ಎಂದು ತರುಣ್ ಹೇಳಿದ್ದಾರೆ.</p>.<p>ಶಿರೋಮಣಿ ಅಕಾಲಿ ದಳ (ಎಸ್ಎಡಿ) ಅಧ್ಯಕ್ಷ ಸುಖ್ಬೀರ್ ಸಿಂಗ್ ಬಾದಲ್ ಕೂಡಾ ಚನ್ನಿ ಅವರ ರಾಜೀನಾಮೆಯನ್ನು ಕೇಳಿದ್ದಾರೆ. ‘ಮರಳು ಅಕ್ರಮ ಗಣಿಗಾರಿಕೆಯಲ್ಲಿ ಚನ್ನಿ ಅವರ ಪಾತ್ರವಿದೆ ಎಂಬ ಸಂದೇಹ ನಮಗೆ ಇತ್ತು. ಚನ್ನಿ ಸಂಬಂಧಿ ಮನೆಯಲ್ಲಿ ದೊಡ್ಡ ಮೊತ್ತದ<br />ಹಣವನ್ನು ಇ.ಡಿ. ವಶಪಡಿಸಿಕೊಂಡ ನಂತರ ಆ ಸಂದೇಹ ನಿಜವಾಗಿದೆ. ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರೆಯಲು ಚನ್ನಿ ಅವರಿಗೆ ನೈತಿಕ ಹಕ್ಕು ಇಲ್ಲ. ಅವರು ಕೂಡಲೇ ರಾಜೀನಾಮೆ ನೀಡಬೇಕು’ ಎಂದು ಅವರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಂಡೀಗಡ:</strong> ಪಂಜಾಬ್ ಮುಖ್ಯಮಂತ್ರಿ ಚರಣ್ಜಿತ್ ಸಿಂಗ್ ಚನ್ನಿ ಅವರ ಸಂಬಂಧಿಗೆ ಸೇರಿದ ಆಸ್ತಿ ಮೇಲೆ ಜಾರಿ ನಿರ್ದೇಶನಾಲಯ(ಇ.ಡಿ.) ನಡೆಸಿದ ದಾಳಿಯ ಕಾರಣ, ಪಂಜಾಬ್ನ ಕಾಂಗ್ರೆಸ್ ಸರ್ಕಾರವನ್ನು ಗುರಿಯಾಗಿಸಿಕೊಂಡು ವಿಪಕ್ಷಗಳು ದಾಳಿ ನಡೆಸಿವೆ. ಚನ್ನಿ ಅವರ ರಾಜೀನಾಮೆಯನ್ನು ವಿಪಕ್ಷಗಳು ಆಗ್ರಹಿಸಿವೆ.</p>.<p>ಮರಳು ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ. ಇತ್ತೀಚೆಗೆ ಚನ್ನಿ ಸಂಬಂಧಿ ನಿವಾಸದ ಮೇಲೆ ದಾಳಿ ನಡೆಸಿತ್ತು.</p>.<p>‘ಮುಖ್ಯಮಂತ್ರಿಯ ನೇತೃತ್ವದಲ್ಲೇ ರಾಜ್ಯದಲ್ಲಿ ಮರಳು ಮಾಫಿಯಾ ನಡೆಯುತ್ತಿದೆ ಎಂಬುದು ಎಡಿ ದಾಳಿಯಿಂದ ಸಾಬೀತಾಗಿದೆ. ಮರಳು ದಂದೆಯಲ್ಲಿ ತನ್ನ ಕುಟುಂಬದವರನ್ನು ಸಲಹುತ್ತಿರುವ ಕಾರಣ ಚನ್ನಿ ಅವರು ರಾಜೀನಾಮೆ ನೀಡಬೇಕು’ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ತರುಣ್ ಚುಘ್ ಆಗ್ರಹಿಸಿದ್ದಾರೆ.</p>.<p>ಮುಖ್ಯಮಂತ್ರಿ ಸಂಬಂಧಿಗೆ ಸೇರಿದ ಸ್ಥಳದಿಂದ ದೊಡ್ಡ ಮೊತ್ತವನ್ನು ಇ.ಡಿ. ವಶಪಡಿಸಿಕೊಂಡಿರುವುದು ಚನ್ನಿ ಅವರು ಮರಳು ಮಾಫಿಯಾದಲ್ಲಿ ಭಾಗಿಯಾಗಿದ್ದಾರೆ ಎಂಬುದಕ್ಕೆ ಸಾಕ್ಷಿ ಎಂದು ಅವರು ಆರೋಪಿಸಿದ್ದಾರೆ.</p>.<p>ಪ್ರಧಾನಿ ನರೇಂದ್ರ ಮೋದಿ ಅವರು ಪಂಜಾಬ್ಗೆ ಆಗಮಿಸಿದ್ದ ವೇಳೆ ಭದ್ರತಾ ಲೋಪವಾಗಿತ್ತು. ಆ ಘಟನೆಯ ಹಗೆ ತೀರಿಸಿಕೊಳ್ಳಲು ಕೇಂದ್ರ ಸರ್ಕಾರ ಇ.ಡಿ. ದಾಳಿ ನಡೆಸಿದೆ ಎಂದು ಚನ್ನಿ ಅವರು ಆರೋಪಿಸಿದ್ದಾರೆ. ಆದರೆ ಈ ಮೊಕದ್ದಮೆ 2018ರಲ್ಲೇ ದಾಖಲಾಗಿದೆ. ಈ ಮೊಕದ್ದಮೆಯ ತನಿಖೆಯನ್ನು ಇ.ಡಿ. ಸಂಪೂರ್ಣಗೊಳಿಸಿದೆ. ಮುಖ್ಯಮಂತ್ರಿ ನೈತಿಕ ಹೊಣೆಹೊತ್ತು ರಾಜೀನಾಮೆ ನೀಡಬೇಕು ಎಂದು ತರುಣ್ ಹೇಳಿದ್ದಾರೆ.</p>.<p>ಶಿರೋಮಣಿ ಅಕಾಲಿ ದಳ (ಎಸ್ಎಡಿ) ಅಧ್ಯಕ್ಷ ಸುಖ್ಬೀರ್ ಸಿಂಗ್ ಬಾದಲ್ ಕೂಡಾ ಚನ್ನಿ ಅವರ ರಾಜೀನಾಮೆಯನ್ನು ಕೇಳಿದ್ದಾರೆ. ‘ಮರಳು ಅಕ್ರಮ ಗಣಿಗಾರಿಕೆಯಲ್ಲಿ ಚನ್ನಿ ಅವರ ಪಾತ್ರವಿದೆ ಎಂಬ ಸಂದೇಹ ನಮಗೆ ಇತ್ತು. ಚನ್ನಿ ಸಂಬಂಧಿ ಮನೆಯಲ್ಲಿ ದೊಡ್ಡ ಮೊತ್ತದ<br />ಹಣವನ್ನು ಇ.ಡಿ. ವಶಪಡಿಸಿಕೊಂಡ ನಂತರ ಆ ಸಂದೇಹ ನಿಜವಾಗಿದೆ. ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರೆಯಲು ಚನ್ನಿ ಅವರಿಗೆ ನೈತಿಕ ಹಕ್ಕು ಇಲ್ಲ. ಅವರು ಕೂಡಲೇ ರಾಜೀನಾಮೆ ನೀಡಬೇಕು’ ಎಂದು ಅವರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>